AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರ್ಟ್ ಬಿಚ್ಚುವಂತೆ ಬೆಂಗಳೂರು ಏರ್ಪೋರ್ಟ್ ಸಿಬ್ಬಂದಿಯಿಂದ ಮಹಿಳೆಗೆ ಒತ್ತಾಯ, ಟ್ವೀಟ್ ಮಾಡಿ ಮಹಿಳೆ ಕಿಡಿ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ವೇಳೆ ಶರ್ಟ್ ತೆಗೆಯುವಂತೆ ಹೇಳಿದ್ದಾಗಿ ಸಂಗೀತಗಾರ್ತಿಯೊಬ್ಬರು ಆರೋಪಿಸಿದ್ದು, ‘ನಿಜವಾಗಿಯೂ ಇದು ಅವಮಾನಕರ’ ಅನುಭವ. ‘ಮಹಿಳೆಯರೇಕೆ ಬಟ್ಟೆ ಬಿಚ್ಚಬೇಕು’ ಎಂದು ತಮ್ಮ ಟ್ವಿಟರ್ ಖಾತೆ ಮೂಲಕ ಪ್ರಶ್ನಿಸಿದ್ದಾರೆ.

ಶರ್ಟ್ ಬಿಚ್ಚುವಂತೆ ಬೆಂಗಳೂರು ಏರ್ಪೋರ್ಟ್ ಸಿಬ್ಬಂದಿಯಿಂದ  ಮಹಿಳೆಗೆ ಒತ್ತಾಯ, ಟ್ವೀಟ್ ಮಾಡಿ ಮಹಿಳೆ ಕಿಡಿ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರು
Follow us
TV9 Web
| Updated By: ಆಯೇಷಾ ಬಾನು

Updated on:Jan 04, 2023 | 12:13 PM

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(Kempegowda International Airport Bengaluru) ಭದ್ರತಾ ತಪಾಸಣೆ ವೇಳೆ ಏರ್ಪೋರ್ಟ್ ಸಿಬ್ಬಂದಿ ಮಹಿಳೆಯೊಬ್ಬರಿಗೆ ಶರ್ಟ್ ಬಿಚ್ಚುವಂತೆ ಒತ್ತಾಯಿಸಿದ್ದಾರಂತೆ. ಈ ಬಗ್ಗೆ ಸ್ವತಃ ಅವರೇ ತಮಗಾದ ಅವಮಾನದ ಬಗ್ಗೆ ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು ಸಿಬ್ಬಂದಿಯ ವರ್ತನೆಯನ್ನು ಖಂಡಿಸಿದ್ದಾರೆ ಎಂದು ಎನ್​ಡಿ ಟಿವಿ ವರದಿ ಮಾಡಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ವೇಳೆ ಶರ್ಟ್ ತೆಗೆಯುವಂತೆ ಹೇಳಿದ್ದಾಗಿ ಸಂಗೀತಗಾರ್ತಿಯೊಬ್ಬರು ಆರೋಪಿಸಿದ್ದು, ‘ನಿಜವಾಗಿಯೂ ಇದು ಅವಮಾನಕರ’ ಅನುಭವ. ‘ಮಹಿಳೆಯರೇಕೆ ಬಟ್ಟೆ ಬಿಚ್ಚಬೇಕು’ ಎಂದು ತಮ್ಮ ಟ್ವಿಟರ್ ಖಾತೆ ಮೂಲಕ ಪ್ರಶ್ನಿಸಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಪರಿಶೀಲನೆ ವೇಳೆ ನನಗೆ ಸಿಬ್ಬಂದಿ ಶರ್ಟ್ ತೆಗೆಯುವಂತೆ ಸೂಚಿಸಿದರು. ಸಿಬ್ಬಂದಿಯ ಈ ವರ್ತನೆಯಿಂದ ನನಗೆ ಬಹಳ ಮುಜುಗರ ಹಾಗೂ ಅವಮಾನವಾಗಿದೆ. ಕೇವಲ ಕ್ಯಾಮಿಸೋಲ್ (ಮಹಿಳೆಯರು ಧರಿಸುವ ಉಡುಪು) ಧರಿಸಿ ಭದ್ರತಾ ಪರಿಶೀಲನೆ ಕೇಂದ್ರದ ಬಳಿ ನಿಂತು ಮಹಿಳೆಯರಿಗೆ ಕಿರಿಕಿರಿ ಉಂಟುಮಾಡುವ ರೀತಿಯ ವರ್ತನೆಗಳನ್ನು ಎದುರಿಸುವುದು ಅವಮಾನಕರ ಸಂಗತಿಯಾಗಿದೆ. ಭದ್ರತಾ ಪರಿಶೀಲನೆ ವೇಳೆ ಮಹಿಳೆಯರು ಶರ್ಟ್ ನ್ನು ಏಕೆ ತೆಗೆಯಬೇಕು? ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟ್ವೀಟ್ ಖಾತೆಗೆ ಟ್ಯಾಗ್ ಮಾಡಿ ಮಹಿಳೆ ಅಸಮಾಧಾನ ಹೊರ ಹಾಕಿದ್ದಾರೆ.

ವಿಷಾದ ವ್ಯಕ್ತಪಡಿಸಿದ ಅಧಿಕಾರಿಗಳು

ಇನ್ನು ಘಟನೆ ಬಗ್ಗೆ ಬೆಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳು ವಿಷಾದ ವ್ಯಕ್ತಪಡಿಸಿದ್ದಾರೆ. ಮತ್ತು ವಿಮಾನ ನಿಲ್ದಾಣದ ಭದ್ರತೆಯನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ನಿರ್ವಹಿಸುತ್ತದೆ. ಕಾರ್ಯಾಚರಣೆ ಮತ್ತು ಭದ್ರತಾ ತಂಡಗಳಿಗೆ ಸಮಸ್ಯೆಯ ಬಗ್ಗೆ ವಿವರಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣದ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ಮಹಿಳೆಯ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿದ್ದು “ಇದು ಸಂಭವಿಸಬಾರದಿತ್ತು” ಎಂದು ಹೇಳಿದೆ.

ಈ ಟ್ವೀಟ್ ನಲ್ಲಿ ಮಹಿಳೆ ತಾನು ಪ್ರಯಾಣಿಸಿದ ವಿಮಾನ ಸಂಸ್ಥೆಯ ಹೆಸರು. ಪ್ರಯಾಣಿಸಬೇಕಿದ್ದ ಸ್ಥಳ, ಪ್ರಯಾಣದ ದಿನಾಂಕ ಸೇರಿದಂತೆ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಹೀಗಾಗಿ ಅಧಿಕಾರಿಗಳಿಗೆ ಈ ಬಗ್ಗೆ ತನಿಖೆ ನಡೆಸಲು ಸಮಸ್ಯೆಯಾಗಬಹುದು ಎಂದಿದ್ದಾರೆ. ಸದ್ಯ ಮಹಿಳೆಯ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವುದಾಗಿ ಹೇಳಿವೆ. ಹಾಗೂ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಅಥವಾ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಏಕೆ ಮಹಿಳೆ ದೂರು ದಾಖಲಿಸಿಲ್ಲ? ಎಂದು ಏಜೆನ್ಸಿಗಳು ಪ್ರಶ್ನಿಸಿವೆ. ಈ ಘಟನೆಯನ್ನು ಭದ್ರತಾ ತಂಡದ ಗಮನಕ್ಕೆ ತರಲಾಗಿದ್ದು ಆಕೆಯ ಸಂಪರ್ಕ ವಿವರಗಳನ್ನು ನೀಡುವಂತೆ ಮನವಿ ಮಾಡಲಾಗಿದೆ ಎಂದು ಎನ್​ಡಿ ಟಿವಿ ವರದಿ ಮಾಡಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:58 am, Wed, 4 January 23

ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು