AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬಾರಿ ಬೆಲೆಯ ಪರ್ಷಿಯನ್ ಬೆಕ್ಕು ಕಳ್ಳತನ; ಬೆಂಗಳೂರಿನಲ್ಲಿ ಎಫ್ಐಆರ್ ದಾಖಲು, ಬೆಕ್ಕು ಹುಡುಕಿಕೊಟ್ಟರೆ 35 ಸಾವಿರ ಬಹುಮಾನ

ದುಬಾರಿ ಬೆಲೆಯ ಪರ್ಷಿಯನ್ ಬೆಕ್ಕು ಕಾಣೆಯಾಗಿದೆ ಎಂದು ಮಿಸ್ಬಾ ಶರೀಫ್ ತಿಲಕನಗರ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ದುಬಾರಿ ಬೆಲೆಯ ಬೆಕ್ಕು ಜನವರಿ 15 ರಂದು ನಾಪತ್ತೆಯಾಗಿದೆ. ಯಾರೋ ದುಷ್ಕರ್ಮಿಗಳು ಮೇಲ್ಚಾವಣಿಯಿಂದ ಬಂದು ಬೆಕ್ಕನ್ನು ಕಳ್ಳತನ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ದುಬಾರಿ ಬೆಲೆಯ ಪರ್ಷಿಯನ್ ಬೆಕ್ಕು ಕಳ್ಳತನ; ಬೆಂಗಳೂರಿನಲ್ಲಿ ಎಫ್ಐಆರ್ ದಾಖಲು, ಬೆಕ್ಕು ಹುಡುಕಿಕೊಟ್ಟರೆ 35 ಸಾವಿರ ಬಹುಮಾನ
ದುಬಾರಿ ಬೆಲೆಯ ಪರ್ಷಿಯನ್ ಬೆಕ್ಕು ಕಳ್ಳತನ
TV9 Web
| Edited By: |

Updated on:Jan 23, 2022 | 1:56 PM

Share

ಬೆಂಗಳೂರು: ಮೇಕೆ, ಕುರಿ ಕಳ್ಳತನ ಆದ್ರೆ ಮಾಲೀಕರು ದೂರು ದಾಖಲಿಸುವುದನ್ನು ನೋಡಿದ್ದೇವೆ. ಆದ್ರೆ ಬೆಂಗಳೂರಿನಲ್ಲಿ ಬೆಕ್ಕು ಕಳ್ಳತನ ಆಗಿದೆ ಎಂದು ಎಫ್ಐಆರ್ ದಾಖಲಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಜಯನಗರದ ರಾಜಣ್ಣ ಲೇಔಟ್ ನಿವಾಸಿ ಮಿಸ್ಬಾ ಶರೀಫ್ ಎಂಬ ಮಹಿಳೆ ಬೆಕ್ಕು ಕಳ್ಳತನ ಆಗಿದೆ ಎಂದು ದೂರು ದಾಖಲಿಸಿದ್ದಾರೆ.

ದುಬಾರಿ ಬೆಲೆಯ ಪರ್ಷಿಯನ್ ಬೆಕ್ಕು ಕಾಣೆಯಾಗಿದೆ ಎಂದು ಮಿಸ್ಬಾ ಶರೀಫ್ ತಿಲಕನಗರ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ದುಬಾರಿ ಬೆಲೆಯ ಬೆಕ್ಕು ಜನವರಿ 15 ರಂದು ನಾಪತ್ತೆಯಾಗಿದೆ. ಯಾರೋ ದುಷ್ಕರ್ಮಿಗಳು ಮೇಲ್ಚಾವಣಿಯಿಂದ ಬಂದು ಬೆಕ್ಕನ್ನು ಕಳ್ಳತನ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ ಬೆಕ್ಕು ಹುಡುಕಿಕೊಟ್ಟರೆ 35 ಸಾವಿರ ಕೊಡುವುದಾಗಿಯೂ ಮಿಸ್ಬಾರವರು ಬಹುಮಾನ ಘೋಷಣೆ ಮಾಡಿದ್ದಾರೆ. ಕಾಣೆಯಾಗಿರುವ ಬೆಕ್ಕು ಉಡುಗೊರೆಯಾಗಿ ಬಂದಿದ್ದರಿಂದ ಆ ಬೆಕ್ಕಿನ ಮೇಲೆ ಹೆಚ್ಚು ಪ್ರೀತಿ ಇಟ್ಟುಕೊಂಡಿರುವ ಮಿಸ್ಬಾ ಶರೀಫ್, ಬೆಕ್ಕು ಇಲ್ಲದೇ ಬದುಕೋದೆ ಇಲ್ಲ ಎಂದು‌ ಪೊಲೀಸರ ಮುಂದೆ ಕಣ್ಣೀರು ಹಾಕಿದ್ದಾರೆ. ಮಿಸ್ಬಾ ತಮ್ಮ ಮನೆಯಲ್ಲಿ‌ ಬೆಕ್ಕಿನ ಜೊತೆ ಮೊಲವನ್ನೂ ಸಹ ಸಾಕಿದ್ದಾರೆ. ಮೊಲದ ಜೊತೆ ಬೆಕ್ಕು ತುಂಬಾ ಆತ್ಮೀಯವಾಗಿತ್ತು. ಆದ್ರೆ ಈಗ ಬೆಕ್ಕು ನಾಪತ್ತೆಯಾಗಿದ್ದು ಮೊಲ ಏಕಾಂಗಿಯಾಗಿದೆ.

Cat missing

ಪರ್ಷಿಯನ್ ಬೆಕ್ಕು

ಶಿವಮೊಗ್ಗ ನಗರದಲ್ಲಿ ಒಂದೇ ದಿನ 5 ಸರಗಳ್ಳತನ ಗೃಹ ಸಚಿವರ ಜಿಲ್ಲೆಯಲ್ಲಿ ಸರಗಳ್ಳರ ಹಾವಳಿ ಹೆಚ್ಚಾಗಿದೆ. ಒಂದೇ ದಿನ ಶಿವಮೊಗ್ಗ ನಗರದ ವಿವಿಧೆಡೆ ಐದು ಸರಗಳ್ಳತನ ನಡೆದಿದೆ. ದೊಡ್ಡಪೇಟೆ, ಕೋಟೆ, ಜಯನಗರ ಠಾಣಾ ವ್ಯಾಪ್ತಿಯಲ್ಲಿ ಬೈಕ್‌ನಲ್ಲಿ ಬಂದು ದುಷ್ಕರ್ಮಿಗಳು ಸರಗಳ್ಳತನ ಮಾಡಿದ್ದಾರೆ. ಮಂಗಳಾ ಎಂಬ ಮಹಿಳೆಯ 55 ಗ್ರಾಂ ಮಾಂಗಲ್ಯ ಸರಗಳ್ಳ ದೋಚಿದ್ದು ಈ ಸರಗಳ್ಳತನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಆರೂವರೆ ತಿಂಗಳಿಗೆ ಜನಿಸಿತಾ ಪ್ರಿಯಾಂಕಾ ಚೋಪ್ರಾ ಮಗು? ಹಲವು ಸತ್ಯಗಳನ್ನು ಮುಚ್ಚಿಟ್ಟ ನಟಿ

ಮುಂಬೈ: ಕಮಲಾ ಬಿಲ್ಡಿಂಗ್ ಅಗ್ನಿ ದುರಂತದ ತನಿಖೆಗೆ 4 ಸದಸ್ಯರ ಸಮಿತಿ; 15 ದಿನಗಳಲ್ಲಿ ವರದಿ ಸಲ್ಲಿಸಲು ಸೂಚನೆ

Published On - 1:47 pm, Sun, 23 January 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್