AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ಸ್ಯಾಡಿಸ್ಟ್ ಸೈಕೊ ಎಂದು ಆರೋಪಿಸಿ ಪತ್ನಿ ಆತ್ಮಹತ್ಯೆ, ಮತ್ತೊಂದೆಡೆ ಗಂಡ ಕೈಕೊಟ್ಟಿದ್ದಕ್ಕೆ ಹೆಂಡತಿ ಪ್ರತಿಭಟನೆ

‘ಯು ಆರ್ ಎ ಸ್ಯಾಡಿಸ್ಟ್ ಆ್ಯಂಡ್ ಸೈಕೋ’ ‘ಯು ಆರ್ ದ ವರ್ಸ್ಟ್​ ಪರ್ಸನ್’ ಎಂದು ಡೆತ್‌ನೋಟ್ ಬರೆದಿಟ್ಟು ಇಂದುಶ್ರೀ ನೇಣಿಗೆ ಶರಣಾಗಿದ್ದಾರೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ಪತಿ ಸ್ಯಾಡಿಸ್ಟ್ ಸೈಕೊ ಎಂದು ಆರೋಪಿಸಿ ಪತ್ನಿ ಆತ್ಮಹತ್ಯೆ, ಮತ್ತೊಂದೆಡೆ ಗಂಡ ಕೈಕೊಟ್ಟಿದ್ದಕ್ಕೆ ಹೆಂಡತಿ ಪ್ರತಿಭಟನೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Mar 19, 2022 | 10:59 AM

ಬೆಂಗಳೂರು: ಪತಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲವೆಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಾಯತ್ರಿ ನಗರದಲ್ಲಿ ನಡೆದಿದೆ. ಇಂದುಶ್ರೀ ಎಂಬವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 2 ವರ್ಷದ ಪ್ರೀತಿ, 9 ತಿಂಗಳ ದಾಂಪತ್ಯ ಬಳಿಕ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಯಾದ ಬಳಿಕವೂ ಇತರ ಯುವತಿ ಜತೆ ಲವ್ವಿ ಡವ್ವಿ ಇತ್ತು ಎಂದು ಪತಿ ವಿರುದ್ಧ ಇಂದುಶ್ರೀ ಆರೋಪ ಮಾಡಿದ್ದಾರೆ. ‘ಯು ಆರ್ ಎ ಸ್ಯಾಡಿಸ್ಟ್ ಆ್ಯಂಡ್ ಸೈಕೋ’ ‘ಯು ಆರ್ ದ ವರ್ಸ್ಟ್​ ಪರ್ಸನ್’ ಎಂದು ಡೆತ್‌ನೋಟ್ ಬರೆದಿಟ್ಟು ಇಂದುಶ್ರೀ ನೇಣಿಗೆ ಶರಣಾಗಿದ್ದಾರೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ರಾಯಚೂರು: ಪ್ರೀತಿಸಿ ಮದುವೆಯಾದ ಪತಿ ಕೈಕೊಟ್ಟಿದ್ದಕ್ಕೆ ಪತ್ನಿ ಪ್ರತಿಭಟನೆ

ಪ್ರೀತಿಸಿ ಮದುವೆಯಾದ ಪತಿ ಕೈಕೊಟ್ಟಿದ್ದಕ್ಕೆ ಪತ್ನಿ ಪ್ರತಿಭಟನೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ನಡೆದಿದೆ. ಪತಿಯ ಮನೆ ಎದುರು ಪತ್ನಿ ಶಾಂತಾಬಾಯಿ ಕಣ್ಣೀರು ಹಾಕಿದ್ದಾರೆ. ಪ್ರೀತಿಸಿ ಮದುವೆಯಾಗಿದ್ದ ಪ್ರತಾಪ್ ಕೈಕೊಟ್ಟ ಆರೋಪ ಕೇಳಿಬಂದಿದೆ. ಮನೆಯಲ್ಲಿ ಬಾಡಿಗೆಗಿದ್ದವಳನ್ನೇ ಪ್ರೀತಿಸಿ ಮದುವೆಯಾಗಿದ್ದ ಪ್ರತಾಪ್ ಹಾಗೂ ಪತಿಯ ಕುಟುಂಬಸ್ಥರ ವಿರುದ್ಧ ಠಾಣೆಗೆ ದೂರು ನೀಡಿದ್ದಾರೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​ ದಾಖಲು ಮಾಡಲಾಗಿದೆ.

ಇತರ ಅಪರಾಧ ಸುದ್ದಿಗಳು

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ-4 ರ ದೊಡ್ಡೇರಿ ಗ್ರಾಮದ ಬಳಿಯ ಪಂಜಾಬಿ ಡಾಬಾದಲ್ಲಿ ಚಾಲಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವನ ಬಂಧನ ಮಾಡಲಾಗಿದೆ. ಜಮ್ಮು ಮೂಲದ ಸಂಶುದ್ದೀನ್ (42) ಬಂಧಿಸಲಾಗಿದ್ದು, 1 ಕೆ.ಜಿ. ಗಾಂಜಾ ಜಪ್ತಿ ಮಾಡಲಾಗಿದೆ.

ಚಿತ್ರದುರ್ಗ: ಮೊಳಕಾಲ್ಮೂರು ಪೊಲೀಸರಿಂದ ನಾಲ್ವರು ಕಳ್ಳರ ಬಂಧನ ಮಾಡಲಾಗಿದೆ. ಬಂಧಿತರಿಂದ 10 ಗ್ರಾಂ ಚಿನ್ನ, ನಗದು ವಶಪಡಿಸಲಾಗಿದೆ. ಮೊಳಕಾಲ್ಮೂರು ಪಟ್ಟಣದ ಅಬ್ದುಲ್ ರೆಹಮಾನ್, ವಾಸಿಂ ಅಕ್ರಂ, ಅಲ್ಲಾಭಕ್ಷ್​​, ಉಮರ್ ಫಾರುಕ್ ಬಂಧಿತ ಆರೋಪಿಗಳು.

ದಾವಣಗೆರೆ: ಇಲ್ಲಿ ಜಗಳೂರು ಕೆರೆ ತುಂಬಿಸುವ ಯೋಜನೆ ಪೈಪ್​​ಲೈನ್ ನೀರು ಜಮೀನಿಗೆ ನುಗ್ಗಿ ರೈತರು ಕಂಗಾಲಾಗಿದ್ದಾರೆ. ನೀರಾವರಿ ಇಲಾಖೆಯ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಕೇಳಿಬಂದಿದೆ.

ಇದನ್ನೂ ಓದಿ: Crime News: ವಿಚಾರಣಾಧೀನ ಖೈದಿ ಜೈಲಿನ ಮುಖ್ಯ ದ್ವಾರದಿಂದಲೇ ಎಸ್ಕೇಪ್! ಬೆಳಗಾವಿಯಲ್ಲಿ ಘಟನೆ

ಇದನ್ನೂ ಓದಿ: Crime News: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಆತ್ಮಹತ್ಯೆ ಮಾಡಿಕೊಂಡ 88 ವರ್ಷದ ವೃದ್ಧ

Published On - 10:54 am, Sat, 19 March 22

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ