AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು; ಮಹಿಳೆಯನ್ನು ತಬ್ಬಿ ವ್ಯಕ್ತಿಯ ದುರ್ವರ್ತನೆ; ಎಕ್ಸ್​ ಖಾತೆಯಲ್ಲಿ ನೋವು ತೋಡಿಕೊಂಡ ಮಹಿಳೆ

ಬೆಂಗಳೂರಿನ ತನ್ನ ಮನೆಯ ಬಳಿ ವ್ಯಕ್ತಿಯೋರ್ವ ತನ್ನನ್ನು ತಬ್ಬಿ ದುರ್ವರ್ತನೆ ತೋರಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಎಕ್ಸ್‌ ಖಾತೆಯಲ್ಲಿ ನೋವು ತೋಡಿಕೊಂಡಿದ್ದಾರೆ. ಅಲ್ಲದೆ ವ್ಯಕ್ತಿಯ ವಿಡಿಯೋವನ್ನು ಪೋಸ್ಟ್‌ ಮಾಡಿದ್ದಾರೆ. ಘಟನೆ ಸಂಬಂಧ ದೂರು ದಾಖಲಾಗಿದೆ.

ಬೆಂಗಳೂರು; ಮಹಿಳೆಯನ್ನು ತಬ್ಬಿ ವ್ಯಕ್ತಿಯ ದುರ್ವರ್ತನೆ; ಎಕ್ಸ್​ ಖಾತೆಯಲ್ಲಿ ನೋವು ತೋಡಿಕೊಂಡ ಮಹಿಳೆ
ದುರ್ವರ್ತನೆ ತೋರಿದ ವ್ಯಕ್ತಿ
ಆಯೇಷಾ ಬಾನು
ಆಯೇಷಾ ಬಾನು|

Updated on: Mar 21, 2024 | 10:46 AM

Share

ಬೆಂಗಳೂರು, ಮಾರ್ಚ್.21: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮಹಿಳೆಯರಿಗೆ (Woman) ಸ್ವಲ್ಪವೂ ಸೇಫ್ಟಿ ಇಲ್ಲದಂತಾಗಿದೆ. ಇತ್ತೀಚೆಗೆ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಮಹಿಳೆ ಎದುರು ವ್ಯಕ್ತಿಯೋರ್ವ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿತ್ತು. ಇದೀಗ ಮಹಿಳೆಯೊಬ್ಬರು ತಮ್ಮ ಮನೆಗೆ ತೆರಳಲು ಗೇಟ್ ಓಪನ್ ಮಾಡುವಾಗ ಹಿಂದೆಯಿಂದ ಬಂದ ವ್ಯಕ್ತಿ ಅವರನ್ನು ತಬ್ಬಿಕೊಂಡ ಘಟನೆ ನಡೆದಿದೆ. ಈ ಬಗ್ಗೆ ಮಹಿಳೆ ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಘಟನೆಯ ಮಾಹಿತಿ ಹಂಚಿಕೊಂಡಿದ್ದಾರೆ.

ಮಂಗಳವಾರ ರಾತ್ರಿ ತನ್ನ ಮನೆಯ ಬಳಿ ವ್ಯಕ್ತಿಯೊಬ್ಬರು ತನ್ನನ್ನು ಅಪ್ಪಿಕೊಂಡು ದುರ್ವರ್ತನೆ ತೋರಿದ್ದಾರೆ ಎಂದು ಆರೋಪಿಸಿ X ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಲ್ಲದೆ ಮಹಿಳೆ ತನ್ನ ಮನೆಯ ಗೇಟ್ ಓಪನ್ ಮಾಡುವಾಗ ತನಗೆ ಕಿರುಕುಳ ನೀಡಿದ ವ್ಯಕ್ತಿಯ ವೀಡಿಯೊವನ್ನು ಕೂಡ ಪೋಸ್ಟ್ ಮಾಡಿದ್ದಾರೆ.

ಮಹಿಳೆಯ ಪೋಸ್ಟ್

ಕಳೆದ ರಾತ್ರಿ ನನ್ನ ಸ್ನೇಹಿತನೊಬ್ಬ ನನ್ನನ್ನು ನನ್ನ ಮನೆಯ ಹತ್ತಿರ ಡ್ರಾಪ್ ಮಾಡಿ ಹೋದ. ನಾನು ಗೇಟ್ ತೆರೆಯಲು ಮುಂದಾದಾಗ, ಈ ವ್ಯಕ್ತಿ ಬಂದು ನನ್ನನ್ನು ಹಿಂದಿನಿಂದ ಹಿಡಿದಪ್ಪಿ ಓಡಿ ಹೋದ. ನಾನು ನನ್ನ ಸ್ನೇಹಿತನಿಗೆ ಕರೆ ಮಾಡಿ ಅವನು ಓಡಿ ತಪ್ಪಿಸಿಕೊಳ್ಳುವ ಮೊದಲು ಅವನನ್ನು ಹಿಡಿಯಲು ಹೇಳಿದೆ ಎಂದು ಮಹಿಳೆ ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕುಡಿಯಲು ನೀರು ಕೇಳಿ ಯುವತಿ ಜೊತೆ ಫುಡ್ ಡೆಲಿವರಿ ಬಾಯ್​​ ದುರ್ವರ್ತನೆ, FIR ದಾಖಲು

ಆ ವ್ಯಕ್ತಿಯನ್ನು ಏಕೆ ಬಿಟ್ಟು ಕಳಿಸಿದ್ದೀರಿ ಎಂದು ಕೇಳುವ ಎಲ್ಲರಿಗೂ ನಾನು ಹೇಳೋದು ಎಷ್ಟೇ. ನಾನು ಆತನನ್ನು ಬಿಟ್ಟುಕಳಿಸಿಲ್ಲ, ನಾನು ಅವನ ವಿರುದ್ಧ ದೂರು ನೀಡಿದ್ದೇನೆ ಮತ್ತು ಅವನು ಪೊಲೀಸರ ಮುಂದೆ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಇದನ್ನು ಪೋಸ್ಟ್ ಮಾಡುವ ಕಾರಣವೆಂದರೆ ಜಾಗೃತಿ ಮತ್ತು ಲೋಪದೋಷ. ಎಲ್ಲರೂ ಜಾಗೃತರಾಗಬೇಕು.

ಮಹಿಳೆ ರೆಕಾರ್ಡ್ ಮಾಡಿದ ವೀಡಿಯೊದಲ್ಲಿ, ವ್ಯಕ್ತಿ ತನ್ನ ಮುಖವನ್ನು ಕ್ಯಾಮೆರಾದಿಂದ ಮುಚ್ಚಿಕೊಳ್ಳುತ್ತಿರುವುದು ಕಂಡುಬಂದಿದೆ. ಮಹಿಳೆ ಜೊತೆ ದುರ್ವರ್ತನೆ ತೋರಿದ್ದಾಗಿ ವ್ಯಕ್ತಿ ಒಪ್ಪಿಕೊಂಡಿದ್ದಾನೆ.

ಆಕೆಯ ಸ್ನೇಹಿತ ಆತನನ್ನು ಹಿಡಿದಾಗ ಅವರು ಪೊಲೀಸರಿಗೆ ಕರೆ ಮಾಡಿದ್ದಾರೆ ವ್ಯಕ್ತಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದರು. ಆದರೆ, ವ್ಯಕ್ತಿಯ ವಿರುದ್ಧ ಕೇವಲ ಆರೋಪಗಳಿರುವ ಕಾರಣ ಬಿಡುಗಡೆ ಮಾಡಲಾಗಿದೆ ಎಂದು ಮಹಿಳೆ ಹೇಳಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?