AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು; ಮಹಿಳೆಯನ್ನು ತಬ್ಬಿ ವ್ಯಕ್ತಿಯ ದುರ್ವರ್ತನೆ; ಎಕ್ಸ್​ ಖಾತೆಯಲ್ಲಿ ನೋವು ತೋಡಿಕೊಂಡ ಮಹಿಳೆ

ಬೆಂಗಳೂರಿನ ತನ್ನ ಮನೆಯ ಬಳಿ ವ್ಯಕ್ತಿಯೋರ್ವ ತನ್ನನ್ನು ತಬ್ಬಿ ದುರ್ವರ್ತನೆ ತೋರಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಎಕ್ಸ್‌ ಖಾತೆಯಲ್ಲಿ ನೋವು ತೋಡಿಕೊಂಡಿದ್ದಾರೆ. ಅಲ್ಲದೆ ವ್ಯಕ್ತಿಯ ವಿಡಿಯೋವನ್ನು ಪೋಸ್ಟ್‌ ಮಾಡಿದ್ದಾರೆ. ಘಟನೆ ಸಂಬಂಧ ದೂರು ದಾಖಲಾಗಿದೆ.

ಬೆಂಗಳೂರು; ಮಹಿಳೆಯನ್ನು ತಬ್ಬಿ ವ್ಯಕ್ತಿಯ ದುರ್ವರ್ತನೆ; ಎಕ್ಸ್​ ಖಾತೆಯಲ್ಲಿ ನೋವು ತೋಡಿಕೊಂಡ ಮಹಿಳೆ
ದುರ್ವರ್ತನೆ ತೋರಿದ ವ್ಯಕ್ತಿ
ಆಯೇಷಾ ಬಾನು
|

Updated on: Mar 21, 2024 | 10:46 AM

Share

ಬೆಂಗಳೂರು, ಮಾರ್ಚ್.21: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮಹಿಳೆಯರಿಗೆ (Woman) ಸ್ವಲ್ಪವೂ ಸೇಫ್ಟಿ ಇಲ್ಲದಂತಾಗಿದೆ. ಇತ್ತೀಚೆಗೆ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಮಹಿಳೆ ಎದುರು ವ್ಯಕ್ತಿಯೋರ್ವ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿತ್ತು. ಇದೀಗ ಮಹಿಳೆಯೊಬ್ಬರು ತಮ್ಮ ಮನೆಗೆ ತೆರಳಲು ಗೇಟ್ ಓಪನ್ ಮಾಡುವಾಗ ಹಿಂದೆಯಿಂದ ಬಂದ ವ್ಯಕ್ತಿ ಅವರನ್ನು ತಬ್ಬಿಕೊಂಡ ಘಟನೆ ನಡೆದಿದೆ. ಈ ಬಗ್ಗೆ ಮಹಿಳೆ ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಘಟನೆಯ ಮಾಹಿತಿ ಹಂಚಿಕೊಂಡಿದ್ದಾರೆ.

ಮಂಗಳವಾರ ರಾತ್ರಿ ತನ್ನ ಮನೆಯ ಬಳಿ ವ್ಯಕ್ತಿಯೊಬ್ಬರು ತನ್ನನ್ನು ಅಪ್ಪಿಕೊಂಡು ದುರ್ವರ್ತನೆ ತೋರಿದ್ದಾರೆ ಎಂದು ಆರೋಪಿಸಿ X ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಲ್ಲದೆ ಮಹಿಳೆ ತನ್ನ ಮನೆಯ ಗೇಟ್ ಓಪನ್ ಮಾಡುವಾಗ ತನಗೆ ಕಿರುಕುಳ ನೀಡಿದ ವ್ಯಕ್ತಿಯ ವೀಡಿಯೊವನ್ನು ಕೂಡ ಪೋಸ್ಟ್ ಮಾಡಿದ್ದಾರೆ.

ಮಹಿಳೆಯ ಪೋಸ್ಟ್

ಕಳೆದ ರಾತ್ರಿ ನನ್ನ ಸ್ನೇಹಿತನೊಬ್ಬ ನನ್ನನ್ನು ನನ್ನ ಮನೆಯ ಹತ್ತಿರ ಡ್ರಾಪ್ ಮಾಡಿ ಹೋದ. ನಾನು ಗೇಟ್ ತೆರೆಯಲು ಮುಂದಾದಾಗ, ಈ ವ್ಯಕ್ತಿ ಬಂದು ನನ್ನನ್ನು ಹಿಂದಿನಿಂದ ಹಿಡಿದಪ್ಪಿ ಓಡಿ ಹೋದ. ನಾನು ನನ್ನ ಸ್ನೇಹಿತನಿಗೆ ಕರೆ ಮಾಡಿ ಅವನು ಓಡಿ ತಪ್ಪಿಸಿಕೊಳ್ಳುವ ಮೊದಲು ಅವನನ್ನು ಹಿಡಿಯಲು ಹೇಳಿದೆ ಎಂದು ಮಹಿಳೆ ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕುಡಿಯಲು ನೀರು ಕೇಳಿ ಯುವತಿ ಜೊತೆ ಫುಡ್ ಡೆಲಿವರಿ ಬಾಯ್​​ ದುರ್ವರ್ತನೆ, FIR ದಾಖಲು

ಆ ವ್ಯಕ್ತಿಯನ್ನು ಏಕೆ ಬಿಟ್ಟು ಕಳಿಸಿದ್ದೀರಿ ಎಂದು ಕೇಳುವ ಎಲ್ಲರಿಗೂ ನಾನು ಹೇಳೋದು ಎಷ್ಟೇ. ನಾನು ಆತನನ್ನು ಬಿಟ್ಟುಕಳಿಸಿಲ್ಲ, ನಾನು ಅವನ ವಿರುದ್ಧ ದೂರು ನೀಡಿದ್ದೇನೆ ಮತ್ತು ಅವನು ಪೊಲೀಸರ ಮುಂದೆ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಇದನ್ನು ಪೋಸ್ಟ್ ಮಾಡುವ ಕಾರಣವೆಂದರೆ ಜಾಗೃತಿ ಮತ್ತು ಲೋಪದೋಷ. ಎಲ್ಲರೂ ಜಾಗೃತರಾಗಬೇಕು.

ಮಹಿಳೆ ರೆಕಾರ್ಡ್ ಮಾಡಿದ ವೀಡಿಯೊದಲ್ಲಿ, ವ್ಯಕ್ತಿ ತನ್ನ ಮುಖವನ್ನು ಕ್ಯಾಮೆರಾದಿಂದ ಮುಚ್ಚಿಕೊಳ್ಳುತ್ತಿರುವುದು ಕಂಡುಬಂದಿದೆ. ಮಹಿಳೆ ಜೊತೆ ದುರ್ವರ್ತನೆ ತೋರಿದ್ದಾಗಿ ವ್ಯಕ್ತಿ ಒಪ್ಪಿಕೊಂಡಿದ್ದಾನೆ.

ಆಕೆಯ ಸ್ನೇಹಿತ ಆತನನ್ನು ಹಿಡಿದಾಗ ಅವರು ಪೊಲೀಸರಿಗೆ ಕರೆ ಮಾಡಿದ್ದಾರೆ ವ್ಯಕ್ತಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದರು. ಆದರೆ, ವ್ಯಕ್ತಿಯ ವಿರುದ್ಧ ಕೇವಲ ಆರೋಪಗಳಿರುವ ಕಾರಣ ಬಿಡುಗಡೆ ಮಾಡಲಾಗಿದೆ ಎಂದು ಮಹಿಳೆ ಹೇಳಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್