AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್ ಲೇಔಟ್​ನಲ್ಲಿ ತಂದೆಯ ತಿಥಿ ಕಾರ್ಯಕ್ಕೆಂದು ಅಡುಗೆ ಮಾಡುವಾಗ ಗ್ಯಾಸ್ ಸೋರಿಕೆಯಾಗಿ ಮಗಳ ದಾರುಣ ಸಾವು

ಗ್ಯಾಸ್ ಸೋರಿಕೆಯಾಗಿ ಬೆಂಕಿಯ ತೀವ್ರತೆಗೆ ಗ್ಯಾಸ್ ಫ್ಲೇಮ್ ದೊಡ್ಡದಾಗಿ ಹೊತ್ತಿಕೊಂಡಿದೆ. ಈ ಪರಿಣಾಮ ಅಡುಗೆ ಮಾಡ್ತಿದ್ದ ಮೃತನ ಮಗಳು ಪರಮೇಶ್ವರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೆಎಸ್ ಲೇಔಟ್​ನಲ್ಲಿ ತಂದೆಯ ತಿಥಿ ಕಾರ್ಯಕ್ಕೆಂದು ಅಡುಗೆ ಮಾಡುವಾಗ ಗ್ಯಾಸ್ ಸೋರಿಕೆಯಾಗಿ ಮಗಳ ದಾರುಣ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Feb 17, 2022 | 12:25 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನ ಕಲಕುವ ಘಟನೆಯೊಂದು ನಡೆದಿದೆ. ತಂದೆಯ ತಿಥಿ ಕಾರ್ಯದ ದಿನವೇ ಮಗಳ ದಾರುಣ ಸಾವಾಗಿದೆ. ತಿಥಿ ಕಾರ್ಯಕ್ಕೆಂದು ಅಡುಗೆ ಮಾಡುವಾಗ ಗ್ಯಾಸ್ ಸೋರಿಕೆಯಾಗಿ ಅನಾಹುತ ಸಂಭವಿಸಿದ್ದು ಪರಮೇಶ್ವರಿ(42) ಮೃತಪಟ್ಟಿದ್ದಾರೆ.ನಗರದ ಕೆಎಸ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ಮನೆಯೊಂದರಲ್ಲಿ ತಿಥಿ ಕಾರ್ಯಕ್ಕೆಂದು ಸಿದ್ಧತೆ ನಡೆದಿತ್ತು.

ಮನೆ ಚಿಕ್ಕದಿದ್ದ ಕಾರಣ ಕೋಣೆಯೊಂದರಲ್ಲಿ ಸ್ಟವ್ ಇಟ್ಟು ಅಡುಗೆ ಮಾಡಲು ಮೃತರ ಕುಟುಂಬಸ್ಥರು ತಯಾರಿ ನಡೆಸಿದ್ದರು. ತಿಥಿ ಕಾರ್ಯಕ್ಕೆ ನಾನ್ ವೆಜ್ ಅಡುಗೆ ಮಾಡಲು ಕುಟುಂಬಸ್ಥರು‌ ಸಿಲಿಂಡರ್ ತರಿಸಿದ್ದರು. ಇದೇ ವೇಳೆ ಗ್ಯಾಸ್ ಸೋರಿಕೆಯಾಗಿ ಬೆಂಕಿಯ ತೀವ್ರತೆಗೆ ಗ್ಯಾಸ್ ಫ್ಲೇಮ್ ದೊಡ್ಡದಾಗಿ ಹೊತ್ತಿಕೊಂಡಿದೆ. ಈ ಪರಿಣಾಮ ಅಡುಗೆ ಮಾಡ್ತಿದ್ದ ಮೃತನ ಮಗಳು ಪರಮೇಶ್ವರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಆರು ಮಂದಿಗೆ ಗಾಯಗಳಾಗಿದ್ದು, ವಿಕ್ಟೋರಿಯಾ ಬರ್ನಿಂಗ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯುವತಿ ರಕ್ಷಣೆ ಮಾಡಲು ಹೋಗಿ ಯುವಕ ನೀರುಪಾಲು ವಿಜಯನಗರ: ಸಾಲದ ಸುಳಿಗೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ನಡೆದಿದೆ. ಜಮೀನಿನಲ್ಲಿ ಮರಕ್ಕೆ‌ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗರಗದ ನಾಗರಾಜ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡಿದ್ದ ನಾಗರಾಜ, ಸಾಲಕ್ಕೆ ಸೋತು ಸಾವಿಗೆ ಶರಣಾಗಿದ್ದಾರೆ. ಕೂಟ್ಟೂರು ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬಳ್ಳಾರಿ: ಕೆರೆ ನೋಡಲು ಹೋಗಿದ್ದಾಗ ಕಾಲು ಜಾರಿ ಬಿದ್ದಿದ್ದ ಯುವತಿ ರಕ್ಷಣೆ ಮಾಡಲು ಹೋಗಿ ಯುವಕ ನೀರುಪಾಲು ಆದ ದುರ್ಘಟನೆ ನಡೆದಿದೆ. ಸಂಡೂರು ತಾಲೂಕಿನ ಹೊಸದರೋಜಿ ಕೆರೆಯಲ್ಲಿ ಮುಳುಗಿ ಬಿಬಿಎ ವಿದ್ಯಾರ್ಥಿ ಸಂದೀಪ್ ಸಾವನ್ನಪ್ಪಿದ್ದಾರೆ. ಯುವತಿಯನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಕುಡತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಅಡುಗೆ ಮನೆಯನ್ನು ನೀಟ್​ಆಗಿ ಇರಿಸಿಕೊಳ್ಳಲು ಹೀಗೆ ಮಾಡಿ

Follow Us
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು