AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: 20ಕ್ಕೂ ಹೆಚ್ಚು ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

ಕಿಟ್ಟಿ ಪಾರ್ಟಿಯಲ್ಲಿ ಪರಿಚಯಿಸಿಕೊಂಡು ಮಹಿಳೆಯೊಬ್ಬಳು ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಎಂ.ಬಿ.ಪಾಟೀಲ್ ನಂತಹ ಪ್ರಭಾವಿ ನಾಯಕರ ಹೆಸರು ಬಳಸಿ ಗಾಳ ಹಾಕಿತ್ತಿದ್ದ ಮಹಿಳೆ ಇದೀಗ ಪೊಲೀಸರ ಅತಿಥಿಯಾಗಿದ್ದು, 20ಕ್ಕೂ ಹೆಚ್ಚು ಮಹಿಳೆಯರಿಗೆ ಬರೋಬ್ಬರಿ 30 ಕೋಟಿ ರೂಪಾಯಿಗೂ ಅಧಿಕ ಹಣ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.

ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ:  20ಕ್ಕೂ ಹೆಚ್ಚು ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌
Savita
ಶಿವಪ್ರಸಾದ್​ ಬಿ.
| Edited By: |

Updated on:Apr 04, 2026 | 8:08 PM

Share

ಬೆಂಗಳೂರು, (ಜುಲೈ 09):  ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಸ್ನೇಹಿತೆಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಮಹಿಳೆ ಸಿಕ್ಕಿಬಿದ್ದಿದ್ದಾಳೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಹೇಳಿಕೊಂಡು ಗಾಳ ಹಾಕುತ್ತಿದ್ದ ಸವಿತಾ ಎನ್ನುವ ಮಹಿಳೆಯನ್ನು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಕಿಟ್ಟಿ ಪಾರ್ಟಿಯಲ್ಲಿ ನೆಪದಲ್ಲಿ ಶ್ರೀಮಂತ ಮಹಿಳೆಯರನ್ನೇ ಟಾರ್ಗೇಟ್ ಮಾಡುತ್ತಿದ್ದ ಸವಿತಾ, ಈವರೆಗೆ 20ಕ್ಕೂ ಹೆಚ್ಚು ಮಹಿಳೆಯರಿಗೆ ಬರೋಬ್ಬರಿ 30 ಕೋಟಿ ರೂಪಾಯಿಗೂ ಅಧಿಕ ಹಣ ವಂಚನೆ ಮಾಡಿದ್ದಾಳೆ ಎಂದು ತಿಳಿದುಬಂದಿದ್ದು, ಈ ಸಂಬಂಧ ಪೊಲೀಸರು ತನಿಖೆ ನಡೆಸಿದ್ದಾರೆ.

ಕಿಟ್ಟಿ ಪಾರ್ಟಿ ಹೆಸರಲ್ಲಿ ಶ್ರೀಮಂತ ಮಹಿಳೆಯರನ್ನ ಪರಿಚಯ ಮಾಡಿಕೊಂಡಿದ್ದ ಸವಿತಾ ತನಗೆ ಹಲವು ರಾಜಕಾರಣಿಗಳು ಗೊತ್ತೆಂದು ಹೇಳಿಕೊಳ್ಳುತ್ತಿದ್ದಳು. ಸಿಎಂ, ಡಿಸಿಎಂ, ಎಂಬಿ ಪಾಟಿಲ್ ಹೆಸರೇಳಿ ಗಾಳ ಹಾಕುತ್ತಿದ್ದಳು. ಬಳಿಕ ಅವರನ್ನ ಪುಸಲಾಯಿಸಿ ಹೂಡಿಕೆ ನೆಪದಲ್ಲಿ ಹಣ ಪಡೆದು ವಂಚಿಸುತ್ತಿದ್ದಳು.

ಅಮೆರಿಕದಿಂದ (USA) ಕಮ್ಮಿ ಬೆಲೆಗೆ ಚಿನ್ನ ತರಿಸಿಕೊಡುವುದಾಗಿ ಒಬ್ಬರಿಂದ ತಲಾ 50 ಲಕ್ಷದಿಂದ ಎರಡೂವರೆ ಕೋಟಿ ಹಣ ಪಡೆದು ವಾಪಸ್ ಹಣ ನೀಡದೇ ವಂಚಿಸಿದ್ದಾಳೆ. ಈ ಸಂಬಂಧ ಈ ಹಿಂದೆ ಗೋವಿಂದರಾಜನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನವಾಗಿ ಬಳಿಕ ಜಾಮೀನಿನ ಮೇಲೆ ಆಚೆ ಬಂದಿದ್ದಳು. ಬಳಿಕ ಸವಿತಾ ಮತ್ತದೇ ತನ್ನ ಹಳೇ ಚಾಳಿಯನ್ನೇ ಮುಂದುವರೆಸಿದ್ದು, ಇದೀಗ ಬಸವೇಶ್ವರ ನಗರ ಪೊಲೀಸರ ಅತಿಥಿಯಾಗಿದ್ದಾಳೆ.

Published On - 3:39 pm, Wed, 9 July 25

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ