AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು; ಮಹಿಳೆಯನ್ನು ತಬ್ಬಿ ವ್ಯಕ್ತಿಯ ದುರ್ವರ್ತನೆ; ಎಕ್ಸ್​ ಖಾತೆಯಲ್ಲಿ ನೋವು ತೋಡಿಕೊಂಡ ಮಹಿಳೆ

ಬೆಂಗಳೂರಿನ ತನ್ನ ಮನೆಯ ಬಳಿ ವ್ಯಕ್ತಿಯೋರ್ವ ತನ್ನನ್ನು ತಬ್ಬಿ ದುರ್ವರ್ತನೆ ತೋರಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಎಕ್ಸ್‌ ಖಾತೆಯಲ್ಲಿ ನೋವು ತೋಡಿಕೊಂಡಿದ್ದಾರೆ. ಅಲ್ಲದೆ ವ್ಯಕ್ತಿಯ ವಿಡಿಯೋವನ್ನು ಪೋಸ್ಟ್‌ ಮಾಡಿದ್ದಾರೆ. ಘಟನೆ ಸಂಬಂಧ ದೂರು ದಾಖಲಾಗಿದೆ.

ಬೆಂಗಳೂರು; ಮಹಿಳೆಯನ್ನು ತಬ್ಬಿ ವ್ಯಕ್ತಿಯ ದುರ್ವರ್ತನೆ; ಎಕ್ಸ್​ ಖಾತೆಯಲ್ಲಿ ನೋವು ತೋಡಿಕೊಂಡ ಮಹಿಳೆ
ದುರ್ವರ್ತನೆ ತೋರಿದ ವ್ಯಕ್ತಿ
ಆಯೇಷಾ ಬಾನು
|

Updated on: Mar 21, 2024 | 10:46 AM

Share

ಬೆಂಗಳೂರು, ಮಾರ್ಚ್.21: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮಹಿಳೆಯರಿಗೆ (Woman) ಸ್ವಲ್ಪವೂ ಸೇಫ್ಟಿ ಇಲ್ಲದಂತಾಗಿದೆ. ಇತ್ತೀಚೆಗೆ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಮಹಿಳೆ ಎದುರು ವ್ಯಕ್ತಿಯೋರ್ವ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿತ್ತು. ಇದೀಗ ಮಹಿಳೆಯೊಬ್ಬರು ತಮ್ಮ ಮನೆಗೆ ತೆರಳಲು ಗೇಟ್ ಓಪನ್ ಮಾಡುವಾಗ ಹಿಂದೆಯಿಂದ ಬಂದ ವ್ಯಕ್ತಿ ಅವರನ್ನು ತಬ್ಬಿಕೊಂಡ ಘಟನೆ ನಡೆದಿದೆ. ಈ ಬಗ್ಗೆ ಮಹಿಳೆ ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಘಟನೆಯ ಮಾಹಿತಿ ಹಂಚಿಕೊಂಡಿದ್ದಾರೆ.

ಮಂಗಳವಾರ ರಾತ್ರಿ ತನ್ನ ಮನೆಯ ಬಳಿ ವ್ಯಕ್ತಿಯೊಬ್ಬರು ತನ್ನನ್ನು ಅಪ್ಪಿಕೊಂಡು ದುರ್ವರ್ತನೆ ತೋರಿದ್ದಾರೆ ಎಂದು ಆರೋಪಿಸಿ X ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಲ್ಲದೆ ಮಹಿಳೆ ತನ್ನ ಮನೆಯ ಗೇಟ್ ಓಪನ್ ಮಾಡುವಾಗ ತನಗೆ ಕಿರುಕುಳ ನೀಡಿದ ವ್ಯಕ್ತಿಯ ವೀಡಿಯೊವನ್ನು ಕೂಡ ಪೋಸ್ಟ್ ಮಾಡಿದ್ದಾರೆ.

ಮಹಿಳೆಯ ಪೋಸ್ಟ್

ಕಳೆದ ರಾತ್ರಿ ನನ್ನ ಸ್ನೇಹಿತನೊಬ್ಬ ನನ್ನನ್ನು ನನ್ನ ಮನೆಯ ಹತ್ತಿರ ಡ್ರಾಪ್ ಮಾಡಿ ಹೋದ. ನಾನು ಗೇಟ್ ತೆರೆಯಲು ಮುಂದಾದಾಗ, ಈ ವ್ಯಕ್ತಿ ಬಂದು ನನ್ನನ್ನು ಹಿಂದಿನಿಂದ ಹಿಡಿದಪ್ಪಿ ಓಡಿ ಹೋದ. ನಾನು ನನ್ನ ಸ್ನೇಹಿತನಿಗೆ ಕರೆ ಮಾಡಿ ಅವನು ಓಡಿ ತಪ್ಪಿಸಿಕೊಳ್ಳುವ ಮೊದಲು ಅವನನ್ನು ಹಿಡಿಯಲು ಹೇಳಿದೆ ಎಂದು ಮಹಿಳೆ ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕುಡಿಯಲು ನೀರು ಕೇಳಿ ಯುವತಿ ಜೊತೆ ಫುಡ್ ಡೆಲಿವರಿ ಬಾಯ್​​ ದುರ್ವರ್ತನೆ, FIR ದಾಖಲು

ಆ ವ್ಯಕ್ತಿಯನ್ನು ಏಕೆ ಬಿಟ್ಟು ಕಳಿಸಿದ್ದೀರಿ ಎಂದು ಕೇಳುವ ಎಲ್ಲರಿಗೂ ನಾನು ಹೇಳೋದು ಎಷ್ಟೇ. ನಾನು ಆತನನ್ನು ಬಿಟ್ಟುಕಳಿಸಿಲ್ಲ, ನಾನು ಅವನ ವಿರುದ್ಧ ದೂರು ನೀಡಿದ್ದೇನೆ ಮತ್ತು ಅವನು ಪೊಲೀಸರ ಮುಂದೆ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಇದನ್ನು ಪೋಸ್ಟ್ ಮಾಡುವ ಕಾರಣವೆಂದರೆ ಜಾಗೃತಿ ಮತ್ತು ಲೋಪದೋಷ. ಎಲ್ಲರೂ ಜಾಗೃತರಾಗಬೇಕು.

ಮಹಿಳೆ ರೆಕಾರ್ಡ್ ಮಾಡಿದ ವೀಡಿಯೊದಲ್ಲಿ, ವ್ಯಕ್ತಿ ತನ್ನ ಮುಖವನ್ನು ಕ್ಯಾಮೆರಾದಿಂದ ಮುಚ್ಚಿಕೊಳ್ಳುತ್ತಿರುವುದು ಕಂಡುಬಂದಿದೆ. ಮಹಿಳೆ ಜೊತೆ ದುರ್ವರ್ತನೆ ತೋರಿದ್ದಾಗಿ ವ್ಯಕ್ತಿ ಒಪ್ಪಿಕೊಂಡಿದ್ದಾನೆ.

ಆಕೆಯ ಸ್ನೇಹಿತ ಆತನನ್ನು ಹಿಡಿದಾಗ ಅವರು ಪೊಲೀಸರಿಗೆ ಕರೆ ಮಾಡಿದ್ದಾರೆ ವ್ಯಕ್ತಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದರು. ಆದರೆ, ವ್ಯಕ್ತಿಯ ವಿರುದ್ಧ ಕೇವಲ ಆರೋಪಗಳಿರುವ ಕಾರಣ ಬಿಡುಗಡೆ ಮಾಡಲಾಗಿದೆ ಎಂದು ಮಹಿಳೆ ಹೇಳಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!