AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

64ನೇ ವಯಸ್ಸಿಗೆ ಮದುವೆಯಾದ ವ್ಯಕ್ತಿಗೆ ನಿರಾಸೆ; ಒಂದೇ ತಿಂಗಳಿಗೆ ಜೀವನಾಂಶ ಕೇಳಿದ ಪತ್ನಿ

ಮದುವೆಯಾಗಿ ಸುಂದರ ಸಂಸಾರ ನಡೆಸಬೇಕೆಂದುಕೊಂಡು 64 ವರ್ಷದ ವ್ಯಕ್ತಿ 58 ವರ್ಷದ ವಿಚ್ಛೇದಿತೆ ಮಹಿಳೆಯೊಂದಿಗೆ ವಿವಾಹವಾಗಿದ್ದಾರೆ.

64ನೇ ವಯಸ್ಸಿಗೆ ಮದುವೆಯಾದ ವ್ಯಕ್ತಿಗೆ ನಿರಾಸೆ; ಒಂದೇ ತಿಂಗಳಿಗೆ ಜೀವನಾಂಶ ಕೇಳಿದ ಪತ್ನಿ
ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Nov 02, 2022 | 5:54 PM

Share

ಬೆಂಗಳೂರು: 64ನೇ ವಯಸ್ಸಿನಲ್ಲಿ ಮದುವೆಯಾಗಿ ಸುಂದರ ಸಂಸಾರ ನಡೆಸಬೇಕೆಂದುಕೊಂಡಿದ್ದ ವ್ಯಕ್ತಿಗೆ ಪತ್ನಿಯಿಂದ ನಿರಾಸೆಯಾಗಿದೆ. 2020 ಏ.29 ರಂದು 64 ವರ್ಷದ ವ್ಯಕ್ತಿ 58 ವರ್ಷದ ವಿಚ್ಛೇದಿತೆ ಮಹಿಳೆಯೊಂದಿಗೆ ವಿವಾಹವಾಗಿದ್ದಾರೆ. ಆದರೆ ಮದುವೆಯಾಗಿ ಒಂದೇ ತಿಂಗಳಿಗೆ ಸರಿಯಾಗಿ ಮೇ 29ಕ್ಕೆ ಪತ್ನಿ ಪತಿಯನ್ನು ತೊರೆದು ವಿಚ್ಛೇದನ ಹಾಗೂ ಜೀವನಾಂಶ ಕೋರಿ ಮೈಸೂರು ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನಂತರ ಮಹಿಳೆ ವಿಚ್ಛೇದನದ ಅರ್ಜಿ ಹಿಂಪಡೆದು ಜೀವನಾಂಶ ನೀಡುವಂತೆ ಕೋರಿದಳು. ಆಗ ಮೈಸೂರಿನ ನ್ಯಾಯಾಲಯ 7 ಸಾವಿರ ಜೀವನಾಂಶ ನೀಡಬೇಕೆಂದು ಆದೇಶ ಹೊರಡಿಸಿತ್ತು.

ಆಗ ವ್ಯಕ್ತಿ ಮೈಸೂರಿನ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಈಗ 67 ವರ್ಷ ಆಗಿರುವುದರಿಂದ ಜೀವನಾಂಶ ನೀಡಲು ಆಗುವುದಿಲ್ಲ. ಸಹಬಾಳ್ವೆಗೆ ಸಿದ್ಧನಿರುವುದರಿಂದ ಜೀವನಾಂಶ ವಿಧಿಸದಂತೆ ಮನವಿ ಮಾಡಿದ್ದರು.

ಆದರೆ ಹೈಕೋರ್ಟ್​ ಮಹಿಳೆ ಪರವಾಗಿ ತೀರ್ಪು ನೀಡಿದ್ದು, ವಿಚ್ಛೇದನ ಅರ್ಜಿ ಹಿಂಪಡೆದರೂ ಪತ್ನಿ ಜೀವನಾಂಶಕ್ಕೆ ಅರ್ಹಳು. ಪತ್ನಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯವಾಗಿದೆ. ಹೀಗಾಗಿ ಜೀವನಾಂಶ ನೀಡುವಂತೆ ಮೈಸೂರು ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು