AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಮತ್ತೊಂದು ಗಂಭೀರ ಆರೋಪ; ದೂರು ನೀಡಲು ಕಮಿಷನರ್ ಕಚೇರಿಗೆ ಹೋದ ಮಹಿಳೆ

ವಾಣಿ ಮತ್ತು ವರ್ಲಮತಿ ಎಂಬುವವರು ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಗಂಭೀರ ಆರೋಪ ಮಾಡುತ್ತಿದ್ದಾರೆ. ನಿವೃತ್ತ ಯೋಧ ದಿ.ಚಿನ್ನ ಸ್ವಾಮಿ ಸೈಟ್​ಗೆ ಅಕ್ರಮವಾಗಿ ಪ್ರವೇಶಿಸಿ ದುಷ್ಕರ್ಮಿಗಳು ಕಾಂಪೌಂಡ್ ಹಾನಿಗೊಳಿಸಿದ್ದಾರೆ

ಬೆಂಗಳೂರಿನ ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಮತ್ತೊಂದು ಗಂಭೀರ ಆರೋಪ; ದೂರು ನೀಡಲು ಕಮಿಷನರ್ ಕಚೇರಿಗೆ ಹೋದ ಮಹಿಳೆ
ಹೆಣ್ಣೂರು ಪೊಲೀಸ್ ಠಾಣೆ
TV9 Web
| Updated By: sandhya thejappa|

Updated on:Jan 22, 2022 | 3:45 PM

Share

ಬೆಂಗಳೂರು: ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ (Inspector) ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ. ಪ್ರಾಪರ್ಟಿ ವಿಚಾರವಾಗಿ ಮನೆಗೆ ನುಗ್ಗಿ ದುಷ್ಕರ್ಮಿಗಳು ದಾಂದಲೆ ಮಾಡಿ, ಗಲಾಟೆ ಮಾಡಿದರೂ ಯಾವುದೇ ಕ್ರಮಕೈಗೊಳ್ಳಲಿಲ್ಲ ಅಂತ ಇನ್ಸ್​ಪೆಕ್ಟರ್ ವಸಂತ್ ಕುಮಾರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ದೂರು ನೀಡಲು ಹೋದರೂ ಇನ್ಸ್​ಪೆಕ್ಟರ್ ಎಫ್ಐಆರ್ (FIR) ದಾಖಲಿಸಿಲ್ಲ ಅಂತ ಇಬ್ಬರು ಮಹಿಳೆಯರು ಆರೋಪಿಸಿದ್ದಾರೆ. ಪ್ರಾಪರ್ಟಿ ವಿಚಾರವಾಗಿ ಕೋರ್ಟ್​ನಿಂದ ಸ್ಟೇ ಆಗಿದ್ದರೂ, ಅಕ್ರಮ ಪ್ರವೇಶಕ್ಕೆ ಇನ್ಸ್​ಪೆಕ್ಟರ್ ಸಾಥ್ ನೀಡಿದ್ದಾರೆ ಅಂತ ಮಹಿಳೆಯರು ಆರೋಪ ಮಾಡುತ್ತಿದ್ದಾರೆ.

ವಾಣಿ ಮತ್ತು ವರ್ಲಮತಿ ಎಂಬುವವರು ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಗಂಭೀರ ಆರೋಪ ಮಾಡುತ್ತಿದ್ದಾರೆ. ನಿವೃತ್ತ ಯೋಧ ದಿ.ಚಿನ್ನ ಸ್ವಾಮಿ ಸೈಟ್​ಗೆ ಅಕ್ರಮವಾಗಿ ಪ್ರವೇಶಿಸಿ ದುಷ್ಕರ್ಮಿಗಳು ಕಾಂಪೌಂಡ್ ಹಾನಿಗೊಳಿಸಿದ್ದಾರೆ ಎಂದು ಆರೋಪಿಸುತ್ತಿರುವ ವಾಣಿ, ಮಹೇಂದ್ರ ಎಂಬುವವರ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ಹೋಗಿದ್ದಾರೆ. ಆದರೆ ಇನ್ಸ್​ಪೆಕ್ಟರ್ ನಿರ್ಲಕ್ಷ್ಯ ತೋರಿದ್ದಾರೆ ಅಂತ ಈಗ ಮತ್ತೊಂದು ದೂರು ನೀಡಲು ಮುಂದಾಗಿದ್ದಾರೆ.

ವೀಣಾ ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ದೂರು ನೀಡಲು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಬಂದಿದ್ದರು. ಆದರೆ ಇಂದು ರಜೆ ಹಿನ್ನೆಲೆ ಸೋಮವಾರ ಬರಲು ಸಿಬ್ಬಂದಿ ಸೂಚನೆ ನೀಡಿದ್ದಾರೆ.

ವಸಂತ್ ಕುಮಾರ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದ ಮಹಿಳೆಯರು                                                                      ಈ ಹಿಂದೆಯೂ ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್​ಗೆ ಮಹಿಳೆಯರು ದೂರು ಸಲ್ಲಿಸಿದ್ದರು. ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾಗಿ ಹೆಣ್ಣೂರು ಠಾಣೆಗೆ ಮಹಿಳೆಯರು ದೂರು ನೀಡಿದ್ದರು. ಆದರೆ ಇನ್ಸ್​ಪೆಕ್ಟರ್ ಕ್ರಮಕೈಗೊಳ್ಳದೇ ನಿರ್ಲಕ್ಷ್ಯವಹಿಸಿದ್ದಾರೆ. ಹೀಗಾಗಿ ಇನ್ಸ್‌ಪೆಕ್ಟರ್ ವಸಂತ್ ಕುಮಾರ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದರು.

ಇದನ್ನೂ ಓದಿ

Xiaomi 11T Pro 5G: ಈ 120W ಹೈಪರ್ ಚಾರ್ಜರ್ ಫೋನ್ ಖರೀದಿಸಬಹುದೇ?: ಒಮ್ಮೆ ಇಲ್ಲಿ ಗಮನಿಸಿ

ಆಸ್ಕರ್​ ರೇಸ್​ನಲ್ಲಿ ‘ಜೈ ಭೀಮ್​’ ಮತ್ತು ‘ಮರಕ್ಕರ್’​; ಭಾರತೀಯ ಚಿತ್ರಕ್ಕೆ ಈ ಬಾರಿಯಾದರೂ ಒಲಿಯುತ್ತಾ ಪ್ರಶಸ್ತಿ?

Published On - 3:38 pm, Sat, 22 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ