AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಮತ್ತೊಂದು ಗಂಭೀರ ಆರೋಪ; ದೂರು ನೀಡಲು ಕಮಿಷನರ್ ಕಚೇರಿಗೆ ಹೋದ ಮಹಿಳೆ

ವಾಣಿ ಮತ್ತು ವರ್ಲಮತಿ ಎಂಬುವವರು ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಗಂಭೀರ ಆರೋಪ ಮಾಡುತ್ತಿದ್ದಾರೆ. ನಿವೃತ್ತ ಯೋಧ ದಿ.ಚಿನ್ನ ಸ್ವಾಮಿ ಸೈಟ್​ಗೆ ಅಕ್ರಮವಾಗಿ ಪ್ರವೇಶಿಸಿ ದುಷ್ಕರ್ಮಿಗಳು ಕಾಂಪೌಂಡ್ ಹಾನಿಗೊಳಿಸಿದ್ದಾರೆ

ಬೆಂಗಳೂರಿನ ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಮತ್ತೊಂದು ಗಂಭೀರ ಆರೋಪ; ದೂರು ನೀಡಲು ಕಮಿಷನರ್ ಕಚೇರಿಗೆ ಹೋದ ಮಹಿಳೆ
ಹೆಣ್ಣೂರು ಪೊಲೀಸ್ ಠಾಣೆ
TV9 Web
| Edited By: |

Updated on:Jan 22, 2022 | 3:45 PM

Share

ಬೆಂಗಳೂರು: ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ (Inspector) ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ. ಪ್ರಾಪರ್ಟಿ ವಿಚಾರವಾಗಿ ಮನೆಗೆ ನುಗ್ಗಿ ದುಷ್ಕರ್ಮಿಗಳು ದಾಂದಲೆ ಮಾಡಿ, ಗಲಾಟೆ ಮಾಡಿದರೂ ಯಾವುದೇ ಕ್ರಮಕೈಗೊಳ್ಳಲಿಲ್ಲ ಅಂತ ಇನ್ಸ್​ಪೆಕ್ಟರ್ ವಸಂತ್ ಕುಮಾರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ದೂರು ನೀಡಲು ಹೋದರೂ ಇನ್ಸ್​ಪೆಕ್ಟರ್ ಎಫ್ಐಆರ್ (FIR) ದಾಖಲಿಸಿಲ್ಲ ಅಂತ ಇಬ್ಬರು ಮಹಿಳೆಯರು ಆರೋಪಿಸಿದ್ದಾರೆ. ಪ್ರಾಪರ್ಟಿ ವಿಚಾರವಾಗಿ ಕೋರ್ಟ್​ನಿಂದ ಸ್ಟೇ ಆಗಿದ್ದರೂ, ಅಕ್ರಮ ಪ್ರವೇಶಕ್ಕೆ ಇನ್ಸ್​ಪೆಕ್ಟರ್ ಸಾಥ್ ನೀಡಿದ್ದಾರೆ ಅಂತ ಮಹಿಳೆಯರು ಆರೋಪ ಮಾಡುತ್ತಿದ್ದಾರೆ.

ವಾಣಿ ಮತ್ತು ವರ್ಲಮತಿ ಎಂಬುವವರು ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಗಂಭೀರ ಆರೋಪ ಮಾಡುತ್ತಿದ್ದಾರೆ. ನಿವೃತ್ತ ಯೋಧ ದಿ.ಚಿನ್ನ ಸ್ವಾಮಿ ಸೈಟ್​ಗೆ ಅಕ್ರಮವಾಗಿ ಪ್ರವೇಶಿಸಿ ದುಷ್ಕರ್ಮಿಗಳು ಕಾಂಪೌಂಡ್ ಹಾನಿಗೊಳಿಸಿದ್ದಾರೆ ಎಂದು ಆರೋಪಿಸುತ್ತಿರುವ ವಾಣಿ, ಮಹೇಂದ್ರ ಎಂಬುವವರ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ಹೋಗಿದ್ದಾರೆ. ಆದರೆ ಇನ್ಸ್​ಪೆಕ್ಟರ್ ನಿರ್ಲಕ್ಷ್ಯ ತೋರಿದ್ದಾರೆ ಅಂತ ಈಗ ಮತ್ತೊಂದು ದೂರು ನೀಡಲು ಮುಂದಾಗಿದ್ದಾರೆ.

ವೀಣಾ ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ದೂರು ನೀಡಲು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಬಂದಿದ್ದರು. ಆದರೆ ಇಂದು ರಜೆ ಹಿನ್ನೆಲೆ ಸೋಮವಾರ ಬರಲು ಸಿಬ್ಬಂದಿ ಸೂಚನೆ ನೀಡಿದ್ದಾರೆ.

ವಸಂತ್ ಕುಮಾರ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದ ಮಹಿಳೆಯರು                                                                      ಈ ಹಿಂದೆಯೂ ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್​ಗೆ ಮಹಿಳೆಯರು ದೂರು ಸಲ್ಲಿಸಿದ್ದರು. ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾಗಿ ಹೆಣ್ಣೂರು ಠಾಣೆಗೆ ಮಹಿಳೆಯರು ದೂರು ನೀಡಿದ್ದರು. ಆದರೆ ಇನ್ಸ್​ಪೆಕ್ಟರ್ ಕ್ರಮಕೈಗೊಳ್ಳದೇ ನಿರ್ಲಕ್ಷ್ಯವಹಿಸಿದ್ದಾರೆ. ಹೀಗಾಗಿ ಇನ್ಸ್‌ಪೆಕ್ಟರ್ ವಸಂತ್ ಕುಮಾರ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದರು.

ಇದನ್ನೂ ಓದಿ

Xiaomi 11T Pro 5G: ಈ 120W ಹೈಪರ್ ಚಾರ್ಜರ್ ಫೋನ್ ಖರೀದಿಸಬಹುದೇ?: ಒಮ್ಮೆ ಇಲ್ಲಿ ಗಮನಿಸಿ

ಆಸ್ಕರ್​ ರೇಸ್​ನಲ್ಲಿ ‘ಜೈ ಭೀಮ್​’ ಮತ್ತು ‘ಮರಕ್ಕರ್’​; ಭಾರತೀಯ ಚಿತ್ರಕ್ಕೆ ಈ ಬಾರಿಯಾದರೂ ಒಲಿಯುತ್ತಾ ಪ್ರಶಸ್ತಿ?

Published On - 3:38 pm, Sat, 22 January 22

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್