AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

64ನೇ ವಯಸ್ಸಿಗೆ ಮದುವೆಯಾದ ವ್ಯಕ್ತಿಗೆ ನಿರಾಸೆ; ಒಂದೇ ತಿಂಗಳಿಗೆ ಜೀವನಾಂಶ ಕೇಳಿದ ಪತ್ನಿ

ಮದುವೆಯಾಗಿ ಸುಂದರ ಸಂಸಾರ ನಡೆಸಬೇಕೆಂದುಕೊಂಡು 64 ವರ್ಷದ ವ್ಯಕ್ತಿ 58 ವರ್ಷದ ವಿಚ್ಛೇದಿತೆ ಮಹಿಳೆಯೊಂದಿಗೆ ವಿವಾಹವಾಗಿದ್ದಾರೆ.

64ನೇ ವಯಸ್ಸಿಗೆ ಮದುವೆಯಾದ ವ್ಯಕ್ತಿಗೆ ನಿರಾಸೆ; ಒಂದೇ ತಿಂಗಳಿಗೆ ಜೀವನಾಂಶ ಕೇಳಿದ ಪತ್ನಿ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on: Nov 02, 2022 | 5:54 PM

Share

ಬೆಂಗಳೂರು: 64ನೇ ವಯಸ್ಸಿನಲ್ಲಿ ಮದುವೆಯಾಗಿ ಸುಂದರ ಸಂಸಾರ ನಡೆಸಬೇಕೆಂದುಕೊಂಡಿದ್ದ ವ್ಯಕ್ತಿಗೆ ಪತ್ನಿಯಿಂದ ನಿರಾಸೆಯಾಗಿದೆ. 2020 ಏ.29 ರಂದು 64 ವರ್ಷದ ವ್ಯಕ್ತಿ 58 ವರ್ಷದ ವಿಚ್ಛೇದಿತೆ ಮಹಿಳೆಯೊಂದಿಗೆ ವಿವಾಹವಾಗಿದ್ದಾರೆ. ಆದರೆ ಮದುವೆಯಾಗಿ ಒಂದೇ ತಿಂಗಳಿಗೆ ಸರಿಯಾಗಿ ಮೇ 29ಕ್ಕೆ ಪತ್ನಿ ಪತಿಯನ್ನು ತೊರೆದು ವಿಚ್ಛೇದನ ಹಾಗೂ ಜೀವನಾಂಶ ಕೋರಿ ಮೈಸೂರು ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನಂತರ ಮಹಿಳೆ ವಿಚ್ಛೇದನದ ಅರ್ಜಿ ಹಿಂಪಡೆದು ಜೀವನಾಂಶ ನೀಡುವಂತೆ ಕೋರಿದಳು. ಆಗ ಮೈಸೂರಿನ ನ್ಯಾಯಾಲಯ 7 ಸಾವಿರ ಜೀವನಾಂಶ ನೀಡಬೇಕೆಂದು ಆದೇಶ ಹೊರಡಿಸಿತ್ತು.

ಆಗ ವ್ಯಕ್ತಿ ಮೈಸೂರಿನ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಈಗ 67 ವರ್ಷ ಆಗಿರುವುದರಿಂದ ಜೀವನಾಂಶ ನೀಡಲು ಆಗುವುದಿಲ್ಲ. ಸಹಬಾಳ್ವೆಗೆ ಸಿದ್ಧನಿರುವುದರಿಂದ ಜೀವನಾಂಶ ವಿಧಿಸದಂತೆ ಮನವಿ ಮಾಡಿದ್ದರು.

ಆದರೆ ಹೈಕೋರ್ಟ್​ ಮಹಿಳೆ ಪರವಾಗಿ ತೀರ್ಪು ನೀಡಿದ್ದು, ವಿಚ್ಛೇದನ ಅರ್ಜಿ ಹಿಂಪಡೆದರೂ ಪತ್ನಿ ಜೀವನಾಂಶಕ್ಕೆ ಅರ್ಹಳು. ಪತ್ನಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯವಾಗಿದೆ. ಹೀಗಾಗಿ ಜೀವನಾಂಶ ನೀಡುವಂತೆ ಮೈಸೂರು ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್