AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ರ‍್ಯಾಪಿಡೊ ಚಾಲಕನಿಂದ ಲೈಂಗಿಕ ಕಿರುಕುಳ; ಚಲಿಸುತ್ತಿದ್ದ ಬೈಕ್‌ನಿಂದಲೇ ಜಿಗಿದ ಯುವತಿ!

ತಡ ರಾತ್ರಿ ರ‍್ಯಾಪಿಡೊ ಬುಕ್​ ಮಾಡಿ ಹೊರಟಿದ್ದ ಯುವತಿಗೆ ರ‍್ಯಾಪಿಡೊ ಚಾಲಕ ಲೈಂಗಿಕ ಕಿರುಕುಳ ನೀಡಿದ್ದು ಕಿರುಕುಳಕ್ಕೆ ಬೇಸತ್ತು ಯುವತಿ ಬೈಕ್ ನಿಂದ ಜಂಪ್ ಮಾಡಿದ ಘಟನೆ ನಡೆದಿದೆ.

Bengaluru: ರ‍್ಯಾಪಿಡೊ ಚಾಲಕನಿಂದ ಲೈಂಗಿಕ ಕಿರುಕುಳ; ಚಲಿಸುತ್ತಿದ್ದ ಬೈಕ್‌ನಿಂದಲೇ ಜಿಗಿದ ಯುವತಿ!
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:Apr 26, 2023 | 8:30 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು(Bengaluru) ಹೆಣ್ಮಕ್ಕಳಿಗೆ ರಾತ್ರಿ ಸಂಚಾರಕ್ಕೆ ಸೇಫ್ ಅಲ್ಲ ಎಂಬ ವಿಚಾರ ಪದೇ ಪದೇ ಸಾಬೀತಾಗುತ್ತಿದೆ. ಈ ರೀತಿಯ ಘಟನೆಗಳು ಆಗಬಾರದೆಂದು ಎಷ್ಟೇ ನೀತಿ-ನಿಯಮಗಳು, ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಇಂತಹ ಘಟನೆಗಳು ಮರುಕಳಿಸುತ್ತಲೇ ಇವೆ. ನಗರದಲ್ಲಿ ಹೆಣ್ಮಕ್ಕಳಿಗೆ ಎಷ್ಟರ ಮಟ್ಟಿಗೆ ಸೇಫ್ಟಿ ಇದೆ ಎಂಬ ಪ್ರಶ್ನೆಗಳು ಏಳುತ್ತಿವೆ. ತಡ ರಾತ್ರಿ ರ‍್ಯಾಪಿಡೊ ಬುಕ್​ ಮಾಡಿ ಹೊರಟಿದ್ದ ಯುವತಿಗೆ ರ‍್ಯಾಪಿಡೊ(Rapido) ಚಾಲಕ ಲೈಂಗಿಕ ಕಿರುಕುಳ ನೀಡಿದ್ದು ಕಿರುಕುಳಕ್ಕೆ ಬೇಸತ್ತು ಯುವತಿ ಬೈಕ್ ನಿಂದ ಜಂಪ್ ಮಾಡಿದ ಘಟನೆ ನಡೆದಿದೆ. ಬೆಂಗಳೂರಿನ ಯಲಹಂಕ ಉಪನಗರ ನಾಗೇನಹಳ್ಳಿ ಸಮೀಪದ ಖಾಸಗಿ ಕಾಲೇಜು ಬಳಿ ಘಟನೆ ನಡೆದಿದೆ.

ಖಾಸಗಿ ಕಂಪನಿಯಲ್ಲಿ ಆರ್ಕಿಟೆಕ್ಚರ್‌ ಆಗಿರುವ 30 ವರ್ಷದ ಯುವತಿಯೊಬ್ಬಳು ಕಳೆದ ಏಪ್ರಿಲ್ 21ರಂದು ರಾತ್ರಿ ಸುಮಾರು 11.30ರ ಸಮಯದಲ್ಲಿ ಯಲಹಂಕದಿಂದ ಇಂದಿರಾನಗರಕ್ಕೆ ತೆರಳಲು ಆನ್‌ಲೈನ್‌ ಆ್ಯಪ್ ಮೂಲಕ ರ‍್ಯಾಪಿಡೊ ಬೈಕ್ ಅನ್ನು ಬುಕ್‌ ಮಾಡಿದ್ದಳು. ಸ್ವಲ್ಪ ಸಮಯದ ನಂತರ ಸ್ಥಳಕ್ಕೆ ಬಂದ ರ‍್ಯಾಪಿಡೊ ಬೈಕ್‌ ಚಾಲಕ ಯುವತಿಯನ್ನು ಹತ್ತಿಸಿಕೊಂಡಿದ್ದಾನೆ. ಬಳಿಕ ಓಟಿಪಿ ಪಡೆಯುವ ನೆಪದಲ್ಲಿ ಯುವತಿ ಮೊಬೈಲ್ ಕಸಿದುಕೊಂಡಿದ್ದಾನೆ. ನಂತರ ಯುವತಿಯ ಮೈ ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಅಷ್ಟೇ ಅಲ್ಲದೆ ಇಂದಿರಾನಗರಕ್ಕೆ ಹೋಗದೆ ರಾಜಾನುಕುಂಟೆ ಕಡೆಗೆ ಬೈಕ್ ತಿರುಗಿಸಿದ್ದಾನೆ. ಲೊಕೇಶನ್ ಚೇಂಜ್ ಆಗ್ತಿದ್ದಂತೆ ಯುವತಿಗೆ ಭಯ ಶುರುವಾಗಿದೆ. ಜೊತೆಗೆ ಲೈಂಗಿಕ ಕಿರುಕುಳ ಸಹಿಸಲಾಗದೇ ಯುವತಿ ಬೈಕ್​ನಿಂದ ಜಿಗಿದಿದ್ದಾಳೆ.

ಇದನ್ನೂ ಓದಿ:ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಮಿಸ್ಟರ್ ಆಂಧ್ರ, ಆದ್ರೆ ಬೆಂಗಳೂರಿನಲ್ಲಿ ಖತರ್ನಾಕ್ ಸರಗಳ್ಳ 

ಘಟನೆ ಸಂಬಂಧ ಯಲಹಂಕ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಆಂಧ್ರ ಪ್ರದೇಶ ಮೂಲದ ದೀಪಕ್ ರಾವ್ ಬಂಧಿತ ಆರೋಪಿ. ಸದ್ಯ ಯಲಹಂಕ ಪೊಲೀಸ್ರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಯುವತಿಯ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಲೈಂಗಿಕ ಕಿರುಕುಳ, ಅಪಹರಣ, ಹಲ್ಲೆ ಅಥವಾ ಕ್ರಿಮಿನಲ್ ಕೇಸ್‌ ದಾಖಲು ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮತ್ತೊಂದೆಡೆ ಘಟನೆ ಸಂಬಂಧ ಯುವತಿ ರ‍್ಯಾಪಿಡೊ ಸಂಸ್ಥೆಗೂ ದೂರು ನೀಡಿದ್ದು ಇದುವರೆಗೂ ಯಾವುದೇ ಕರೆ ಅಥವಾ ಯುವತಿಯನ್ನು ಸಂಪರ್ಕಿಸುವ ಪ್ರಯತ್ನಗಳಾಗಿಲ್ಲ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:09 am, Wed, 26 April 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್