AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಒತ್ತುವರಿಯಾದ ಕೆರೆಗಳ ಮಾಹಿತಿ ಕೊಡುತ್ತೇನೆ: ಸಚಿವ ಆರ್.ಅಶೋಕ್

ರಾಜಧಾನಿಯಲ್ಲಿಒತ್ತುವರಿಯಾದ ಕೆರೆಗಳ ಮಾಹಿತಿ ಕೊಡುತ್ತೇನೆ ಎಂದು ವಿಧಾನಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ರಾಜಧಾನಿಯಲ್ಲಿ ಒತ್ತುವರಿಯಾದ ಕೆರೆಗಳ ಮಾಹಿತಿ ಕೊಡುತ್ತೇನೆ: ಸಚಿವ ಆರ್.ಅಶೋಕ್
ಸಚಿವ ಆರ್​ ಅಶೋಕ
TV9 Web
| Edited By: ವಿವೇಕ ಬಿರಾದಾರ|

Updated on:Sep 14, 2022 | 4:59 PM

Share

ಬೆಂಗಳೂರು: ರಾಜಧಾನಿಯಲ್ಲಿ ಒತ್ತುವರಿಯಾದ ಕೆರೆಗಳ (Lake Encroachment) ಮಾಹಿತಿ ಕೊಡುತ್ತೇನೆ ಎಂದು ವಿಧಾನಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ (R Ashok) ಹೇಳಿದ್ದಾರೆ. ಕೆರೆ ಒತ್ತುವರಿ ಮಾಡಿಕೊಂಡವರಿಗೆ ಶಿಕ್ಷೆ ಆಗಬೇಕಲ್ಲವೇ? ಕೆರೆಗಳನ್ನು ಮುಚ್ಚಿದ ಕಾರಣಕ್ಕೆ ಇಂತಹ ಪರಿಸ್ಥಿತಿ ಬಂದಿದೆ. ಅದು ಬಿಟ್ಟು ನಮ್ಮ ಮೇಲೆ ಆರೋಪ ಮಾಡಿದರೆ ಹೇಗೆ? ಎಂದು ಪ್ರತಿಪ್ರಕ್ಷಗಳಿಗೆ ಪ್ರಶ್ನಿಸಿದ್ದಾರೆ.

ಬ್ರ್ಯಾಂಡ್ ಬೆಂಗಳೂರು ಹಾಳಾದರೆ ನಮಗೆ ಕೆಟ್ಟ ಹೆಸರು. ಬೆಂಗಳೂರಿನಲ್ಲಿ ಸುಮಾರು 30 ಕೆರೆಗಳನ್ನು ಮುಚ್ಚಹಾಕಲಾಗಿದೆ. ಒತ್ತುವರಿ ಆದಾಗ ಅಂದಿನ ಸರ್ಕಾರ ಏನು ಮಾಡುತ್ತಿತ್ತು? ಒಣಗಿರುವ ಕೆರೆ ಮುಚ್ಚಲು ಸಂಪುಟ ಒಪ್ಪಿಗೆ ಪಡೆಯಲಾಗಿದೆ. ಈ ತಪ್ಪು ನಿರ್ಧಾರದಿಂದಾಗಿ ನಾವು ಸಮಸ್ಯೆ ಎದುರಿಸುತ್ತಿದ್ದೇವೆ ಎಂದರು.

ಸಿಂಗಾಪುರ ಕೆರೆಯ ತೂಬುಕಾಲುವೆ ಒತ್ತುವರಿ ತೆರವು ಕಾರ್ಯ: ಬಿಬಿಎಂಪಿ ಮಾಜಿ ಸದ್ಯಸೆ ​ಪತಿಯಿಂದ ಗಲಾಟೆ

ರಾಜಧಾನಿಯಲ್ಲಿ ಕೆರೆ, ರಾಜಕಾಲುವೆ ಒತ್ತುವರಿ ತೆರವು ಕಾರ್ಯ ಭರಪೂರದಿಂದ ಸಾಗುತ್ತಿದ್ದು, ಬೆಂಗಳೂರಿನ ಸಿಂಗಾಪುರ ಕೆರೆಯ ತೂಬುಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಕಟ್ಟಲಾದ ಕಟ್ಟಡವನ್ನು ತೆರವು ಕಾರ್ಯ ವೇಳೆ ಹೈಡ್ರಾಮಾ ನಡೆದಿದೆ. ತೂಬುಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಲ್ಯಾಂಡ್ ಮಾರ್ಕ್ ಡ್ರೀಮ್ ಅಪಾರ್ಟ್​ಮೆಂಟ್ ಕಟ್ಟಲಾಗಿತ್ತು.

ಹೀಗಾಗಿ ಬಿಬಿಎಂಪಿ ಸಿಬ್ಬಂದಿಯಿಂದ ಒತ್ತುವರಿಯಾದ 2.4 ಮೀಟರ್​​ 7 ಅಡಿ ಜಾಗವನ್ನು ತೆರವು ಮಾಡಲಾಗುತ್ತಿತ್ತು. ಈ ಲ್ಯಾಂಡ್ ಮಾರ್ಕ್ ಡ್ರೀಮ್ ಅಪಾರ್ಟ್​ಮೆಂಟ್ ಮಹಾನಗರಪಾಲಿಕೆ ಮಾಜಿ ಸದಸ್ಯೆ ನಂದಿನಿ ಪತಿ ಶ್ರೀನಿವಾಸ್​ಗೆ ಸೇರಿದ್ದಾಗಿದೆ. ಹಾಗಾಗಿ ತೂಬುಕಾಲುವೆ ತೆರವು ಕಾರ್ಯಾಚರಣೆ ವೇಳೆ ಶ್ರೀನಿವಾಸ್ ಗಲಾಟೆ ಮಾಡಿದ್ದಾನೆ. ಯಾಕೆ ಹೊಡೆಯುತ್ತಿದ್ದೀರಿ ಎಂದು ರಂಪಾಟ ಮಾಡಿದ್ದಲ್ಲದೇ ಮಾದ್ಯಮಗಳ ಜೊತೆ ಗಲಾಟೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 4:51 pm, Wed, 14 September 22

Follow Us
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು