AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತ್ಸೆ ಪ್ರೀತ್ಸೆ ಅಂತ ಬೆಂಗಳೂರಿನ ಪೊಲೀಸ್​​ ಇನ್ಸ್​ಪೆಕ್ಟರ್​​​ ಹಿಂದೆ ಬಿದ್ದಿದ್ದ ಮಹಿಳೆಗೆ ತಕ್ಕ ಶಾಸ್ತಿ

ತಾನು ಕಾಂಗ್ರೆಸ್ ಕಾರ್ಯಕರ್ತೆ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ತನಗೆ ಪರಿಚಯ ಎಂದು ಹೇಳಿಕೊಂಡಿದ್ದ ಮಹಿಳೆಯೊಬ್ಬರು ಪೊಲೀಸ್ ಇನ್ಸ್​ಪೆಕ್ಟರ್​​​ಗೆ ಪರಿಚಯ ಮಾಡಿಕೊಂಡಿದ್ದು, ಬಳಿಕ ತನ್ನ ಅಸಲಿ ಮುಖ ತೋಸಿದ್ದಾಳೆ. ‘Chinni Love u… u must love me’’ ಎಂದು ಪ್ರೀತಿ ನಿವೇದನೆ ಮಾಡುತ್ತಾ ಇನ್ಸ್​ಪೆಕ್ಟ ಹಿಂದೆ ದುಂಬಾಲು ಬಿದ್ದಿದ್ದು, ಮನೆಯಿಂದ ಕಜ್ಜಾಯ ಮಾಡಿ ಪೊಲೀಸ್ ಠಾಣೆಗೆ ಕಳುಹಿಸುತ್ತಿದ್ದಳು. ಇದೀಗ ಮಹಿಳೆಯ ಅತಿರೇಕದ ಪ್ರೀತಿಗೆ ಇನ್ಸ್​​​ಪೆಕಟ್ರ್​​ ತಕ್ಕ ಶಾಸ್ತಿ ಮಾಡಿದ್ದಾರೆ.

ಪ್ರೀತ್ಸೆ ಪ್ರೀತ್ಸೆ ಅಂತ ಬೆಂಗಳೂರಿನ ಪೊಲೀಸ್​​ ಇನ್ಸ್​ಪೆಕ್ಟರ್​​​ ಹಿಂದೆ ಬಿದ್ದಿದ್ದ ಮಹಿಳೆಗೆ ತಕ್ಕ ಶಾಸ್ತಿ
ವನಜಾ ಅಲಿಯಾಸ್ ಸಂಜನಾ
ರಮೇಶ್ ಬಿ. ಜವಳಗೇರಾ
|

Updated on: Dec 17, 2025 | 6:01 PM

Share

ಬೆಂಗಳೂರು, (ಡಿಸೆಂಬರ್ 17): ಬೆಂಗಳೂರಿನ (Bengaluru) ರಾಮಮೂರ್ತಿ ನಗರ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್ ಸತೀಶ್ ಅವರಿಗೆ ಪ್ರೀತ್ಸೆ ಪ್ರೀತ್ಸೆ ಎಂದು ಕಾಟ ಕೊಡುತ್ತಿದ್ದ ಮಹಿಳೆಯನ್ನು ಬಂಧಿಸಲಾಗಿದೆ. ವನಜಾ ಅಲಿಯಾಸ್ ಸಂಜನಾ ಬಂಧಿತ ಮಹಿಳೆ. ಈಕೆ ರಾಮಮೂರ್ತಿ ನಗರ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್ ಸತೀಶ್ ಅವರಿಗೆ ಲವ್ ಮಾಡುವಂತೆ ದುಂಬಾಲು ಬಿದ್ದಿದ್ದಳು. ಪ್ರೀತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಳು. ಹೀಗಾಗಿ ಈ ಅತಿರೇಕದ ಪ್ರೇಮ ಕಾಟ ಇನ್ಸ್​​ಪೆಕ್ಟರ್​​ಗೆ ದಿನೇ ದಿನೇ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಕೊನೆಗೆ ಸತೀಶ್ ಅವರು ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿದ್ದು, ಇದೀಗ ಭಗ್ನ ಪ್ರೇಮಿ ವನಜಾ ಅಲಿಯಾಸ್ ಸಂಜನಾಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರೀತಿ ಬಲೆಗೆ ಬೀಳಿಸಿಕೊಳ್ಳಲು ಇನ್ನಿಲ್ಲದ ಕಸರತ್ತು

ಮಹಿಳೆಯ ಕಾಟ ಎಷ್ಟರ ಮಟ್ಟಿಗೆ ಹೋಗಿತ್ತು ಎಂದರೆ, ಇನ್ಸ್​​ಪೆಕ್ಟರ್ ಠಾಣೆಯಲ್ಲಿ ಇಲ್ಲದ ವೇಳೆ ಕಜ್ಜಾಯದ ಡಬ್ಬಿ, ಹೂಗುಚ್ಛ ತಂದು ಠಾಣೆಯಲ್ಲೇ ಇಟ್ಟಿದ್ದಳು. ಇನ್ನು ಬರೋಬ್ಬರಿ 11 ವಿಭಿನ್ನ ಮೊಬೈಲ್ ಸಂಖ್ಯೆಗಳ ಮೂಲಕ ಇನ್ಸ್​​ಪೆಕ್ಟರ್‌ಗೆ ಕರೆ ಮಾಡಿ ಪ್ರೀತಿ ನಿವೇದನೆ ಮಾಡುತ್ತಿದ್ದಳು. ಇನ್ನೊಂದು ಹೆಜ್ಜೆ ಮುಂದೆ ಹೋಗಿ ಇನ್ಸ್​​ಪೆಪೆಕ್ಟರ್​​​​​​​ ಮನ ಗೆಲ್ಲಲು ರಕ್ತದಲ್ಲೇ ಪ್ರೇಮ ಪತ್ರ ಬರೆದಿದ್ದಳು. ಅದಕ್ಕೂ ಇನ್ಸ್​​ಪೆಕ್ಟರ್​​ ಮನಸ್ಸು ಕರಗದಿದ್ದಕ್ಕೆ ಆತ್ಮಹತ್ಯೆ ಅಸ್ತ್ರ ಬಳಸಿದ್ದಾಳೆ. ನನ್ನ ಲವ್ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಲವ್ ಲೆಟರ್ ಜೊತೆಗೆ ‘Nexito Plus’ ಎಂಬ ಮಾತ್ರೆಯನ್ನು ಕೂಡ ಪೊಲೀಸ್ ಠಾಣೆಗೆ ಕಳುಹಿಸಿದ್ದಳು.

ಇದನ್ನೂ ಓದಿ: Love U ಚಿನ್ನಿ: ಲವ್ ಮಾಡುವಂತೆ ಇನ್ಸ್​ಪೆಕ್ಟರ್ ಹಿಂದೆ ಬಿದ್ದ ಕಾಂಗ್ರೆಸ್ ಕಾರ್ಯಕರ್ತೆ, ಆಮೇಲೇನಾಯ್ತು?

ವನಜಾ ಅಲಿಯಾಸ್ ಸಂಜನಾಳ ಅತಿರೇಕದ ಪ್ರೇಮದ ಕಾಟಕ್ಕೆ ಇನ್ಸ್​ಪೆಕ್ಟರ್​​ ಸುಸ್ತಾಗಿದ್ದರು. ಅಲ್ಲದೇ ಇದರಿಂದ ಮುಜುಗರಕ್ಕೊಳಗಾಗಿದ್ದರು. ದಿನೇ ದಿನೇ ಈಕೆಯ ಕಾಟ ತಾಳಲಾರದೇ ಇನ್ಸ್​ಪೆಕ್ಟರ್​​ ಸತೀಶ್ ಅವರು ಕಾನೂನು ಕ್ರಮದ ಮೂಲಕ ಬುದ್ಧಿ ಕಲಿಸಬೇಕೆಂದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಆತ್ಮಹತ್ಯೆ ಬೆದರಿಕೆ ಆರೋಪದಡಿ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು.

ಇನ್ಸ್​ಪೆಕ್ಟರ್​​ನ ಪರಿಯಚ ಮಾಡಿಕೊಂಡಿದ್ಹೇಗೆ?

ವನಜಾ ಅಲಿಯಾಸ್ ಸಂಜನಾ ಬಿಲ್ಡಪ್ ಕೊಟ್ಟು ರಾಮಮೂರ್ತಿ ನಗರದ ಇನ್ಸ್​ಪೆಕ್ಟರ್​​ ಸತೀಶ್ ಅವರನ್ನು ಪರಿಚಯ ಮಾಡಿಕೊಂಡಿದ್ದಳು. ತಾನು ಕಾಂಗ್ರೆಸ್ ಕಾರ್ಯಕರ್ತೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ತನಗೆ ಪರಿಚಯ ಎಂದು ಹೇಳಿಕೊಂಡಿದ್ದಳು. ಅಲ್ಲದೇ ಮೋಟಮ್ಮ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರೊಂದಿಗೆ ಇರುವ ಫೋಟೋಗಳನ್ನು ಕಳುಹಿಸಿ ಪರಿಚಯಿಸಿಕೊಂಡಿದ್ದಳು. ಬಳಿಕ ಪ್ರೀತಿಸಲೇಬೇಕು ಎಂದು ಇನ್ಸ್​ಪೆಕ್ಟರ್ ಮೇಲೆ ಒತ್ತಡ ಹೇರಿಲಾರಂಭಿಸಿದ್ದಳು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ