AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 66 ವರ್ಷಗಳ ದಾಖಲೆ ಮುರಿದ ಮಳೆ, ಪ್ರವಾಹ ನಿಯಂತ್ರಣಕ್ಕೆ ಬೇಕಿದೆ 600 ಕಿಮೀ ಒಳಚರಂಡಿ

Bengaluru Rain: ಈ ಮೇ ತಿಂಗಳಿನಲ್ಲಿ ಸುರಿದ ಮಳೆ ದಾಖಲೆಯನ್ನು ಸೃಷ್ಟಿಸಿದೆ. ನಗರದಲ್ಲಿ ಸುಮಾರು 31 ಸೆಂ.ಮೀ ಮಳೆಯಾಗಿದ್ದು, 66 ವರ್ಷಗಳ ದಾಖಲೆಯನ್ನು ಮುರಿದಿದೆ. ಇದರ ನಡುವೆ ಮತ್ತೊಂದು ಅಚ್ಚರಿಯ ವರದಿ ಹೊರ ಬಿದ್ದಿದೆ.

ಬೆಂಗಳೂರಿನಲ್ಲಿ 66 ವರ್ಷಗಳ ದಾಖಲೆ ಮುರಿದ ಮಳೆ, ಪ್ರವಾಹ ನಿಯಂತ್ರಣಕ್ಕೆ ಬೇಕಿದೆ 600 ಕಿಮೀ ಒಳಚರಂಡಿ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: Jun 01, 2023 | 10:42 AM

Share

ಬೆಂಗಳೂರು: ಮಳೆಗಾಲಕ್ಕೂ ಮುಂಚೆಯೇ ಬೆಂಗಳೂರಿನಲ್ಲಿ ಸುರಿದ ಮಳೆ ಭಾರೀ ಅವಾಂತರಗಳನ್ನು ಸೃಷ್ಟಿಸಿತ್ತು(Bengaluru Rain). ರಣ ಮಳೆಯಿಂದಾಗಿ ಜನ ಹೈರಾಣಾಗಿದ್ದರು. ಮಳೆಗೆ ಇಬ್ಬರು ಬಲಿಯಾಗಿದ್ದರು. ಈ ಮೇ ತಿಂಗಳಿನಲ್ಲಿ ಸುರಿದ ಮಳೆ ದಾಖಲೆಯನ್ನು ಸೃಷ್ಟಿಸಿದೆ. ನಗರದಲ್ಲಿ ಸುಮಾರು 31 ಸೆಂ.ಮೀ ಮಳೆಯಾಗಿದ್ದು, 66 ವರ್ಷಗಳ ದಾಖಲೆಯನ್ನು ಮುರಿದಿದೆ(Recorderd Rainfall). ಇದರ ನಡುವೆ ಮತ್ತೊಂದು ಅಚ್ಚರಿಯ ವರದಿ ಹೊರ ಬಿದ್ದಿದೆ. ಆಸ್ತಿ ಸಲಹಾ ಸಂಸ್ಥೆಯಾಗಿರುವ ನೈಟ್ ಫ್ರಾಂಕ್ ಇಂಡಿಯಾ(Knight Frank India), ನಗರದ ಮಳೆನೀರು ಒಳಚರಂಡಿ ಮೂಲಸೌಕರ್ಯದಲ್ಲಿನ ಅಂತರವನ್ನು ಅರ್ಥಮಾಡಿಕೊಳ್ಳಲು ಅಸ್ತಿತ್ವದಲ್ಲಿರುವ ಡೇಟಾವನ್ನು ಆಧರಿಸಿ ಅಧ್ಯಯನವನ್ನು ಮಾಡಿ ವರದಿಯೊಂದನ್ನು ಬಿಡುಗಡೆ ಮಾಡಿದ್ದಾರೆ(Stormwater Drainage). ಆ ವರದಿಯ ಪ್ರಕಾರ ನಗರದಲ್ಲಾಗುವ ಪ್ರವಾಹವನ್ನು ತಡೆಗಟ್ಟಲು ಬೆಂಗಳೂರಿಗೆ ಹೆಚ್ಚುವರಿ 600 ಕಿಮೀ ಚರಂಡಿಗಳ ಅಗತ್ಯವಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ದಾಖಲೆ ಮಟ್ಟದಲ್ಲಿ ಮಳೆ

ಬೆಂಗಳೂರಿನಲ್ಲಿ ಈ ತಿಂಗಳು ದಾಖಲೆ ಮಟ್ಟದಲ್ಲಿ ಮಳೆಯಾಗಿದೆ. ನಗರದಲ್ಲಿ 30.1 ಸೆಂ.ಮೀ ಮಳೆ ದಾಖಲಾಗುವುದರ ಮೂಲಕ, ಇದು ಮೇ 1957 ರಲ್ಲಿ ದಾಖಲಾದ 28 ಸೆಂ.ಮೀ.ನ ದೀರ್ಘಾವಧಿಯ ದಾಖಲೆಯನ್ನು ಮುರಿದಿದೆ. 2015 ರಿಂದ ಇಲ್ಲಿಯವರೆಗೆ ಪ್ರತಿ ವರ್ಷ, ಬೆಂಗಳೂರಿನಲ್ಲಿ ಮೇ ತಿಂಗಳಲ್ಲಿ ಸುರಿಯುವ ಮಳೆಯು ಸರಾಸರಿ ವರ್ಷಕ್ಕೆ ಒಟ್ಟು 128.7 ಮಿಮೀ ಮಳೆಗಿಂತ ಹೆಚ್ಚಿರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದತ್ತಾಂಶ ತೋರಿಸುತ್ತದೆ. ಕಳೆದ ಎಂಟು ವರ್ಷಗಳಲ್ಲಿ ಮೇ ತಿಂಗಳ ಸರಾಸರಿ ಮಳೆ 18.5 ಸೆಂ.ಮೀ ಇದೆ. ಕಳೆದ ವರ್ಷ ಅತಿ ಹೆಚ್ಚು ಅಂದ್ರೆ 27 ಸೆಂ.ಮೀ ಮಳೆಯಾಗಿದ್ದು, 2020 ಮತ್ತು 2021ರಲ್ಲಿ ಅತಿ ಕಡಿಮೆ ಅಂದ್ರೆ 13 ಸೆಂ.ಮೀ. ಮಳೆಯಾಗಿತ್ತು.

ಈ ವರ್ಷ ಮಾರ್ಚ್ 1 ರಿಂದ ಮೇ 31ರವರೆಗೆ ಬೆಂಗಳೂರು ನಗರದಲ್ಲಿ 343 ಮಿಮೀ ಮಳೆಯಾಗಿದ್ದು, ಸಾಮಾನ್ಯಕ್ಕಿಂತ 173 ಮಿಮೀ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ವರದಿ ತಿಳಿಸಿದೆ. ಎಚ್ ಎಎಲ್ ವಿಮಾನ ನಿಲ್ದಾಣದ ಬಳಿ 275 ಮಿ.ಮೀ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 227 ಮಿ.ಮೀ ಮಳೆ ದಾಖಲಾಗಿದೆ.

ಮಳೆಯ ಅವಘಡ ತಡೆಯಲು ಬೆಂಗಳೂರಿಗೆ ಬೇಕಿದೆ 600 ಕಿಮೀ ಒಳಚರಂಡಿ ವಿಸ್ತರಣೆ

ಅಂತಾರಾಷ್ಟ್ರೀಯ ಆಸ್ತಿ ಸಲಹಾ ಸಂಸ್ಥೆಯಾಗಿರುವ ನೈಟ್ ಫ್ರಾಂಕ್ ಇಂಡಿಯಾ, ಬೆಂಗಳೂರು ನಗರ ಪ್ರವಾಹದ ಬಗ್ಗೆ ವರದಿ ಬಿಡುಗಡೆ ಮಾಡಿದ್ದು, ನಗರದಲ್ಲಿ ಮಳೆಯಿಂದಾಗುವ ಪ್ರವಾಹ ಪರಿಸ್ಥಿತಿ ತಡೆಗೆ 658 ಕಿಮೀಗಳಷ್ಟು ಪ್ರಾಥಮಿಕ ಮತ್ತು ಮಾಧ್ಯಮಿಕ ಒಳ ಚರಂಡಿಗಳನ್ನು ನಿರ್ಮಿಸಬೇಕಾದ ಅಗತ್ಯವಿದೆ ಎಂದಿದ್ದಾರೆ.

ಇದನ್ನೂ ಓದಿ: Bengaluru: ಬೆಂಗಳೂರು ಟು ಅಗಾರ್ತಲ; ಆಗಸ್ಟ್ 1ರಿಂದ ವಿಸ್ತಾರ ಏರ್​ಲೈನ್ಸ್ ವಿಮಾನ ಸೇವೆ

ಬೆಂಗಳೂರು ಅರ್ಬನ್ ಫ್ಲಡ್ ಎಂಬ ಶೀರ್ಷಿಕೆಯಡಿ ಸಿದ್ಧವಾದ ಆ ವರದಿಯ ಪ್ರಚಾರ, ಸದ್ಯ ಈಗ ಬೆಂಗಳೂರು 842 ಕಿಮೀ ಚರಂಡಿಯನ್ನು ಹೊಂದಿದೆ. ಪ್ರಾದೇಶಿಕ ವಿಸ್ತರಣೆಗೆ ಪೂರಕವಾಗಿ, ನಗರದಲ್ಲಿ ಚರಂಡಿಗಳನ್ನು ವಿಸ್ತರಿಸುವ ಅಗತ್ಯವಿದೆ. ಅಸ್ತಿತ್ವದಲ್ಲಿರುವ ಚರಂಡಿಯನ್ನ ಸರಿಪಡಿಸುವ ಜೊತೆಗೆ ಹೊಸ ಚರಂಡಿಗಳ ನಿರ್ಮಾಣಕ್ಕೆ 2,800 ಕೋಟಿ ರೂ.ಗಳ ಅತ್ಯವಿದೆ ಎಂದು ಅಂದಾಜಿಸಲಾಗಿದೆ.

ನಗರದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ, ಬದಲಾಗುತ್ತಿರುವ ಸ್ಥಳಾಕೃತಿ ಮತ್ತು ಒಳಚರಂಡಿ ವ್ಯವಸ್ಥೆಯಿಂದ ಈ ಸಮಸ್ಯೆಯನ್ನು ಎತ್ತಿ ತೋರಿಸುತ್ತದೆ. ಕಳೆದ ಎರಡು ದಶಕಗಳಲ್ಲಿ ಬೆಂಗಳೂರಿನ ಜನಸಂಖ್ಯೆ ದ್ವಿಗುಣಗೊಂಡಿದ್ದು, ಮುಂದಿನ 10 ವರ್ಷಗಳಲ್ಲಿ 1.8 ಕೋಟಿಗೆ ತಲುಪುವ ಸಾಧ್ಯತೆಯಿದೆ. ಜನಸಂಖ್ಯೆಗೆ ಅನುಗುಣವಾಗಿ ರಿಯಲ್ ಎಸ್ಟೇಟ್ ಮತ್ತು ಮೂಲಸೌಕರ್ಯವನ್ನು ಸಮರ್ಪಕವಾಗಿ ದುಪ್ಪಟ್ಟು ಅಭಿವೃದ್ಧಿಯ ಅಗತ್ಯವಿದೆ. ಜನಸಂಖ್ಯೆಯ ಬೆಳವಣಿಗೆಯಿಂದಾಗಿ, ನಗರದ ಭೂ ಬಳಕೆಯ ಡೈನಾಮಿಕ್ಸ್ ಗಮನಾರ್ಹವಾಗಿ ಬದಲಾಗಿದೆ. ಬೆಂಗಳೂರಿನ ಬಿಲ್ಟ್-ಅಪ್ ಪ್ರದೇಶದ ಪಾಲು 2002 ರಲ್ಲಿ ಶೇ. 37.4 ರಿಂದ 2020ರ ವೇಳೆಗೆ ಶೇ. 93.3 ಕ್ಕೆ ಏರಿಯಾಗಿದೆ ಎಂದು ತನ್ನ ವರದಿಯಲ್ಲಿ ವಿವರಿಸಲಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್