AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪಾದಿಸಲು ಸಕ್ಷಮನಾಗಿರುವ ಪತಿಗೆ ಜೀವನಾಂಶ ನೀಡಬೇಕಿಲ್ಲ: ಹೈಕೋರ್ಟ್​​

ಸಂಪಾದಿಸಲು ಸಕ್ಷಮನಾಗಿರುವ ಪತಿಗೆ ಜೀವನಾಂಶ ನೀಡಬೇಕಿಲ್ಲ ಎಂದು ಹೈಕೋರ್ಟ್ ನ್ಯಾಯಮೂರ್ತಿ ಅಲೋಕ್ ಅರಾಧೆ, ನ್ಯಾಯಮೂರ್ತಿ ಯಾಜೆ.ಎಂ.ಖಾಜಿ ಅವರಿದ್ದ ಪೀಠ ಆದೇಶ ಹೊರಡಿಸಿದೆ.

ಸಂಪಾದಿಸಲು ಸಕ್ಷಮನಾಗಿರುವ ಪತಿಗೆ ಜೀವನಾಂಶ ನೀಡಬೇಕಿಲ್ಲ: ಹೈಕೋರ್ಟ್​​
ಕರ್ನಾಟಕ ಹೈಕೋರ್ಟ್
TV9 Web
| Edited By: ವಿವೇಕ ಬಿರಾದಾರ|

Updated on: Jul 11, 2022 | 9:31 PM

Share

ಬೆಂಗಳೂರು: ಸಂಪಾದಿಸಲು ಸಕ್ಷಮನಾಗಿರುವ ಪತಿಗೆ ಜೀವನಾಂಶ ನೀಡಬೇಕಿಲ್ಲ ಎಂದು ಹೈಕೋರ್ಟ್ ನ್ಯಾಯಮೂರ್ತಿ ಅಲೋಕ್ ಅರಾಧೆ, ನ್ಯಾಯಮೂರ್ತಿ ಯಾಜೆ.ಎಂ.ಖಾಜಿ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಪತ್ನಿಯಿಂದ ಶಾಶ್ವತ ಜೀವನಾಂಶ ಕೋರಿ ಪತಿ  ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ. ದಂಪತಿ 1994ರಿಂದಲೂ ಬೇರೆಯಾಗಿ ವಾಸಿಸುತ್ತಿದ್ದರು. ಸೆಕ್ಯೂರಿಟಿ ಗಾರ್ಡ್ ಆಗಿದ್ದ ಪತಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದನು. ಕೆಲಸ ಬಿಟ್ಟಿರುವುದಾಗಿ ಪತ್ನಿಯಿಂದ ಜೀವನಾಂಶ ಕೋರಿ ಪತಿ ಅರ್ಜಿ ಸಲ್ಲಿಸಿದ್ದನು.

ಪತ್ನಿ ಸಹಕಾರಿ ಬ್ಯಾಂಕ್ ಉದ್ಯೋಗಿಯಾಗಿದ್ದು 8000 ಸಂಬಳವಿತ್ತು. ಈ ಮುಂಚೆ ಉಡುಪಿಯ ಕೋರ್ಟ್ ವಿಚ್ಛೇದನ ನೀಡಿ ಜೀವನಾಂಶ ನಿರಾಕರಿಸಿತ್ತು. ಜೀವನಾಂಶ ಕೋರಿ ಪತಿ ಹೈಕೋರ್ಟ್ ಮೆಟ್ಟಿಲೇರಿದ್ದನು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​​ 15 ವರ್ಷದ ಮಗನನ್ನು ಪತ್ನಿಯೇ ನೋಡಿಕೊಳ್ಳುತ್ತಿದ್ದಾಳೆ. ಪತಿ ಸಂಪಾದಿಸಲು ಸಕ್ಷಮವಾದ ದೇಹದಾರ್ಢ್ಯ ಹೊಂದಿದ್ದಾನೆ. ಅಲ್ಲದೇ ಪತಿಗೆ ಪಿತ್ರಾರ್ಜಿತ ಮನೆ, ಆಸ್ತಿಯಲ್ಲಿ ಪಾಲಿರುವ ಹಿನ್ನೆಲೆ ಜೀವನಾಂಶ ಕೋರಿದ್ದ ಪತಿಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಕಾವೇರಿಯ ಅವಹೇಳನ ಪ್ರಕರಣ ದಾಖಲು

ಕೊಡಗು: ಕನ್ನಡ ನಾಡಿನ ಜೀವನದಿ ಕಾವೇರಿ ನದಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್​​ ಹಾಕಿದ್ದ ಮಹಮ್ಮದ್ ಅಸ್ಫಾಕ್ ಎಂಬಾತನ ವಿರುದ್ಧ ಕೊಡಗಿನ ವಿವಿಧ ಪೊಲೀಸ್​ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ವಿವಿಧ ಸಂಘಟನೆಗಳಿಂದ ಅಸ್ಫಾಕ್ ವಿರುದ್ಧ ದೂರು ನೀಡಲಾಗಿದೆ. ಇನ್ಸ್ಟಾಗ್ರಾಂ ನಲ್ಲಿ ಕಾವೇರಿ ಮಾತೆ ಬಗ್ಗೆ ತುಚ್ಛವಾಗಿ ಟೀಕೆ ಮಾಡಲಾಗಿತ್ತು. ಸಂಘಟನೆಗಳು ದುಷ್ಕರ್ಮಿ‌ ಬಂಧನಕ್ಕೆ ಪೊಲೀಸರಿಗೆ ಗಡುವು ನೀಡಿವೆ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ