AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

64ನೇ ವಯಸ್ಸಿಗೆ ಮದುವೆಯಾದ ವ್ಯಕ್ತಿಗೆ ನಿರಾಸೆ; ಒಂದೇ ತಿಂಗಳಿಗೆ ಜೀವನಾಂಶ ಕೇಳಿದ ಪತ್ನಿ

ಮದುವೆಯಾಗಿ ಸುಂದರ ಸಂಸಾರ ನಡೆಸಬೇಕೆಂದುಕೊಂಡು 64 ವರ್ಷದ ವ್ಯಕ್ತಿ 58 ವರ್ಷದ ವಿಚ್ಛೇದಿತೆ ಮಹಿಳೆಯೊಂದಿಗೆ ವಿವಾಹವಾಗಿದ್ದಾರೆ.

64ನೇ ವಯಸ್ಸಿಗೆ ಮದುವೆಯಾದ ವ್ಯಕ್ತಿಗೆ ನಿರಾಸೆ; ಒಂದೇ ತಿಂಗಳಿಗೆ ಜೀವನಾಂಶ ಕೇಳಿದ ಪತ್ನಿ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on: Nov 02, 2022 | 5:54 PM

Share

ಬೆಂಗಳೂರು: 64ನೇ ವಯಸ್ಸಿನಲ್ಲಿ ಮದುವೆಯಾಗಿ ಸುಂದರ ಸಂಸಾರ ನಡೆಸಬೇಕೆಂದುಕೊಂಡಿದ್ದ ವ್ಯಕ್ತಿಗೆ ಪತ್ನಿಯಿಂದ ನಿರಾಸೆಯಾಗಿದೆ. 2020 ಏ.29 ರಂದು 64 ವರ್ಷದ ವ್ಯಕ್ತಿ 58 ವರ್ಷದ ವಿಚ್ಛೇದಿತೆ ಮಹಿಳೆಯೊಂದಿಗೆ ವಿವಾಹವಾಗಿದ್ದಾರೆ. ಆದರೆ ಮದುವೆಯಾಗಿ ಒಂದೇ ತಿಂಗಳಿಗೆ ಸರಿಯಾಗಿ ಮೇ 29ಕ್ಕೆ ಪತ್ನಿ ಪತಿಯನ್ನು ತೊರೆದು ವಿಚ್ಛೇದನ ಹಾಗೂ ಜೀವನಾಂಶ ಕೋರಿ ಮೈಸೂರು ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನಂತರ ಮಹಿಳೆ ವಿಚ್ಛೇದನದ ಅರ್ಜಿ ಹಿಂಪಡೆದು ಜೀವನಾಂಶ ನೀಡುವಂತೆ ಕೋರಿದಳು. ಆಗ ಮೈಸೂರಿನ ನ್ಯಾಯಾಲಯ 7 ಸಾವಿರ ಜೀವನಾಂಶ ನೀಡಬೇಕೆಂದು ಆದೇಶ ಹೊರಡಿಸಿತ್ತು.

ಆಗ ವ್ಯಕ್ತಿ ಮೈಸೂರಿನ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಈಗ 67 ವರ್ಷ ಆಗಿರುವುದರಿಂದ ಜೀವನಾಂಶ ನೀಡಲು ಆಗುವುದಿಲ್ಲ. ಸಹಬಾಳ್ವೆಗೆ ಸಿದ್ಧನಿರುವುದರಿಂದ ಜೀವನಾಂಶ ವಿಧಿಸದಂತೆ ಮನವಿ ಮಾಡಿದ್ದರು.

ಆದರೆ ಹೈಕೋರ್ಟ್​ ಮಹಿಳೆ ಪರವಾಗಿ ತೀರ್ಪು ನೀಡಿದ್ದು, ವಿಚ್ಛೇದನ ಅರ್ಜಿ ಹಿಂಪಡೆದರೂ ಪತ್ನಿ ಜೀವನಾಂಶಕ್ಕೆ ಅರ್ಹಳು. ಪತ್ನಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯವಾಗಿದೆ. ಹೀಗಾಗಿ ಜೀವನಾಂಶ ನೀಡುವಂತೆ ಮೈಸೂರು ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?