ಮಹಿಳೆ ಅಪಹರಣ ಪ್ರಕರಣ; ಹೆಚ್​ಡಿ ರೇವಣ್ಣ ಜಾಮೀನು ಷರತ್ತು ಸಡಿಲಿಸಿದ ನ್ಯಾಯಾಲಯ

| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 03, 2024 | 7:49 PM

ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿದ್ದ ಹೆಚ್‌.ಡಿ ರೇವಣ್ಣ ಅವರಿಗೆ ಈ ಹಿಂದೆ ಕೋರ್ಟ್​ ಷರತ್ತು ಬದ್ಧ ಜಾಮೀನು ನೀಡಿತ್ತು. ನಂತರ ಹೆಚ್.ಡಿ.ರೇವಣ್ಣ(HD Revanna) ಅವರು ಜಾಮೀನು ಷರತ್ತು ಸಡಿಲಿಕೆ ಕೋರಿದ್ದರು. ಇದೀಗ ಅವರ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪುರಸ್ಕರಿಸಿದೆ.

ಮಹಿಳೆ ಅಪಹರಣ ಪ್ರಕರಣ; ಹೆಚ್​ಡಿ ರೇವಣ್ಣ ಜಾಮೀನು ಷರತ್ತು ಸಡಿಲಿಸಿದ ನ್ಯಾಯಾಲಯ
ಹೆಚ್​ಡಿ ರೇವಣ್ಣ
Follow us on

ಬೆಂಗಳೂರು, ಸೆ.03: ಮೈಸೂರು ಜಿಲ್ಲೆಯ ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತು ಸಡಿಲಿಕೆ ಕೋರಿದ್ದ ಹೆಚ್.ಡಿ.ರೇವಣ್ಣ(HD Revanna) ಅವರ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪುರಸ್ಕರಿಸಿದೆ. ಈ ಮೂಲಕ ಹೊರ ರಾಜ್ಯಗಳಿಗೆ ಸಂಚರಿಸಲು ಅನುಮತಿ ನೀಡಿದೆ. ಆದರೆ, ಕೋರ್ಟ್​ ಅನುಮತಿಯಿಲ್ಲದೇ ದೇಶ ಬಿಟ್ಟು ತೆರಳದಂತೆ ಷರತ್ತು ಮಾರ್ಪಾಡು ಮಾಡಿ ವಿಶೇಷ ಕೋರ್ಟ್‌ನ ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶಿಸಿದ್ದಾರೆ.

ಏನಿದು ಅಪಹರಣ ಪ್ರಕರಣ ?

ಹಾಸನ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎಂದು ಬಿಡುಗಡೆಯಾಗಿದ್ದ ಅಶ್ಲೀಲ ವಿಡಿಯೋದಲ್ಲಿ ‘ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಈ ಹಿನ್ನಲೆ ಕೇಸ್​ ಸಂಬಂಧ ರೇವಣ್ಣ ಪತ್ನಿ ಭವಾನಿ ಸಂಬಂಧಿಯೂ ಆಗಿರುವ ಸತೀಶ್ ಬಾಬು ಎಂಬವರನ್ನು ಎಸ್​ಐಟಿ ಬಂಧಿಸಿತ್ತು. ಬಳಿಕ ರೇವಣ್ಣ ಅವರನ್ನು ಮೊದಲ ಆರೋಪಿಯಾಗಿದ್ದರು.

ಇದನ್ನೂ ಓದಿ:ಅಪಹರಣ ಪ್ರಕರಣ: ಎಚ್​ಡಿ ರೇವಣ್ಣಗೆ ಜಾಮೀನು ಮಂಜೂರು, ಷರತ್ತುಗಳೇನು?

ಇನ್ನು ಯಾವಾಗ ಕೇಸ್​ ದೊಡ್ಡದಾಗುತ್ತಾ ಹೋಯಿತೋ ಮಹಿಳೆಯ ಪತ್ತೆಗಾಗಿ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ವಿವಿಧಡೆ ಪರಿಶೀಲನೆ ನಡೆಸಲಾಗಿತ್ತು. ಬಳಿಕ ಸಂತ್ರಸ್ತ ಮಹಿಳೆ ಹೆಚ್​ಡಿ ರೇವಣ್ಣ ಅವರ ಆಪ್ತನ ತೋಟದ ಮನೆಯಲ್ಲಿ ಪತ್ತೆಯಾಗಿದ್ದರು. ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಬಂಧನದಲ್ಲಿದ್ದ ಹೆಚ್‌.ಡಿ ರೇವಣ್ಣ  ಅವರಿಗೆ ಕೋರ್ಟ್​ ಷರತ್ತು ಬದ್ಧ ಜಾಮೀನು ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ