AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀನು ಕುರೂಪಿ, ಸುಂದರವಾಗಿಲ್ಲ ಎಂದು ಗಂಡನಿಂದ ನಿಂದನೆ ಆರೋಪ; ಮಹಿಳೆ ಆತ್ಮಹತ್ಯೆಗೆ ಶರಣು

ಫೆಬ್ರವರಿ 18 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೂರು ವರ್ಷದ ಹಿಂದೆ ನಿಜಾಮುದ್ದೀನ್ ಜೊತೆಗೆ ಅನಿಶಾ ಎರಡನೇ ಮದುವೆಯಾಗಿದ್ದರು. ದಂಪತಿಗೆ ಎರಡು ವರ್ಷ ಹಾಗೂ 6 ತಿಂಗಳ ಇಬ್ಬರು ಮಕ್ಕಳಿದ್ದಾರೆ.  ಮದುವೆಯಾದಾಗಿನಿಂದ ಗಂಡ ಹಾಗೂ ಅತ್ತೆಯಿಂದ ಕಿರುಕುಳ ಆರೋಪ ಕೇಳಿ ಬಂದಿದೆ.

ನೀನು ಕುರೂಪಿ, ಸುಂದರವಾಗಿಲ್ಲ ಎಂದು ಗಂಡನಿಂದ ನಿಂದನೆ ಆರೋಪ; ಮಹಿಳೆ ಆತ್ಮಹತ್ಯೆಗೆ ಶರಣು
ನಿಜಾಮುದ್ದೀನ್ ಮತ್ತು ಅನಿಶಾ
TV9 Web
| Updated By: preethi shettigar|

Updated on:Feb 22, 2022 | 8:52 AM

Share

ಬೆಂಗಳೂರು: ಮೈಮೇಲೆ ಸೀಮೆ ಎಣ್ಣೆ ಸುರಿದು, ಬೆಂಕಿ ಹಚ್ಚಿಕೊಂಡು ಮಹಿಳೆ(Woman) ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ನಗರದ ಡಿಜೆ ಹಳ್ಳಿಯ ಈದ್ಗಾ ಮೊಹಲ್ಲಾದಲ್ಲಿ ನಡೆದಿದೆ. ನೀನು ಕುರೂಪಿ, ಸುಂದರವಾಗಿಲ್ಲ ಎಂದು ಗಂಡ ನಿಂದನೆ ಮಾಡುತ್ತಾರೆ ಎಂದು ಮಹಿಳೆ ತನ್ನ ಕುಟುಂಬಸ್ಥರಲ್ಲಿ(Family) ಹೇಳಿಕೊಂಡಿದ್ದಳು. ಸದ್ಯ ಈ ವಿಷಯದಿಂದಲೇ ನೊಂದ ಮಹಿಳೆ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಅನಿಶಾ(33) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಫೆಬ್ರವರಿ 18 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೂರು ವರ್ಷದ ಹಿಂದೆ ನಿಜಾಮುದ್ದೀನ್ ಜೊತೆಗೆ ಅನಿಶಾ ಎರಡನೇ ಮದುವೆಯಾಗಿದ್ದರು. ದಂಪತಿಗೆ ಎರಡು ವರ್ಷ ಹಾಗೂ 6 ತಿಂಗಳ ಇಬ್ಬರು ಮಕ್ಕಳಿದ್ದಾರೆ.  ಮದುವೆಯಾದಾಗಿನಿಂದ ಗಂಡ ಹಾಗೂ ಅತ್ತೆಯಿಂದ ಕಿರುಕುಳ ಆರೋಪ ಕೇಳಿ ಬಂದಿದೆ.

ನೀನು ಕುರೂಪಿ, ಸುಂದರವಾಗಿಲ್ಲ ಬೇಗ ಸಾಯಿ ಬೇರೆ ಮದುವೆ ಆಗುತ್ತೀನಿ ಎಂದು ಗಂಡ ಕಿರುಕುಳ ನೀಡುತ್ತಿದ್ದ. ಇದಕ್ಕೆ ನಿಜಾಮುದ್ದೀನ್ ತಾಯಿ ಖಲೀಂಉನ್ನೀಸಾ ಕೂಡ ಸಾಥ್​ ನೀಡುತ್ತಿದ್ದರು. 17 ನೇ ತಾರೀಕು ಕೂಡ ಗಂಡ ಹಾಗೂ ಅತ್ತೆ ಬೈದಿದ್ದರು. ಹೀಗಾಗಿ 18 ರಂದು ಮುಂಜಾನೆ 12.30 ಕ್ಕೆ ಸೀಮೆ ಎಣ್ಣೆ ಸುರಿದುಕೊಂಡು ಅನಿಶಾ ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಕಿ ನಂದಿಸಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ(ಫೆಬ್ರವರಿ 22) ಅನಿಶಾ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೋಲಾರ: ಮಾವಿನ ತೋಪಿನಲ್ಲಿ ಕತ್ತು ಕೊಯ್ದು ವೃದ್ಧನ ಕೊಲೆ

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಇಂದಿರಾನಗರದ ಬಳಿ ಮಾವಿನ ತೋಪಿನಲ್ಲಿ ಕತ್ತು ಕೊಯ್ದು ವೃದ್ಧನ ಕೊಲೆ ಮಾಡಿದ್ದಾರೆ. ಕತ್ತು ಕೊಯ್ದು ಗಂಡುಮನತ್ತ ಗ್ರಾಮದ ಮುನಿಸ್ವಾಮಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲಾ.

ಇದನ್ನೂ ಓದಿ: New Book: ಶೆಲ್ಫಿಗೇರುವ ಮುನ್ನ; ಜಿಬಿ ಹರೀಶರ ‘ಕಲಾಯೋಗಿ ಆನಂದ ಕುಮಾರಸ್ವಾಮಿ’ ಓದಿಗೆ ಲಭ್ಯ

Suicide: ಹೋಟೆಲ್​ನ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ರೂಪದರ್ಶಿ

Published On - 8:34 am, Tue, 22 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ