AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಮತ್ತೊಂದು ಗಂಭೀರ ಆರೋಪ; ದೂರು ನೀಡಲು ಕಮಿಷನರ್ ಕಚೇರಿಗೆ ಹೋದ ಮಹಿಳೆ

ವಾಣಿ ಮತ್ತು ವರ್ಲಮತಿ ಎಂಬುವವರು ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಗಂಭೀರ ಆರೋಪ ಮಾಡುತ್ತಿದ್ದಾರೆ. ನಿವೃತ್ತ ಯೋಧ ದಿ.ಚಿನ್ನ ಸ್ವಾಮಿ ಸೈಟ್​ಗೆ ಅಕ್ರಮವಾಗಿ ಪ್ರವೇಶಿಸಿ ದುಷ್ಕರ್ಮಿಗಳು ಕಾಂಪೌಂಡ್ ಹಾನಿಗೊಳಿಸಿದ್ದಾರೆ

ಬೆಂಗಳೂರಿನ ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಮತ್ತೊಂದು ಗಂಭೀರ ಆರೋಪ; ದೂರು ನೀಡಲು ಕಮಿಷನರ್ ಕಚೇರಿಗೆ ಹೋದ ಮಹಿಳೆ
ಹೆಣ್ಣೂರು ಪೊಲೀಸ್ ಠಾಣೆ
TV9 Web
| Edited By: sandhya thejappa|

Updated on:Jan 22, 2022 | 3:45 PM

Share

ಬೆಂಗಳೂರು: ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ (Inspector) ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ. ಪ್ರಾಪರ್ಟಿ ವಿಚಾರವಾಗಿ ಮನೆಗೆ ನುಗ್ಗಿ ದುಷ್ಕರ್ಮಿಗಳು ದಾಂದಲೆ ಮಾಡಿ, ಗಲಾಟೆ ಮಾಡಿದರೂ ಯಾವುದೇ ಕ್ರಮಕೈಗೊಳ್ಳಲಿಲ್ಲ ಅಂತ ಇನ್ಸ್​ಪೆಕ್ಟರ್ ವಸಂತ್ ಕುಮಾರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ದೂರು ನೀಡಲು ಹೋದರೂ ಇನ್ಸ್​ಪೆಕ್ಟರ್ ಎಫ್ಐಆರ್ (FIR) ದಾಖಲಿಸಿಲ್ಲ ಅಂತ ಇಬ್ಬರು ಮಹಿಳೆಯರು ಆರೋಪಿಸಿದ್ದಾರೆ. ಪ್ರಾಪರ್ಟಿ ವಿಚಾರವಾಗಿ ಕೋರ್ಟ್​ನಿಂದ ಸ್ಟೇ ಆಗಿದ್ದರೂ, ಅಕ್ರಮ ಪ್ರವೇಶಕ್ಕೆ ಇನ್ಸ್​ಪೆಕ್ಟರ್ ಸಾಥ್ ನೀಡಿದ್ದಾರೆ ಅಂತ ಮಹಿಳೆಯರು ಆರೋಪ ಮಾಡುತ್ತಿದ್ದಾರೆ.

ವಾಣಿ ಮತ್ತು ವರ್ಲಮತಿ ಎಂಬುವವರು ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಗಂಭೀರ ಆರೋಪ ಮಾಡುತ್ತಿದ್ದಾರೆ. ನಿವೃತ್ತ ಯೋಧ ದಿ.ಚಿನ್ನ ಸ್ವಾಮಿ ಸೈಟ್​ಗೆ ಅಕ್ರಮವಾಗಿ ಪ್ರವೇಶಿಸಿ ದುಷ್ಕರ್ಮಿಗಳು ಕಾಂಪೌಂಡ್ ಹಾನಿಗೊಳಿಸಿದ್ದಾರೆ ಎಂದು ಆರೋಪಿಸುತ್ತಿರುವ ವಾಣಿ, ಮಹೇಂದ್ರ ಎಂಬುವವರ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ಹೋಗಿದ್ದಾರೆ. ಆದರೆ ಇನ್ಸ್​ಪೆಕ್ಟರ್ ನಿರ್ಲಕ್ಷ್ಯ ತೋರಿದ್ದಾರೆ ಅಂತ ಈಗ ಮತ್ತೊಂದು ದೂರು ನೀಡಲು ಮುಂದಾಗಿದ್ದಾರೆ.

ವೀಣಾ ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ದೂರು ನೀಡಲು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಬಂದಿದ್ದರು. ಆದರೆ ಇಂದು ರಜೆ ಹಿನ್ನೆಲೆ ಸೋಮವಾರ ಬರಲು ಸಿಬ್ಬಂದಿ ಸೂಚನೆ ನೀಡಿದ್ದಾರೆ.

ವಸಂತ್ ಕುಮಾರ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದ ಮಹಿಳೆಯರು                                                                      ಈ ಹಿಂದೆಯೂ ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್​ಗೆ ಮಹಿಳೆಯರು ದೂರು ಸಲ್ಲಿಸಿದ್ದರು. ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾಗಿ ಹೆಣ್ಣೂರು ಠಾಣೆಗೆ ಮಹಿಳೆಯರು ದೂರು ನೀಡಿದ್ದರು. ಆದರೆ ಇನ್ಸ್​ಪೆಕ್ಟರ್ ಕ್ರಮಕೈಗೊಳ್ಳದೇ ನಿರ್ಲಕ್ಷ್ಯವಹಿಸಿದ್ದಾರೆ. ಹೀಗಾಗಿ ಇನ್ಸ್‌ಪೆಕ್ಟರ್ ವಸಂತ್ ಕುಮಾರ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದರು.

ಇದನ್ನೂ ಓದಿ

Xiaomi 11T Pro 5G: ಈ 120W ಹೈಪರ್ ಚಾರ್ಜರ್ ಫೋನ್ ಖರೀದಿಸಬಹುದೇ?: ಒಮ್ಮೆ ಇಲ್ಲಿ ಗಮನಿಸಿ

ಆಸ್ಕರ್​ ರೇಸ್​ನಲ್ಲಿ ‘ಜೈ ಭೀಮ್​’ ಮತ್ತು ‘ಮರಕ್ಕರ್’​; ಭಾರತೀಯ ಚಿತ್ರಕ್ಕೆ ಈ ಬಾರಿಯಾದರೂ ಒಲಿಯುತ್ತಾ ಪ್ರಶಸ್ತಿ?

Published On - 3:38 pm, Sat, 22 January 22

Follow Us
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ