AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಸಿಗರೇಟ್ ಸೇದಿ ಆತಂಕ ಸೃಷ್ಟಿಸಿದ ಯುವತಿ, ಬೆಂಗಳೂರಿನಲ್ಲಿ ಫ್ಲೈಟ್​ ಲ್ಯಾಂಡ್​ ಆಗುತ್ತಿದ್ದಂತೆಯೇ ಅರೆಸ್ಟ್

ಕೋಲ್ಕತ್ತಾದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಸಿಗರೇಟ್ ಸೇದಿದ ಯುವತಿಯನ್ನು ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ವಿಮಾನದಲ್ಲಿ ಸಿಗರೇಟ್ ಸೇದಿ ಆತಂಕ ಸೃಷ್ಟಿಸಿದ ಯುವತಿ, ಬೆಂಗಳೂರಿನಲ್ಲಿ ಫ್ಲೈಟ್​ ಲ್ಯಾಂಡ್​ ಆಗುತ್ತಿದ್ದಂತೆಯೇ ಅರೆಸ್ಟ್
ಧೂಮಪಾನ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Mar 08, 2023 | 3:30 PM

Share

ದೇವನಹಳ್ಳಿ: ಇಂದು ಜಗತ್ತಿನಾದ್ಯಂತ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಮಹಿಳೆಯರ ಸಾಧನೆಯನ್ನು ಕೊಂಡಾಡಲಾಗುತ್ತಿದೆ. ಆದ್ರೆ ಇತ್ತ ಯುವತಿಯೊಬ್ಬಳ ವರ್ತನೆಯಿಂದ ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. ಕೋಲ್ಕತ್ತಾದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಸಿಗರೇಟ್ ಸೇದಿ ಯುವತಿ ಆತಂಕ ಸೃಷ್ಟಿಸಿದ್ದಾಳೆ.

ಮಾ.5ರಂದು ರಾತ್ರಿ 9.50ಕ್ಕೆ ಕೋಲ್ಕತ್ತಾದಿಂದ ಹೊರಟಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಪ್ರಿಯಾಂಕ ಎಂಬ ಯುವತಿ ಇಂಡಿಗೋ 6E716 ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡಿದ್ದಾಳೆ. ವಿಮಾನ ಬೆಂಗಳೂರಿಗೆ ಲ್ಯಾಂಡ್ ಆಗುವ ಅರ್ಧ ಗಂಟೆ ಮುನ್ನ ಸಿಗರೇಟ್ ಸೇದಿದ್ದಾಳೆ. ಶೌಚಾಲಯ ಬಾಗಿಲು ತೆಗಿಸಿದಾಗ ಡಸ್ಟ್ ಬಿನ್​ನಲ್ಲಿ ಸಿಗರೇಟ್ ತುಂಡು ಪತ್ತೆಯಾಗಿದೆ. ಸಿಗರೇಟ್ ಕಂಡು ತಕ್ಷಣ ಸಿಬ್ಬಂದಿ ಡಸ್ಟ್ ಬಿನ್​ಗೆ ನೀರು ಸುರಿದಿದ್ದಾರೆ. ಬಳಿಕ ಫ್ಲೈಟ್ ಲ್ಯಾಂಡ್ ಆಗುತ್ತಿದ್ದಂತೆ ಯುವತಿಯನ್ನು ವಶಕ್ಕೆ ಪಡೆಯಲಾಗಿದೆ. ಈ ವೇಳೆ ಕೆಲಕಾಲ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು. ಇತರರ ಜೀವ & ವೈಯಕ್ತಿಕ ಸುರಕ್ಷತೆಗೆ ಅಪಾಯ ಆರೋಪದಡಿ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:05 pm, Wed, 8 March 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!