AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು; ಮಹಿಳೆಯನ್ನು ತಬ್ಬಿ ವ್ಯಕ್ತಿಯ ದುರ್ವರ್ತನೆ; ಎಕ್ಸ್​ ಖಾತೆಯಲ್ಲಿ ನೋವು ತೋಡಿಕೊಂಡ ಮಹಿಳೆ

ಬೆಂಗಳೂರಿನ ತನ್ನ ಮನೆಯ ಬಳಿ ವ್ಯಕ್ತಿಯೋರ್ವ ತನ್ನನ್ನು ತಬ್ಬಿ ದುರ್ವರ್ತನೆ ತೋರಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಎಕ್ಸ್‌ ಖಾತೆಯಲ್ಲಿ ನೋವು ತೋಡಿಕೊಂಡಿದ್ದಾರೆ. ಅಲ್ಲದೆ ವ್ಯಕ್ತಿಯ ವಿಡಿಯೋವನ್ನು ಪೋಸ್ಟ್‌ ಮಾಡಿದ್ದಾರೆ. ಘಟನೆ ಸಂಬಂಧ ದೂರು ದಾಖಲಾಗಿದೆ.

ಬೆಂಗಳೂರು; ಮಹಿಳೆಯನ್ನು ತಬ್ಬಿ ವ್ಯಕ್ತಿಯ ದುರ್ವರ್ತನೆ; ಎಕ್ಸ್​ ಖಾತೆಯಲ್ಲಿ ನೋವು ತೋಡಿಕೊಂಡ ಮಹಿಳೆ
ದುರ್ವರ್ತನೆ ತೋರಿದ ವ್ಯಕ್ತಿ
ಆಯೇಷಾ ಬಾನು
ಆಯೇಷಾ ಬಾನು|

Updated on: Mar 21, 2024 | 10:46 AM

Share

ಬೆಂಗಳೂರು, ಮಾರ್ಚ್.21: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮಹಿಳೆಯರಿಗೆ (Woman) ಸ್ವಲ್ಪವೂ ಸೇಫ್ಟಿ ಇಲ್ಲದಂತಾಗಿದೆ. ಇತ್ತೀಚೆಗೆ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಮಹಿಳೆ ಎದುರು ವ್ಯಕ್ತಿಯೋರ್ವ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿತ್ತು. ಇದೀಗ ಮಹಿಳೆಯೊಬ್ಬರು ತಮ್ಮ ಮನೆಗೆ ತೆರಳಲು ಗೇಟ್ ಓಪನ್ ಮಾಡುವಾಗ ಹಿಂದೆಯಿಂದ ಬಂದ ವ್ಯಕ್ತಿ ಅವರನ್ನು ತಬ್ಬಿಕೊಂಡ ಘಟನೆ ನಡೆದಿದೆ. ಈ ಬಗ್ಗೆ ಮಹಿಳೆ ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಘಟನೆಯ ಮಾಹಿತಿ ಹಂಚಿಕೊಂಡಿದ್ದಾರೆ.

ಮಂಗಳವಾರ ರಾತ್ರಿ ತನ್ನ ಮನೆಯ ಬಳಿ ವ್ಯಕ್ತಿಯೊಬ್ಬರು ತನ್ನನ್ನು ಅಪ್ಪಿಕೊಂಡು ದುರ್ವರ್ತನೆ ತೋರಿದ್ದಾರೆ ಎಂದು ಆರೋಪಿಸಿ X ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಲ್ಲದೆ ಮಹಿಳೆ ತನ್ನ ಮನೆಯ ಗೇಟ್ ಓಪನ್ ಮಾಡುವಾಗ ತನಗೆ ಕಿರುಕುಳ ನೀಡಿದ ವ್ಯಕ್ತಿಯ ವೀಡಿಯೊವನ್ನು ಕೂಡ ಪೋಸ್ಟ್ ಮಾಡಿದ್ದಾರೆ.

ಮಹಿಳೆಯ ಪೋಸ್ಟ್

ಕಳೆದ ರಾತ್ರಿ ನನ್ನ ಸ್ನೇಹಿತನೊಬ್ಬ ನನ್ನನ್ನು ನನ್ನ ಮನೆಯ ಹತ್ತಿರ ಡ್ರಾಪ್ ಮಾಡಿ ಹೋದ. ನಾನು ಗೇಟ್ ತೆರೆಯಲು ಮುಂದಾದಾಗ, ಈ ವ್ಯಕ್ತಿ ಬಂದು ನನ್ನನ್ನು ಹಿಂದಿನಿಂದ ಹಿಡಿದಪ್ಪಿ ಓಡಿ ಹೋದ. ನಾನು ನನ್ನ ಸ್ನೇಹಿತನಿಗೆ ಕರೆ ಮಾಡಿ ಅವನು ಓಡಿ ತಪ್ಪಿಸಿಕೊಳ್ಳುವ ಮೊದಲು ಅವನನ್ನು ಹಿಡಿಯಲು ಹೇಳಿದೆ ಎಂದು ಮಹಿಳೆ ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕುಡಿಯಲು ನೀರು ಕೇಳಿ ಯುವತಿ ಜೊತೆ ಫುಡ್ ಡೆಲಿವರಿ ಬಾಯ್​​ ದುರ್ವರ್ತನೆ, FIR ದಾಖಲು

ಆ ವ್ಯಕ್ತಿಯನ್ನು ಏಕೆ ಬಿಟ್ಟು ಕಳಿಸಿದ್ದೀರಿ ಎಂದು ಕೇಳುವ ಎಲ್ಲರಿಗೂ ನಾನು ಹೇಳೋದು ಎಷ್ಟೇ. ನಾನು ಆತನನ್ನು ಬಿಟ್ಟುಕಳಿಸಿಲ್ಲ, ನಾನು ಅವನ ವಿರುದ್ಧ ದೂರು ನೀಡಿದ್ದೇನೆ ಮತ್ತು ಅವನು ಪೊಲೀಸರ ಮುಂದೆ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಇದನ್ನು ಪೋಸ್ಟ್ ಮಾಡುವ ಕಾರಣವೆಂದರೆ ಜಾಗೃತಿ ಮತ್ತು ಲೋಪದೋಷ. ಎಲ್ಲರೂ ಜಾಗೃತರಾಗಬೇಕು.

ಮಹಿಳೆ ರೆಕಾರ್ಡ್ ಮಾಡಿದ ವೀಡಿಯೊದಲ್ಲಿ, ವ್ಯಕ್ತಿ ತನ್ನ ಮುಖವನ್ನು ಕ್ಯಾಮೆರಾದಿಂದ ಮುಚ್ಚಿಕೊಳ್ಳುತ್ತಿರುವುದು ಕಂಡುಬಂದಿದೆ. ಮಹಿಳೆ ಜೊತೆ ದುರ್ವರ್ತನೆ ತೋರಿದ್ದಾಗಿ ವ್ಯಕ್ತಿ ಒಪ್ಪಿಕೊಂಡಿದ್ದಾನೆ.

ಆಕೆಯ ಸ್ನೇಹಿತ ಆತನನ್ನು ಹಿಡಿದಾಗ ಅವರು ಪೊಲೀಸರಿಗೆ ಕರೆ ಮಾಡಿದ್ದಾರೆ ವ್ಯಕ್ತಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದರು. ಆದರೆ, ವ್ಯಕ್ತಿಯ ವಿರುದ್ಧ ಕೇವಲ ಆರೋಪಗಳಿರುವ ಕಾರಣ ಬಿಡುಗಡೆ ಮಾಡಲಾಗಿದೆ ಎಂದು ಮಹಿಳೆ ಹೇಳಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ