AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ರ‍್ಯಾಪಿಡೊ ಚಾಲಕನಿಂದ ಲೈಂಗಿಕ ಕಿರುಕುಳ; ಚಲಿಸುತ್ತಿದ್ದ ಬೈಕ್‌ನಿಂದಲೇ ಜಿಗಿದ ಯುವತಿ!

ತಡ ರಾತ್ರಿ ರ‍್ಯಾಪಿಡೊ ಬುಕ್​ ಮಾಡಿ ಹೊರಟಿದ್ದ ಯುವತಿಗೆ ರ‍್ಯಾಪಿಡೊ ಚಾಲಕ ಲೈಂಗಿಕ ಕಿರುಕುಳ ನೀಡಿದ್ದು ಕಿರುಕುಳಕ್ಕೆ ಬೇಸತ್ತು ಯುವತಿ ಬೈಕ್ ನಿಂದ ಜಂಪ್ ಮಾಡಿದ ಘಟನೆ ನಡೆದಿದೆ.

Bengaluru: ರ‍್ಯಾಪಿಡೊ ಚಾಲಕನಿಂದ ಲೈಂಗಿಕ ಕಿರುಕುಳ; ಚಲಿಸುತ್ತಿದ್ದ ಬೈಕ್‌ನಿಂದಲೇ ಜಿಗಿದ ಯುವತಿ!
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on:Apr 26, 2023 | 8:30 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು(Bengaluru) ಹೆಣ್ಮಕ್ಕಳಿಗೆ ರಾತ್ರಿ ಸಂಚಾರಕ್ಕೆ ಸೇಫ್ ಅಲ್ಲ ಎಂಬ ವಿಚಾರ ಪದೇ ಪದೇ ಸಾಬೀತಾಗುತ್ತಿದೆ. ಈ ರೀತಿಯ ಘಟನೆಗಳು ಆಗಬಾರದೆಂದು ಎಷ್ಟೇ ನೀತಿ-ನಿಯಮಗಳು, ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಇಂತಹ ಘಟನೆಗಳು ಮರುಕಳಿಸುತ್ತಲೇ ಇವೆ. ನಗರದಲ್ಲಿ ಹೆಣ್ಮಕ್ಕಳಿಗೆ ಎಷ್ಟರ ಮಟ್ಟಿಗೆ ಸೇಫ್ಟಿ ಇದೆ ಎಂಬ ಪ್ರಶ್ನೆಗಳು ಏಳುತ್ತಿವೆ. ತಡ ರಾತ್ರಿ ರ‍್ಯಾಪಿಡೊ ಬುಕ್​ ಮಾಡಿ ಹೊರಟಿದ್ದ ಯುವತಿಗೆ ರ‍್ಯಾಪಿಡೊ(Rapido) ಚಾಲಕ ಲೈಂಗಿಕ ಕಿರುಕುಳ ನೀಡಿದ್ದು ಕಿರುಕುಳಕ್ಕೆ ಬೇಸತ್ತು ಯುವತಿ ಬೈಕ್ ನಿಂದ ಜಂಪ್ ಮಾಡಿದ ಘಟನೆ ನಡೆದಿದೆ. ಬೆಂಗಳೂರಿನ ಯಲಹಂಕ ಉಪನಗರ ನಾಗೇನಹಳ್ಳಿ ಸಮೀಪದ ಖಾಸಗಿ ಕಾಲೇಜು ಬಳಿ ಘಟನೆ ನಡೆದಿದೆ.

ಖಾಸಗಿ ಕಂಪನಿಯಲ್ಲಿ ಆರ್ಕಿಟೆಕ್ಚರ್‌ ಆಗಿರುವ 30 ವರ್ಷದ ಯುವತಿಯೊಬ್ಬಳು ಕಳೆದ ಏಪ್ರಿಲ್ 21ರಂದು ರಾತ್ರಿ ಸುಮಾರು 11.30ರ ಸಮಯದಲ್ಲಿ ಯಲಹಂಕದಿಂದ ಇಂದಿರಾನಗರಕ್ಕೆ ತೆರಳಲು ಆನ್‌ಲೈನ್‌ ಆ್ಯಪ್ ಮೂಲಕ ರ‍್ಯಾಪಿಡೊ ಬೈಕ್ ಅನ್ನು ಬುಕ್‌ ಮಾಡಿದ್ದಳು. ಸ್ವಲ್ಪ ಸಮಯದ ನಂತರ ಸ್ಥಳಕ್ಕೆ ಬಂದ ರ‍್ಯಾಪಿಡೊ ಬೈಕ್‌ ಚಾಲಕ ಯುವತಿಯನ್ನು ಹತ್ತಿಸಿಕೊಂಡಿದ್ದಾನೆ. ಬಳಿಕ ಓಟಿಪಿ ಪಡೆಯುವ ನೆಪದಲ್ಲಿ ಯುವತಿ ಮೊಬೈಲ್ ಕಸಿದುಕೊಂಡಿದ್ದಾನೆ. ನಂತರ ಯುವತಿಯ ಮೈ ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಅಷ್ಟೇ ಅಲ್ಲದೆ ಇಂದಿರಾನಗರಕ್ಕೆ ಹೋಗದೆ ರಾಜಾನುಕುಂಟೆ ಕಡೆಗೆ ಬೈಕ್ ತಿರುಗಿಸಿದ್ದಾನೆ. ಲೊಕೇಶನ್ ಚೇಂಜ್ ಆಗ್ತಿದ್ದಂತೆ ಯುವತಿಗೆ ಭಯ ಶುರುವಾಗಿದೆ. ಜೊತೆಗೆ ಲೈಂಗಿಕ ಕಿರುಕುಳ ಸಹಿಸಲಾಗದೇ ಯುವತಿ ಬೈಕ್​ನಿಂದ ಜಿಗಿದಿದ್ದಾಳೆ.

ಇದನ್ನೂ ಓದಿ:ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಮಿಸ್ಟರ್ ಆಂಧ್ರ, ಆದ್ರೆ ಬೆಂಗಳೂರಿನಲ್ಲಿ ಖತರ್ನಾಕ್ ಸರಗಳ್ಳ 

ಘಟನೆ ಸಂಬಂಧ ಯಲಹಂಕ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಆಂಧ್ರ ಪ್ರದೇಶ ಮೂಲದ ದೀಪಕ್ ರಾವ್ ಬಂಧಿತ ಆರೋಪಿ. ಸದ್ಯ ಯಲಹಂಕ ಪೊಲೀಸ್ರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಯುವತಿಯ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಲೈಂಗಿಕ ಕಿರುಕುಳ, ಅಪಹರಣ, ಹಲ್ಲೆ ಅಥವಾ ಕ್ರಿಮಿನಲ್ ಕೇಸ್‌ ದಾಖಲು ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮತ್ತೊಂದೆಡೆ ಘಟನೆ ಸಂಬಂಧ ಯುವತಿ ರ‍್ಯಾಪಿಡೊ ಸಂಸ್ಥೆಗೂ ದೂರು ನೀಡಿದ್ದು ಇದುವರೆಗೂ ಯಾವುದೇ ಕರೆ ಅಥವಾ ಯುವತಿಯನ್ನು ಸಂಪರ್ಕಿಸುವ ಪ್ರಯತ್ನಗಳಾಗಿಲ್ಲ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:09 am, Wed, 26 April 23

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ