AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀನು ಕುರೂಪಿ, ಸುಂದರವಾಗಿಲ್ಲ ಎಂದು ಗಂಡನಿಂದ ನಿಂದನೆ ಆರೋಪ; ಮಹಿಳೆ ಆತ್ಮಹತ್ಯೆಗೆ ಶರಣು

ಫೆಬ್ರವರಿ 18 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೂರು ವರ್ಷದ ಹಿಂದೆ ನಿಜಾಮುದ್ದೀನ್ ಜೊತೆಗೆ ಅನಿಶಾ ಎರಡನೇ ಮದುವೆಯಾಗಿದ್ದರು. ದಂಪತಿಗೆ ಎರಡು ವರ್ಷ ಹಾಗೂ 6 ತಿಂಗಳ ಇಬ್ಬರು ಮಕ್ಕಳಿದ್ದಾರೆ.  ಮದುವೆಯಾದಾಗಿನಿಂದ ಗಂಡ ಹಾಗೂ ಅತ್ತೆಯಿಂದ ಕಿರುಕುಳ ಆರೋಪ ಕೇಳಿ ಬಂದಿದೆ.

ನೀನು ಕುರೂಪಿ, ಸುಂದರವಾಗಿಲ್ಲ ಎಂದು ಗಂಡನಿಂದ ನಿಂದನೆ ಆರೋಪ; ಮಹಿಳೆ ಆತ್ಮಹತ್ಯೆಗೆ ಶರಣು
ನಿಜಾಮುದ್ದೀನ್ ಮತ್ತು ಅನಿಶಾ
TV9 Web
| Edited By: |

Updated on:Feb 22, 2022 | 8:52 AM

Share

ಬೆಂಗಳೂರು: ಮೈಮೇಲೆ ಸೀಮೆ ಎಣ್ಣೆ ಸುರಿದು, ಬೆಂಕಿ ಹಚ್ಚಿಕೊಂಡು ಮಹಿಳೆ(Woman) ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ನಗರದ ಡಿಜೆ ಹಳ್ಳಿಯ ಈದ್ಗಾ ಮೊಹಲ್ಲಾದಲ್ಲಿ ನಡೆದಿದೆ. ನೀನು ಕುರೂಪಿ, ಸುಂದರವಾಗಿಲ್ಲ ಎಂದು ಗಂಡ ನಿಂದನೆ ಮಾಡುತ್ತಾರೆ ಎಂದು ಮಹಿಳೆ ತನ್ನ ಕುಟುಂಬಸ್ಥರಲ್ಲಿ(Family) ಹೇಳಿಕೊಂಡಿದ್ದಳು. ಸದ್ಯ ಈ ವಿಷಯದಿಂದಲೇ ನೊಂದ ಮಹಿಳೆ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಅನಿಶಾ(33) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಫೆಬ್ರವರಿ 18 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೂರು ವರ್ಷದ ಹಿಂದೆ ನಿಜಾಮುದ್ದೀನ್ ಜೊತೆಗೆ ಅನಿಶಾ ಎರಡನೇ ಮದುವೆಯಾಗಿದ್ದರು. ದಂಪತಿಗೆ ಎರಡು ವರ್ಷ ಹಾಗೂ 6 ತಿಂಗಳ ಇಬ್ಬರು ಮಕ್ಕಳಿದ್ದಾರೆ.  ಮದುವೆಯಾದಾಗಿನಿಂದ ಗಂಡ ಹಾಗೂ ಅತ್ತೆಯಿಂದ ಕಿರುಕುಳ ಆರೋಪ ಕೇಳಿ ಬಂದಿದೆ.

ನೀನು ಕುರೂಪಿ, ಸುಂದರವಾಗಿಲ್ಲ ಬೇಗ ಸಾಯಿ ಬೇರೆ ಮದುವೆ ಆಗುತ್ತೀನಿ ಎಂದು ಗಂಡ ಕಿರುಕುಳ ನೀಡುತ್ತಿದ್ದ. ಇದಕ್ಕೆ ನಿಜಾಮುದ್ದೀನ್ ತಾಯಿ ಖಲೀಂಉನ್ನೀಸಾ ಕೂಡ ಸಾಥ್​ ನೀಡುತ್ತಿದ್ದರು. 17 ನೇ ತಾರೀಕು ಕೂಡ ಗಂಡ ಹಾಗೂ ಅತ್ತೆ ಬೈದಿದ್ದರು. ಹೀಗಾಗಿ 18 ರಂದು ಮುಂಜಾನೆ 12.30 ಕ್ಕೆ ಸೀಮೆ ಎಣ್ಣೆ ಸುರಿದುಕೊಂಡು ಅನಿಶಾ ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಕಿ ನಂದಿಸಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ(ಫೆಬ್ರವರಿ 22) ಅನಿಶಾ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೋಲಾರ: ಮಾವಿನ ತೋಪಿನಲ್ಲಿ ಕತ್ತು ಕೊಯ್ದು ವೃದ್ಧನ ಕೊಲೆ

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಇಂದಿರಾನಗರದ ಬಳಿ ಮಾವಿನ ತೋಪಿನಲ್ಲಿ ಕತ್ತು ಕೊಯ್ದು ವೃದ್ಧನ ಕೊಲೆ ಮಾಡಿದ್ದಾರೆ. ಕತ್ತು ಕೊಯ್ದು ಗಂಡುಮನತ್ತ ಗ್ರಾಮದ ಮುನಿಸ್ವಾಮಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲಾ.

ಇದನ್ನೂ ಓದಿ: New Book: ಶೆಲ್ಫಿಗೇರುವ ಮುನ್ನ; ಜಿಬಿ ಹರೀಶರ ‘ಕಲಾಯೋಗಿ ಆನಂದ ಕುಮಾರಸ್ವಾಮಿ’ ಓದಿಗೆ ಲಭ್ಯ

Suicide: ಹೋಟೆಲ್​ನ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ರೂಪದರ್ಶಿ

Published On - 8:34 am, Tue, 22 February 22

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ