AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಭಾರಿ ಮಳೆಗೆ ವಿಪ್ರೊ ಕಂಪನಿಯ ಕಾಂಪೌಂಡ್ ಕುಸಿತ!

ಬೆಂಗಳೂರಿನಲ್ಲಿ ಮತ್ತೊಂದು ಬಹುಮಹಡಿ ಕಟ್ಟಡ ವಾಲಿದೆ. ಏಳು ಅಂತಸ್ತಿನ ಕಟ್ಟಡ ಕುಸಿಯುವ ಹಂತದಲ್ಲಿದೆ. ಬಿನ್ನಿಮಿಲ್ ವೃತ್ತದ ಬಳಿಯ ಪೊಲೀಸ್ ಕ್ವಾರ್ಟಸ್​ನ ಕಟ್ಟಡ ಕುಸಿಯುವ ಹಂತದಲ್ಲಿದ್ದು, ಕ್ವಾರ್ಟಸ್​ನಲ್ಲಿ 32 ಕುಟುಂಬಗಳು ವಾಸವಾಗಿದ್ದವು.

ಬೆಂಗಳೂರಿನಲ್ಲಿ ಭಾರಿ ಮಳೆಗೆ ವಿಪ್ರೊ ಕಂಪನಿಯ ಕಾಂಪೌಂಡ್ ಕುಸಿತ!
ಕುಸಿದ ವಿಪ್ರೊ ಕಂಪನಿಯ ಕಾಂಪೌಂಡ್
TV9 Web
| Edited By: |

Updated on:Oct 16, 2021 | 1:14 PM

Share

ಆನೇಕಲ್: ಬೆಂಗಳೂರಿನಲ್ಲಿ ದಿನಕ್ಕೊಂದು ಕಟ್ಟಡ ಕುಸಿಯುತ್ತಿದೆ. ಮಳೆ ಅವಾಂತರದಿಂದ ಕಳೆದ ರಾತ್ರಿ ವಿಪ್ರೊ ಕಂಪನಿಯ ಕಾಂಪೌಂಡ್ ಕುಸಿದಿದೆ. ಭಾರಿ ಮಳೆಗೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ವಿಪ್ರೊ ಕಂಪನಿಯ ಕಾಂಪೌಂಡ್ ಕುಸಿತಗೊಂಡಿದ್ದು, ಕಂಪನಿಯ ಒಳಗೆ ಮಳೆ ನೀರು ನುಗ್ಗಿದೆ. ಕಾಂಪೌಂಡ್ ಕುಸಿದು ಬಿದ್ದ ಸ್ಥಳದಿಂದ ನೀರು ನುಗ್ಗಿದೆ. ಕಾಂಪೌಂಡ್ ಗೋಡೆ 3ರಿಂದ 4 ಕಡೆ ಬಿರುಕು ಬಿಟ್ಟಿದೆ. 2 ವರ್ಷದ ಹಿಂದೆ ಇದೇ ರೀತಿ ಕಾಂಪೌಂಡ್ ಕುಸಿದಿತ್ತು. ಇನ್ನಷ್ಟು ಮಳೆಯಾದರೆ ಸಂಪೂರ್ಣ ಕಾಂಪೌಂಡ್ ಕುಸಿಯುವ ಆತಂಕ ಇದೆ.

ಮತ್ತೇ ಮಳೆ ಬಂದರೆ ಕಾಂಪೌಂಡ್ ಕುಸಿಯುವ ಬೀತಿಯಲ್ಲಿ ಸ್ಥಳೀಯರಿದ್ದಾರೆ. ಕಾಂಕ್ರೀಟ್ ಮತ್ತು ದಿಂಡು ಕಲ್ಲುಗಳಿಂದ ಕಾಂಪೌಂಡ್​ನ ನಿರ್ಮಿಸಲಾಗಿದೆ. ಕಾಂಪೌಂಡ್ ಕುಸಿದಿದ್ದರೂ ವಿಪ್ರೋ ಕಂಪನಿ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ. ಸದ್ಯ ಕುಸಿದ ಸ್ಥಳಕ್ಕೆ ಶಾಸಕ ಎಂ ಕೃಷ್ಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕೃಷ್ಣಪ್ಪ, ವಿಪ್ರೋ ಅಧಿಕಾರಿಗಳ ಮೇಲೆ ಗರಂ ಆಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡುವಾಗ ಯಾವೊಬ್ಬ ವಿಪ್ರೋ ಅಧಿಕಾರಿಗಳು ಸ್ಥಳಕ್ಕೆ ಬರದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ದೂರು ದಾಖಲಿಸಿ ಸಂಬಂಧಿಸಿದವರನ್ನ ಅರೆಸ್ಟ್ ಮಾಡಿ ಅಂತ ಶಾಸಕ ಎಂ ಕೃಷ್ಣಪ್ಪ ತಿಳಿಸಿದ್ದಾರೆ.

ಮತ್ತೊಂದು ಬಹುಮಹಡಿ ಕಟ್ಟಡ ಬೆಂಗಳೂರಿನಲ್ಲಿ ಮತ್ತೊಂದು ಬಹುಮಹಡಿ ಕಟ್ಟಡ ವಾಲಿದೆ. ಏಳು ಅಂತಸ್ತಿನ ಕಟ್ಟಡ ಕುಸಿಯುವ ಹಂತದಲ್ಲಿದೆ. ಬಿನ್ನಿಮಿಲ್ ವೃತ್ತದ ಬಳಿಯ ಪೊಲೀಸ್ ಕ್ವಾರ್ಟಸ್​ನ ಕಟ್ಟಡ ಕುಸಿಯುವ ಹಂತದಲ್ಲಿದ್ದು, ಕ್ವಾರ್ಟಸ್​ನಲ್ಲಿ 32 ಕುಟುಂಬಗಳು ವಾಸವಾಗಿದ್ದವು. ಕಟ್ಟಡ ವಾಲುತ್ತಿದ್ದಂತೆ ಸಿಬ್ಬಂದಿ ಖಾಲಿ ಮಾಡಿಸಿ ಮುಂಜಾಗ್ರತೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ

‘ಎರಡೂ ಡೋಸ್​ ಲಸಿಕೆ ಪಡೆದ ಭಾರತೀಯರು ಯುಎಸ್​ಗೆ ಪ್ರಯಾಣ ಮಾಡಬಹುದು’ -ಶ್ವೇತ ಭವನದಿಂದ ಹೊಸ ಮಾರ್ಗಸೂಚಿ ಘೋಷಣೆ

Sunny Deol: ‘ಗದರ್​ 2’ ಚಿತ್ರ ಘೋಷಿಸಿದ ಸನ್ನಿ ಡಿಯೋಲ್​: ಮೋಷನ್​ ಪೋಸ್ಟರ್​ ಜತೆ ರಿಲೀಸ್​ ಬಗ್ಗೆಯೂ ಸಿಕ್ತು ಮಾಹಿತಿ

Published On - 11:01 am, Sat, 16 October 21

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?