AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಮತ್ತೊಂದು ಗಂಭೀರ ಆರೋಪ; ದೂರು ನೀಡಲು ಕಮಿಷನರ್ ಕಚೇರಿಗೆ ಹೋದ ಮಹಿಳೆ

ವಾಣಿ ಮತ್ತು ವರ್ಲಮತಿ ಎಂಬುವವರು ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಗಂಭೀರ ಆರೋಪ ಮಾಡುತ್ತಿದ್ದಾರೆ. ನಿವೃತ್ತ ಯೋಧ ದಿ.ಚಿನ್ನ ಸ್ವಾಮಿ ಸೈಟ್​ಗೆ ಅಕ್ರಮವಾಗಿ ಪ್ರವೇಶಿಸಿ ದುಷ್ಕರ್ಮಿಗಳು ಕಾಂಪೌಂಡ್ ಹಾನಿಗೊಳಿಸಿದ್ದಾರೆ

ಬೆಂಗಳೂರಿನ ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಮತ್ತೊಂದು ಗಂಭೀರ ಆರೋಪ; ದೂರು ನೀಡಲು ಕಮಿಷನರ್ ಕಚೇರಿಗೆ ಹೋದ ಮಹಿಳೆ
ಹೆಣ್ಣೂರು ಪೊಲೀಸ್ ಠಾಣೆ
TV9 Web
| Edited By: |

Updated on:Jan 22, 2022 | 3:45 PM

Share

ಬೆಂಗಳೂರು: ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ (Inspector) ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ. ಪ್ರಾಪರ್ಟಿ ವಿಚಾರವಾಗಿ ಮನೆಗೆ ನುಗ್ಗಿ ದುಷ್ಕರ್ಮಿಗಳು ದಾಂದಲೆ ಮಾಡಿ, ಗಲಾಟೆ ಮಾಡಿದರೂ ಯಾವುದೇ ಕ್ರಮಕೈಗೊಳ್ಳಲಿಲ್ಲ ಅಂತ ಇನ್ಸ್​ಪೆಕ್ಟರ್ ವಸಂತ್ ಕುಮಾರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ದೂರು ನೀಡಲು ಹೋದರೂ ಇನ್ಸ್​ಪೆಕ್ಟರ್ ಎಫ್ಐಆರ್ (FIR) ದಾಖಲಿಸಿಲ್ಲ ಅಂತ ಇಬ್ಬರು ಮಹಿಳೆಯರು ಆರೋಪಿಸಿದ್ದಾರೆ. ಪ್ರಾಪರ್ಟಿ ವಿಚಾರವಾಗಿ ಕೋರ್ಟ್​ನಿಂದ ಸ್ಟೇ ಆಗಿದ್ದರೂ, ಅಕ್ರಮ ಪ್ರವೇಶಕ್ಕೆ ಇನ್ಸ್​ಪೆಕ್ಟರ್ ಸಾಥ್ ನೀಡಿದ್ದಾರೆ ಅಂತ ಮಹಿಳೆಯರು ಆರೋಪ ಮಾಡುತ್ತಿದ್ದಾರೆ.

ವಾಣಿ ಮತ್ತು ವರ್ಲಮತಿ ಎಂಬುವವರು ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಗಂಭೀರ ಆರೋಪ ಮಾಡುತ್ತಿದ್ದಾರೆ. ನಿವೃತ್ತ ಯೋಧ ದಿ.ಚಿನ್ನ ಸ್ವಾಮಿ ಸೈಟ್​ಗೆ ಅಕ್ರಮವಾಗಿ ಪ್ರವೇಶಿಸಿ ದುಷ್ಕರ್ಮಿಗಳು ಕಾಂಪೌಂಡ್ ಹಾನಿಗೊಳಿಸಿದ್ದಾರೆ ಎಂದು ಆರೋಪಿಸುತ್ತಿರುವ ವಾಣಿ, ಮಹೇಂದ್ರ ಎಂಬುವವರ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ಹೋಗಿದ್ದಾರೆ. ಆದರೆ ಇನ್ಸ್​ಪೆಕ್ಟರ್ ನಿರ್ಲಕ್ಷ್ಯ ತೋರಿದ್ದಾರೆ ಅಂತ ಈಗ ಮತ್ತೊಂದು ದೂರು ನೀಡಲು ಮುಂದಾಗಿದ್ದಾರೆ.

ವೀಣಾ ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ದೂರು ನೀಡಲು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಬಂದಿದ್ದರು. ಆದರೆ ಇಂದು ರಜೆ ಹಿನ್ನೆಲೆ ಸೋಮವಾರ ಬರಲು ಸಿಬ್ಬಂದಿ ಸೂಚನೆ ನೀಡಿದ್ದಾರೆ.

ವಸಂತ್ ಕುಮಾರ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದ ಮಹಿಳೆಯರು                                                                      ಈ ಹಿಂದೆಯೂ ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್​ಗೆ ಮಹಿಳೆಯರು ದೂರು ಸಲ್ಲಿಸಿದ್ದರು. ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾಗಿ ಹೆಣ್ಣೂರು ಠಾಣೆಗೆ ಮಹಿಳೆಯರು ದೂರು ನೀಡಿದ್ದರು. ಆದರೆ ಇನ್ಸ್​ಪೆಕ್ಟರ್ ಕ್ರಮಕೈಗೊಳ್ಳದೇ ನಿರ್ಲಕ್ಷ್ಯವಹಿಸಿದ್ದಾರೆ. ಹೀಗಾಗಿ ಇನ್ಸ್‌ಪೆಕ್ಟರ್ ವಸಂತ್ ಕುಮಾರ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದರು.

ಇದನ್ನೂ ಓದಿ

Xiaomi 11T Pro 5G: ಈ 120W ಹೈಪರ್ ಚಾರ್ಜರ್ ಫೋನ್ ಖರೀದಿಸಬಹುದೇ?: ಒಮ್ಮೆ ಇಲ್ಲಿ ಗಮನಿಸಿ

ಆಸ್ಕರ್​ ರೇಸ್​ನಲ್ಲಿ ‘ಜೈ ಭೀಮ್​’ ಮತ್ತು ‘ಮರಕ್ಕರ್’​; ಭಾರತೀಯ ಚಿತ್ರಕ್ಕೆ ಈ ಬಾರಿಯಾದರೂ ಒಲಿಯುತ್ತಾ ಪ್ರಶಸ್ತಿ?

Published On - 3:38 pm, Sat, 22 January 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್