ಪತಿ ಸ್ಯಾಡಿಸ್ಟ್ ಸೈಕೊ ಎಂದು ಆರೋಪಿಸಿ ಪತ್ನಿ ಆತ್ಮಹತ್ಯೆ, ಮತ್ತೊಂದೆಡೆ ಗಂಡ ಕೈಕೊಟ್ಟಿದ್ದಕ್ಕೆ ಹೆಂಡತಿ ಪ್ರತಿಭಟನೆ

‘ಯು ಆರ್ ಎ ಸ್ಯಾಡಿಸ್ಟ್ ಆ್ಯಂಡ್ ಸೈಕೋ’ ‘ಯು ಆರ್ ದ ವರ್ಸ್ಟ್​ ಪರ್ಸನ್’ ಎಂದು ಡೆತ್‌ನೋಟ್ ಬರೆದಿಟ್ಟು ಇಂದುಶ್ರೀ ನೇಣಿಗೆ ಶರಣಾಗಿದ್ದಾರೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ಪತಿ ಸ್ಯಾಡಿಸ್ಟ್ ಸೈಕೊ ಎಂದು ಆರೋಪಿಸಿ ಪತ್ನಿ ಆತ್ಮಹತ್ಯೆ, ಮತ್ತೊಂದೆಡೆ ಗಂಡ ಕೈಕೊಟ್ಟಿದ್ದಕ್ಕೆ ಹೆಂಡತಿ ಪ್ರತಿಭಟನೆ
ಪ್ರಾತಿನಿಧಿಕ ಚಿತ್ರ
Follow us
| Updated By: ganapathi bhat

Updated on:Mar 19, 2022 | 10:59 AM

ಬೆಂಗಳೂರು: ಪತಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲವೆಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಾಯತ್ರಿ ನಗರದಲ್ಲಿ ನಡೆದಿದೆ. ಇಂದುಶ್ರೀ ಎಂಬವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 2 ವರ್ಷದ ಪ್ರೀತಿ, 9 ತಿಂಗಳ ದಾಂಪತ್ಯ ಬಳಿಕ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಯಾದ ಬಳಿಕವೂ ಇತರ ಯುವತಿ ಜತೆ ಲವ್ವಿ ಡವ್ವಿ ಇತ್ತು ಎಂದು ಪತಿ ವಿರುದ್ಧ ಇಂದುಶ್ರೀ ಆರೋಪ ಮಾಡಿದ್ದಾರೆ. ‘ಯು ಆರ್ ಎ ಸ್ಯಾಡಿಸ್ಟ್ ಆ್ಯಂಡ್ ಸೈಕೋ’ ‘ಯು ಆರ್ ದ ವರ್ಸ್ಟ್​ ಪರ್ಸನ್’ ಎಂದು ಡೆತ್‌ನೋಟ್ ಬರೆದಿಟ್ಟು ಇಂದುಶ್ರೀ ನೇಣಿಗೆ ಶರಣಾಗಿದ್ದಾರೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ರಾಯಚೂರು: ಪ್ರೀತಿಸಿ ಮದುವೆಯಾದ ಪತಿ ಕೈಕೊಟ್ಟಿದ್ದಕ್ಕೆ ಪತ್ನಿ ಪ್ರತಿಭಟನೆ

ಪ್ರೀತಿಸಿ ಮದುವೆಯಾದ ಪತಿ ಕೈಕೊಟ್ಟಿದ್ದಕ್ಕೆ ಪತ್ನಿ ಪ್ರತಿಭಟನೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ನಡೆದಿದೆ. ಪತಿಯ ಮನೆ ಎದುರು ಪತ್ನಿ ಶಾಂತಾಬಾಯಿ ಕಣ್ಣೀರು ಹಾಕಿದ್ದಾರೆ. ಪ್ರೀತಿಸಿ ಮದುವೆಯಾಗಿದ್ದ ಪ್ರತಾಪ್ ಕೈಕೊಟ್ಟ ಆರೋಪ ಕೇಳಿಬಂದಿದೆ. ಮನೆಯಲ್ಲಿ ಬಾಡಿಗೆಗಿದ್ದವಳನ್ನೇ ಪ್ರೀತಿಸಿ ಮದುವೆಯಾಗಿದ್ದ ಪ್ರತಾಪ್ ಹಾಗೂ ಪತಿಯ ಕುಟುಂಬಸ್ಥರ ವಿರುದ್ಧ ಠಾಣೆಗೆ ದೂರು ನೀಡಿದ್ದಾರೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​ ದಾಖಲು ಮಾಡಲಾಗಿದೆ.

ಇತರ ಅಪರಾಧ ಸುದ್ದಿಗಳು

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ-4 ರ ದೊಡ್ಡೇರಿ ಗ್ರಾಮದ ಬಳಿಯ ಪಂಜಾಬಿ ಡಾಬಾದಲ್ಲಿ ಚಾಲಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವನ ಬಂಧನ ಮಾಡಲಾಗಿದೆ. ಜಮ್ಮು ಮೂಲದ ಸಂಶುದ್ದೀನ್ (42) ಬಂಧಿಸಲಾಗಿದ್ದು, 1 ಕೆ.ಜಿ. ಗಾಂಜಾ ಜಪ್ತಿ ಮಾಡಲಾಗಿದೆ.

ಚಿತ್ರದುರ್ಗ: ಮೊಳಕಾಲ್ಮೂರು ಪೊಲೀಸರಿಂದ ನಾಲ್ವರು ಕಳ್ಳರ ಬಂಧನ ಮಾಡಲಾಗಿದೆ. ಬಂಧಿತರಿಂದ 10 ಗ್ರಾಂ ಚಿನ್ನ, ನಗದು ವಶಪಡಿಸಲಾಗಿದೆ. ಮೊಳಕಾಲ್ಮೂರು ಪಟ್ಟಣದ ಅಬ್ದುಲ್ ರೆಹಮಾನ್, ವಾಸಿಂ ಅಕ್ರಂ, ಅಲ್ಲಾಭಕ್ಷ್​​, ಉಮರ್ ಫಾರುಕ್ ಬಂಧಿತ ಆರೋಪಿಗಳು.

ದಾವಣಗೆರೆ: ಇಲ್ಲಿ ಜಗಳೂರು ಕೆರೆ ತುಂಬಿಸುವ ಯೋಜನೆ ಪೈಪ್​​ಲೈನ್ ನೀರು ಜಮೀನಿಗೆ ನುಗ್ಗಿ ರೈತರು ಕಂಗಾಲಾಗಿದ್ದಾರೆ. ನೀರಾವರಿ ಇಲಾಖೆಯ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಕೇಳಿಬಂದಿದೆ.

ಇದನ್ನೂ ಓದಿ: Crime News: ವಿಚಾರಣಾಧೀನ ಖೈದಿ ಜೈಲಿನ ಮುಖ್ಯ ದ್ವಾರದಿಂದಲೇ ಎಸ್ಕೇಪ್! ಬೆಳಗಾವಿಯಲ್ಲಿ ಘಟನೆ

ಇದನ್ನೂ ಓದಿ: Crime News: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಆತ್ಮಹತ್ಯೆ ಮಾಡಿಕೊಂಡ 88 ವರ್ಷದ ವೃದ್ಧ

Published On - 10:54 am, Sat, 19 March 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ