AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: 20ಕ್ಕೂ ಹೆಚ್ಚು ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

ಕಿಟ್ಟಿ ಪಾರ್ಟಿಯಲ್ಲಿ ಪರಿಚಯಿಸಿಕೊಂಡು ಮಹಿಳೆಯೊಬ್ಬಳು ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಎಂ.ಬಿ.ಪಾಟೀಲ್ ನಂತಹ ಪ್ರಭಾವಿ ನಾಯಕರ ಹೆಸರು ಬಳಸಿ ಗಾಳ ಹಾಕಿತ್ತಿದ್ದ ಮಹಿಳೆ ಇದೀಗ ಪೊಲೀಸರ ಅತಿಥಿಯಾಗಿದ್ದು, 20ಕ್ಕೂ ಹೆಚ್ಚು ಮಹಿಳೆಯರಿಗೆ ಬರೋಬ್ಬರಿ 30 ಕೋಟಿ ರೂಪಾಯಿಗೂ ಅಧಿಕ ಹಣ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.

ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ:  20ಕ್ಕೂ ಹೆಚ್ಚು ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌
Savita
Shivaprasad B
| Edited By: |

Updated on:Jul 09, 2025 | 3:43 PM

Share

ಬೆಂಗಳೂರು, (ಜುಲೈ 09):  ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಸ್ನೇಹಿತೆಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಮಹಿಳೆ ಸಿಕ್ಕಿಬಿದ್ದಿದ್ದಾಳೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಹೇಳಿಕೊಂಡು ಗಾಳ ಹಾಕುತ್ತಿದ್ದ ಸವಿತಾ ಎನ್ನುವ ಮಹಿಳೆಯನ್ನು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಕಿಟ್ಟಿ ಪಾರ್ಟಿಯಲ್ಲಿ ನೆಪದಲ್ಲಿ ಶ್ರೀಮಂತ ಮಹಿಳೆಯರನ್ನೇ ಟಾರ್ಗೇಟ್ ಮಾಡುತ್ತಿದ್ದ ಸವಿತಾ, ಈವರೆಗೆ 20ಕ್ಕೂ ಹೆಚ್ಚು ಮಹಿಳೆಯರಿಗೆ ಬರೋಬ್ಬರಿ 30 ಕೋಟಿ ರೂಪಾಯಿಗೂ ಅಧಿಕ ಹಣ ವಂಚನೆ ಮಾಡಿದ್ದಾಳೆ ಎಂದು ತಿಳಿದುಬಂದಿದ್ದು, ಈ ಸಂಬಂಧ ಪೊಲೀಸರು ತನಿಖೆ ನಡೆಸಿದ್ದಾರೆ.

ಕಿಟ್ಟಿ ಪಾರ್ಟಿ ಹೆಸರಲ್ಲಿ ಶ್ರೀಮಂತ ಮಹಿಳೆಯರನ್ನ ಪರಿಚಯ ಮಾಡಿಕೊಂಡಿದ್ದ ಸವಿತಾ ತನಗೆ ಹಲವು ರಾಜಕಾರಣಿಗಳು ಗೊತ್ತೆಂದು ಹೇಳಿಕೊಳ್ಳುತ್ತಿದ್ದಳು. ಸಿಎಂ, ಡಿಸಿಎಂ, ಎಂಬಿ ಪಾಟಿಲ್ ಹೆಸರೇಳಿ ಗಾಳ ಹಾಕುತ್ತಿದ್ದಳು. ಬಳಿಕ ಅವರನ್ನ ಪುಸಲಾಯಿಸಿ ಹೂಡಿಕೆ ನೆಪದಲ್ಲಿ ಹಣ ಪಡೆದು ವಂಚಿಸುತ್ತಿದ್ದಳು.

ಇದನ್ನೂ ಓದಿ: ಬೆಟ್ಟಿಂಗ್ ಚಟಕ್ಕೆ ಬಿದ್ದು ತಂದೆ ಆಸ್ತಿ ಮಾರಿಸಿದ ಮಗ: ಆದರೂ ಬುದ್ಧಿ ಕಲಿಯದ ಇಂಜಿನಿಯರ್‌ ಕಳ್ಳನಾದ!

ಅಮೆರಿಕದಿಂದ (USA) ಕಮ್ಮಿ ಬೆಲೆಗೆ ಚಿನ್ನ ತರಿಸಿಕೊಡುವುದಾಗಿ ಒಬ್ಬರಿಂದ ತಲಾ 50 ಲಕ್ಷದಿಂದ ಎರಡೂವರೆ ಕೋಟಿ ಹಣ ಪಡೆದು ವಾಪಸ್ ಹಣ ನೀಡದೇ ವಂಚಿಸಿದ್ದಾಳೆ. ಈ ಸಂಬಂಧ ಈ ಹಿಂದೆ ಗೋವಿಂದರಾಜನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನವಾಗಿ ಬಳಿಕ ಜಾಮೀನಿನ ಮೇಲೆ ಆಚೆ ಬಂದಿದ್ದಳು. ಬಳಿಕ ಸವಿತಾ ಮತ್ತದೇ ತನ್ನ ಹಳೇ ಚಾಳಿಯನ್ನೇ ಮುಂದುವರೆಸಿದ್ದು, ಇದೀಗ ಬಸವೇಶ್ವರ ನಗರ ಪೊಲೀಸರ ಅತಿಥಿಯಾಗಿದ್ದಾಳೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:39 pm, Wed, 9 July 25

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ