AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಅಪಹರಣ ಪ್ರಕರಣ; ಹೆಚ್​ಡಿ ರೇವಣ್ಣ ಜಾಮೀನು ಷರತ್ತು ಸಡಿಲಿಸಿದ ನ್ಯಾಯಾಲಯ

ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿದ್ದ ಹೆಚ್‌.ಡಿ ರೇವಣ್ಣ ಅವರಿಗೆ ಈ ಹಿಂದೆ ಕೋರ್ಟ್​ ಷರತ್ತು ಬದ್ಧ ಜಾಮೀನು ನೀಡಿತ್ತು. ನಂತರ ಹೆಚ್.ಡಿ.ರೇವಣ್ಣ(HD Revanna) ಅವರು ಜಾಮೀನು ಷರತ್ತು ಸಡಿಲಿಕೆ ಕೋರಿದ್ದರು. ಇದೀಗ ಅವರ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪುರಸ್ಕರಿಸಿದೆ.

ಮಹಿಳೆ ಅಪಹರಣ ಪ್ರಕರಣ; ಹೆಚ್​ಡಿ ರೇವಣ್ಣ ಜಾಮೀನು ಷರತ್ತು ಸಡಿಲಿಸಿದ ನ್ಯಾಯಾಲಯ
ಹೆಚ್​ಡಿ ರೇವಣ್ಣ
ರಮೇಶ್​ ಎಮ್​.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 03, 2024 | 7:49 PM

Share

ಬೆಂಗಳೂರು, ಸೆ.03: ಮೈಸೂರು ಜಿಲ್ಲೆಯ ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತು ಸಡಿಲಿಕೆ ಕೋರಿದ್ದ ಹೆಚ್.ಡಿ.ರೇವಣ್ಣ(HD Revanna) ಅವರ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪುರಸ್ಕರಿಸಿದೆ. ಈ ಮೂಲಕ ಹೊರ ರಾಜ್ಯಗಳಿಗೆ ಸಂಚರಿಸಲು ಅನುಮತಿ ನೀಡಿದೆ. ಆದರೆ, ಕೋರ್ಟ್​ ಅನುಮತಿಯಿಲ್ಲದೇ ದೇಶ ಬಿಟ್ಟು ತೆರಳದಂತೆ ಷರತ್ತು ಮಾರ್ಪಾಡು ಮಾಡಿ ವಿಶೇಷ ಕೋರ್ಟ್‌ನ ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶಿಸಿದ್ದಾರೆ.

ಏನಿದು ಅಪಹರಣ ಪ್ರಕರಣ ?

ಹಾಸನ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎಂದು ಬಿಡುಗಡೆಯಾಗಿದ್ದ ಅಶ್ಲೀಲ ವಿಡಿಯೋದಲ್ಲಿ ‘ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಈ ಹಿನ್ನಲೆ ಕೇಸ್​ ಸಂಬಂಧ ರೇವಣ್ಣ ಪತ್ನಿ ಭವಾನಿ ಸಂಬಂಧಿಯೂ ಆಗಿರುವ ಸತೀಶ್ ಬಾಬು ಎಂಬವರನ್ನು ಎಸ್​ಐಟಿ ಬಂಧಿಸಿತ್ತು. ಬಳಿಕ ರೇವಣ್ಣ ಅವರನ್ನು ಮೊದಲ ಆರೋಪಿಯಾಗಿದ್ದರು.

ಇದನ್ನೂ ಓದಿ:ಅಪಹರಣ ಪ್ರಕರಣ: ಎಚ್​ಡಿ ರೇವಣ್ಣಗೆ ಜಾಮೀನು ಮಂಜೂರು, ಷರತ್ತುಗಳೇನು?

ಇನ್ನು ಯಾವಾಗ ಕೇಸ್​ ದೊಡ್ಡದಾಗುತ್ತಾ ಹೋಯಿತೋ ಮಹಿಳೆಯ ಪತ್ತೆಗಾಗಿ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ವಿವಿಧಡೆ ಪರಿಶೀಲನೆ ನಡೆಸಲಾಗಿತ್ತು. ಬಳಿಕ ಸಂತ್ರಸ್ತ ಮಹಿಳೆ ಹೆಚ್​ಡಿ ರೇವಣ್ಣ ಅವರ ಆಪ್ತನ ತೋಟದ ಮನೆಯಲ್ಲಿ ಪತ್ತೆಯಾಗಿದ್ದರು. ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಬಂಧನದಲ್ಲಿದ್ದ ಹೆಚ್‌.ಡಿ ರೇವಣ್ಣ  ಅವರಿಗೆ ಕೋರ್ಟ್​ ಷರತ್ತು ಬದ್ಧ ಜಾಮೀನು ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ