AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RT nagar: ಓವರ್ ಡೋಸ್​​ ಇಂಜೆಕ್ಷನ್​ ಮತ್ತು ಮಾತ್ರೆ ನೀಡಿದ್ದೇ ಮಹಿಳೆಯ ಸಾವಿಗೆ ಕಾರಣವಾಯ್ತಾ?

woman death: ಕವಿತಾ ಸಾವಿಗೆ ಆಸ್ಪತ್ರೆ ವಿರುದ್ಧ ಕಿಡಿಕಾರಿರುವ ಪತಿ ಸುನೀಲ್ ಮತ್ತು ಸಂಬಂಧಿಕರು ಹೆಲ್ತ್ ಸಮ್ಮರಿಯಲ್ಲಿ 2023ರಲ್ಲಿ ಸಾವನ್ನಪ್ಪಿರುವುದಾಗಿ ಚಿರಾಯು ಆಸ್ಪತ್ರೆಯವರು ರಿಪೋರ್ಟ್ ನೀಡಿರುವುದಾಗಿ ಹೇಳಿದ್ದಾರೆ.

RT nagar: ಓವರ್ ಡೋಸ್​​ ಇಂಜೆಕ್ಷನ್​ ಮತ್ತು ಮಾತ್ರೆ ನೀಡಿದ್ದೇ ಮಹಿಳೆಯ ಸಾವಿಗೆ ಕಾರಣವಾಯ್ತಾ?
ಓವರ್ ಡೋಸ್​​ ಇಂಜೆಕ್ಷನ್​ ಮತ್ತು ಮಾತ್ರೆ ನೀಡಿದ್ದೇ ಮಹಿಳೆಯ ಸಾವಿಗೆ ಕಾರಣವಾಯ್ತಾ?
TV9 Web
| Edited By: |

Updated on: Nov 23, 2022 | 4:41 PM

Share

ಬೆಂಗಳೂರು: ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು (woman) ಬೆಂಗಳೂರಿನ ಆರ್​​.ಟಿ. ನಗರದ (RT nagar Bangalore) ಚಿರಾಯು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕವಿತಾ (24) ಮೃತಪಟ್ಟವರು (death). ಓವರ್ ಡೋಸ್​​ ಇಂಜೆಕ್ಷನ್​ ಮತ್ತು ಮಾತ್ರೆ ನೀಡಿದ್ದೇ ಸಾವಿಗೆ ಕಾರಣವೆಂದು ಆಸ್ಪತ್ರೆಯ ವೈದ್ಯರ ವಿರುದ್ಧ ಮೃತ ಕವಿತಾ ಪತಿ ಸುನೀಲ್ ಆರೋಪ ಮಾಡಿದ್ದಾರೆ. ಕವಿತಾ ಮೃತಪಟ್ಟ ವಿಷಯ ತಿಳಿಯುತ್ತಲೇ ಸಂಬಂಧಿಕರು ಆಸ್ಪತ್ರೆ ಮುಂದೆ ಜಮಾಯಿಸಿ, ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 7 ತಿಂಗಳ ಹಿಂದೆಯಷ್ಟೇ ಕವಿತಾ-ಸುನೀಲ್ ಮದುವೆ ಆಗಿತ್ತು. ಒಂದು ತಿಂಗಳ ಹಿಂದೆ ಕವಿತಾಳಿಗೆ ಗರ್ಭಪಾತ ಆಗಿತ್ತು. ಬಳಿಕ ಸಣ್ಣಪುಟ್ಟ ಸಮಸ್ಯೆಯಿಂದ ಕವಿತಾ ಬಳಲುತ್ತಿದ್ದರು.

ನ್ಯುಮೋನಿಯಾ ಅಂತ ಬಂದ ಮಹಿಳೆಯ ಜೀವ ತೆಗೆದ ಖಾಸಗಿ ಆಸ್ಪತ್ರೆ?

ಕವಿತಾ ಸಾವಿಗೆ ಆಸ್ಪತ್ರೆ ವಿರುದ್ಧ ಕಿಡಿಕಾರಿರುವ ಪತಿ ಸುನೀಲ್ ಮತ್ತು ಸಂಬಂಧಿಕರು ಹೆಲ್ತ್ ಸಮ್ಮರಿಯಲ್ಲಿ 2023ರಲ್ಲಿ ಸಾವನ್ನಪ್ಪಿರುವುದಾಗಿ ಚಿರಾಯು ಆಸ್ಪತ್ರೆಯವರು ರಿಪೋರ್ಟ್ ನೀಡಿದ್ದಾರೆ. ಹೃದಯಾಘಾತ, ಡೆಂಗ್ಯೂ, ಕೋವಿಡ್ ಪಾಸಿಟಿವ್ ನಿಂದ ಸಾವನ್ನಪ್ಪಿದ್ದಾರೆ ಅಂತ ವೈದ್ಯರು ಹೇಳ್ತಿದ್ದಾರೆ. ಆದರೆ ಓವರ್ ಡೋಸ್ ಮಾತ್ರೆ, ಇಂಜೆಕ್ಷನ್ ನೀಡಿದ್ದೇ ನನ್ನ ಪತ್ನಿ ಸಾವಿಗೆ ಕಾರಣ ಎಂದು ಮೃತ ಕವಿತಾಳ ಪತಿ ಸುನಿಲ್ ಗಂಭೀರ ಆರೋಪ ಮಾಡಿದ್ದಾರೆ. ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

11 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಟೆಕ್ಕಿ ದಂಪತಿ, ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ:

ಬೆಂಗಳೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ರಿಚರ್ಡ್ ಗಾರ್ಡನ್ ನಲ್ಲಿ ನವೆಂಬರ್ 10ರಂದು ನಡೆದಿದೆ. ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಶ್ವೇತಾ (27) ನೇಣಿಗೆ ಶರಣಾದ ದುರ್ದೈವಿ. ಪತಿ ಅಭಿಷೇಕ್ ವಿರುದ್ಧ ಮೃತಳ ಕುಟುಂಬಸ್ಥರು ಇದೀಗ ಆರೋಪ ಮಾಡಿದ್ದಾರೆ. ಅಂದಹಾಗೆ ಶ್ವೇತಾ-ಅಭಿಷೇಕ್ ಜೋಡಿ11 ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು.

ಐಬಿಎಂ ಕಂಪನಿ ಉದ್ಯೋಗಿಯಾಗಿದ್ದ ಶ್ವೇತ, ಟಿಸಿಎಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕನನ್ನು ಮದುವೆಯಾಗಿದ್ದರು. ಮದುವೆಗೂ ಮುನ್ನ ಯುವತಿಯೊಬ್ಬಳೊಂದಿಗೆ ಅಭಿಷೇಕ್ ಸಂಬಂಧ ಹೊಂದಿದ್ದನಂತೆ. ಮದುವೆಯ ನಂತರ ಈ ವಿಚಾರ ಗೊತ್ತಾಗಿ ದಂಪತಿ ನಡುವೆ ಜಗಳವಾಗಿತ್ತು. ಪರಸ್ಪರ ರಾಜಿ ಪಂಚಾಯತಿ ಬಳಿಕ ಇಬ್ಬರೂ ಒಟ್ಟಿಗೆ ಜೀವನ ಸಾಗಿಸುತ್ತಿದ್ದರು.

ಈ‌ ನಡುವೆ ಅಭಿಷೇಕ್ ಪುನಃ ತನ್ನ ಹಳೇ ಚಾಳಿ‌ ಮುಂದುವರೆಸಿದ್ದನಂತೆ. ಅದರಿಂದ ಬೇಸತ್ತ ಶ್ವೇತಾ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ರಾಮಮೂರ್ತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Also Read:

ಸಂವಿಧಾನವೇ ನಮ್ಮ ರಾಷ್ಟ್ರಧರ್ಮ; ನಾಡಿನ ಜನತೆಗೆ ಸಂವಿಧಾನ ದಿನದ ಶುಭಕಾಮನೆ ತಿಳಿಸಿದ ಸಿಎಂ ಬೊಮ್ಮಾಯಿ

Also Read:

Fact Check ಸಂವಿಧಾನದ ಪೀಠಿಕೆಯ ಹಿಂಭಾಗದ ಖಾಲಿ ಪುಟ ಓದುತ್ತಿರುವ ಅಮಿತ್ ಶಾ; ವೈರಲ್ ಚಿತ್ರದ ಸತ್ಯಾಸತ್ಯತೆ ಏನು?

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ