AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕ್ಯಾಂಪಸ್​ಗೆ ಜಾಗ ಕೊಟ್ಟು, ಪ್ಲಾನ್​ಗೆ ಅನುಮೋದನೆ ನೀಡಿದ್ದು ಬಿಬಿಎಂಪಿ; ಒತ್ತುವರಿ ಆರೋಪದ ಬಗ್ಗೆ ವಿಪ್ರೋ ಪ್ರತಿಕ್ರಿಯೆ

ಅತಿಕ್ರಮಣ ಮಾಡಿರುವವರ ಪಟ್ಟಿಯಲ್ಲಿ ವಿಪ್ರೋ ಹೆಸರೂ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಕಂಪನಿಯು ಇದೀಗ ಸ್ಪಷ್ಟನೆ ನೀಡಿದೆ.

ಬೆಂಗಳೂರು ಕ್ಯಾಂಪಸ್​ಗೆ ಜಾಗ ಕೊಟ್ಟು, ಪ್ಲಾನ್​ಗೆ ಅನುಮೋದನೆ ನೀಡಿದ್ದು ಬಿಬಿಎಂಪಿ; ಒತ್ತುವರಿ ಆರೋಪದ ಬಗ್ಗೆ ವಿಪ್ರೋ ಪ್ರತಿಕ್ರಿಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 15, 2022 | 9:55 AM

Share

ಬೆಂಗಳೂರು: ಐಟಿ ಕ್ಷೇತ್ರದ ದೈತ್ಯ ಕಂಪನಿ ವಿಪ್ರೊ (Wipro) ಒತ್ತುವರಿ ಆರೋಪಗಳನ್ನು ಸಾರಾಸಗಟಾಗಿ ನಿರಾಕರಿಸಿದೆ. ಬೆಂಗಳೂರಿನ ದೊಡ್ಡಕನ್ನಳ್ಳಿಯಲ್ಲಿ ಬಿಬಿಎಂಪಿ ಮಂಜೂರು ಮಾಡಿದ ಪ್ರದೇಶದಲ್ಲಿಯೇ ಕ್ಯಾಂಪಸ್ ನಿರ್ಮಿಸಲಾಗಿದೆ. ನಿರ್ಮಾಣ ಪ್ರಸ್ತಾವಕ್ಕೂ ಬಿಬಿಎಂಪಿ ಅನುಮೋದನೆ ಪಡೆದುಕೊಳ್ಳಲಾಗಿದೆ ಎಂದು ವಿಪ್ರೋ ಹೇಳಿದೆ. ಬೆಂಗಳೂರಿನ ರಸ್ತೆಗಳ ಮೇಲೆ ನೀರು ಹರಿದು, ಮನೆಗಳಿಗೆ ನೀರು ನುಗ್ಗಿದ ಸಮಸ್ಯೆಗಳಿಗೆ ರಾಜಕಾಲುವೆ ಅತಿಕ್ರಮಣವೇ ಕಾರಣ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅತಿಕ್ರಮಣ ಮಾಡಿರುವವರ ಪಟ್ಟಿಯಲ್ಲಿ ವಿಪ್ರೋ ಹೆಸರೂ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಕಂಪನಿಯು ಇದೀಗ ಸ್ಪಷ್ಟನೆ ನೀಡಿದೆ.

ಬಿಬಿಎಂಪಿ ಕಲೆಹಾಕಿದ್ದ ಪಟ್ಟಿಯಲ್ಲಿ ಹಲವು ಹೈಪ್ರೊಫೈಲ್ ಡೆವಲಪರ್​ಗಳು, ಬೃಹತ್ ಐಟಿ ಕಂಪನಿಗಳು ಮತ್ತು ಆಸ್ಪತ್ರೆಗಳ ಹೆಸರು ಕಾಣಿಸಿಕೊಂಡಿತ್ತು. ಇವರೆಲ್ಲರೂ ಸೇರಿ ಸುಮಾರು 700 ಸ್ಥಳಗಳಲ್ಲಿ ರಾಜಕಾಲುವೆ ಮುಚ್ಚಿಹಾಕುವುದು ಅಥವಾ ಒತ್ತುವರಿ ಮಾಡುವ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ಆಗಸ್ಟ್ 17ರ ಬಿಬಿಎಂಪಿ ಅಧಿಕಾರಿಗಳ ಟಿಪ್ಪಣಿಯಲ್ಲಿಯೂ ಐಟಿ ಕಂಪನಿಗಳು, ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಂದ 15 ಕಡೆ ಅತಿಕ್ರಮಣ ನಡೆದಿದೆ ಎಂದು ಹೆಸರಿಸಲಾಗಿತ್ತು.

ಬಿಬಿಎಂಪಿ ಪಟ್ಟಿಯಲ್ಲಿ ಪ್ರೆಸ್ಟೀಜ್, ಬಾಗ್ಮನೆ ಟೆಕ್ ಪಾರ್ಕ್, ಕೊಲಂಬಿಯಾ ಏಷ್ಯಾ ಆಸ್ಪತ್ರೆ, ಇಕೋ ಸ್ಪೇಸ್, ಗೋಪಾಲನ್, ಸಲಾರ್​ ಪುರಿಯಾ, ವಿಪ್ರೊ ಮತ್ತು ಕಾಂಗ್ರೆಸ್ ಮುಖಂಡ ಹ್ಯಾರಿಸ್ ನಲಪಾಡ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಹೆಸರು ಸೇರಿತ್ತು. ತಾನು ಅತಿಕ್ರಮಣ ಮಾಡಿಲ್ಲ ಎಂದು ವಿಪ್ರೋ ಇದೀಗ ಸ್ಪಷ್ಟಪಡಿಸಿದೆ. ಬಿಬಿಎಂಪಿ ಪಟ್ಟಿಯಲ್ಲಿ ಕಂಪನಿಯ ಹೆಸರು ಸೇರಿಸಲಾಗಿದೆ. ಆದರೆ ಬಿಬಿಎಂಪಿಯ ಅನುಮೋದನೆಯೊಂದಿಗೆ ಕ್ಯಾಂಪಸ್​ ಕಟ್ಟಲಾಗಿದೆ ಎಂದು ವಿಪ್ರೋ ಹೇಳಿದೆ.

‘ನಾವು ಕಾನೂನಿಗೆ ಬದ್ಧವಾಗಿಯೇ ವ್ಯವಹಾರಗಳನ್ನು ನಿರ್ವಹಿಸುತ್ತಿದ್ದೇವೆ. ದೊಡ್ಡಕನ್ನಳ್ಳಿಯಲ್ಲಿರುವ ವಿಪ್ರೋ ಕ್ಯಾಂಪಸ್ ಸಹ ಬಿಬಿಎಂಪಿಯಿಂದ ಮಂಜೂರಾದ ನಕಾಶೆಗೆ ಮತ್ತು ಪ್ಲಾನ್​ಗೆ ಅನುಗುಣವಾಗಿಯೇ ಇದೆ. ಬಿಬಿಎಂಪಿಯಿಂದ ನಮಗೆ ಯಾವುದೇ ನೋಟಿಸ್ ಬಂದಿಲ್ಲ’ ಎಂದು ಕಂಪನಿ ಹೇಳಿದೆ.

ಮಳೆ ನೀರಿನ ಸಹಜ ಹರಿವಿಗೆ ತಡೆಯೊಡ್ಡಿ ಪ್ರವಾಹಕ್ಕೆ ಕಾರಣವಾದ ಅತಿಕ್ರಮಣಗಳ ತೆರವಿಗೆ ಮುಂದಾಗಿರುವ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ಬೆಂಗಳೂರಿನ ವಿವಿಧೆಡೆ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದಾರೆ. ಮಹದೇವಪುರ ವಲಯದ ಹಲವೆಡೆ ವರದಿಯಾದ ಭಾರೀ ಪ್ರವಾಹಕ್ಕೆ ಟೆಕ್ ಕಂಪನಿಗಳ ಅತಿಕ್ರಮಣವೇ ಮುಖ್ಯ ಕಾರಣ ಎಂದು ದೂರಲಾಗಿತ್ತು.

Published On - 9:55 am, Thu, 15 September 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ