AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಎತ್ತಿಕೊಳ್ಳಲು ನಮ್ಮ ಮೆಟ್ರೋ ಹಳಿಗಳ ಮೇಲೆ ಜಿಗಿದ ಮಹಿಳೆ, ಮುಂದೇನಾಯ್ತು?

ಕೆಳಗೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು ಮೆಟ್ರೋ ಟ್ರ್ಯಾಕ್​ಗೆ ಮಹಿಳೆ ಜಿಗಿದ ಘಟನೆ ನಿನ್ನೆ ಸಂಜೆ 6.40ರ ಸುಮಾರಿಗೆ ಇಂದಿರಾನಗರ ಮೆಟ್ರೋ ಸ್ಟೇಷನ್ ನಲ್ಲಿ ನಡೆದಿದೆ. ಮಹಿಳೆ ಟ್ರಾಕ್​ಗೆ ಜಿಗಿಯುತ್ತಿದ್ದಂತೆ ಮೆಟ್ರೋ ಸಿಬ್ಬಂದಿ ಕೂಡಲೇ ವಿದ್ಯುತ್ ಸಂಪರ್ಕ ತೆಗೆದಿದ್ದರು. ಈ ಪರಿಣಾಮ ಪರ್ಪಲ್ ಲೈನ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತವಾಗಿತ್ತು.

ಮೊಬೈಲ್ ಎತ್ತಿಕೊಳ್ಳಲು ನಮ್ಮ ಮೆಟ್ರೋ ಹಳಿಗಳ ಮೇಲೆ ಜಿಗಿದ ಮಹಿಳೆ, ಮುಂದೇನಾಯ್ತು?
ನಮ್ಮ ಮೆಟ್ರೋ
ಕಿರಣ್​ ಸೂರ್ಯ
| Edited By: ಆಯೇಷಾ ಬಾನು|

Updated on:Jan 02, 2024 | 10:49 AM

Share

ಬೆಂಗಳೂರು, ಜ.02: ಹೊಸ ವರ್ಷದಂದೆ (New Year) ಇಂದಿರಾನಗರದಲ್ಲಿ (Indiranagar) ಅಘಾತಕಾರಿ ಘಟನೆಯೊಂದು ನಡೆದಿದೆ. ಕೆಳಗೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು 750kV ವೋಲ್ಟ್ ವಿದ್ಯುತ್ ಹರಿಯುವ ನಮ್ಮ ಮೆಟ್ರೋ (Namma Metro) ಟ್ಯಾಕ್​ಗೆ ಮಹಿಳೆಯೊಬ್ಬರು (Woman) ಜಿಗಿದ ಘಟನೆ ಬೆಂಗಳೂರಿನ (Bengaluru) ಇಂದಿರಾನಗರದ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಸದ್ಯ ಮೆಟ್ರೋ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಇನ್ನು ಮಹಿಳೆ ಟ್ಯಾಕ್​ಗೆ ಜಿಗಿದ ಪರಿಣಾಮ ಪರ್ಪಲ್ ಲೈನ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತವಾಗಿತ್ತು.

ಜ.01ರ ಸಂಜೆ 6.40ರ ಸುಮಾರಿಗೆ ಇಂದಿರಾನಗರ ಮೆಟ್ರೋ ಸ್ಟೇಷನ್​ನಲ್ಲಿ ಈ ಘಟನೆ‌‌ ನಡೆದಿದೆ. ಇಂದಿರಾನಗರ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್ 1ರಲ್ಲಿ ಮಹಿಳೆಯೊಬ್ಬರು ಮೆಟ್ರೋ ರೈಲಿಗಾಗಿ ಕಾದು ನಿಂತಿದ್ದರು.ಈ ವೇಳೆ ಆಕಸ್ಮಿಕವಾಗಿ ಅವರ ಮೊಬೈಲ್ ರೈಲು ಹಳಿಗಳ ಮೇಲೆ ಬಿದ್ದಿದೆ. ಆಗ ತಕ್ಷಣವೇ ಮೊಬೈಲ್ ಎತ್ತಿಕೊಳ್ಳಲು ಮಹಿಳೆ ಹಳಿಗಳ ಮೇಲೆ ಜಿಗಿದಿದ್ದಾರೆ. ಇದನ್ನು ಗಮನಿಸಿದ ಮೆಟ್ರೋ ಸಿಬ್ಬಂದಿ ತಕ್ಷಣವೇ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಿದ್ದು, ಕೂಡಲೇ ಆಕೆಯನ್ನು ಮೇಲೆಕೆ ಎಳೆದುಕೊಂಡಿದ್ದಾರೆ. ಇನ್ನು ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಕಾರಣ ಪರ್ಪಲ್ ಲೈನ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತವಾಗಿತ್ತು.

ಇದನ್ನೂ ಓದಿ: ಹೊಸವರ್ಷ ದಿನದಂದು ನಮ್ಮ ಮೆಟ್ರೋಗೆ ಭರ್ಜರಿ ಆದಾಯ

ಮಹಿಳೆ ಜಿಗಿಯುತ್ತಿದ್ದಂತೆ ಕೂಡಲೇ ಸಂಪೂರ್ಣ ವಿದ್ಯುತ್ ಬಂದ್ ಮಾಡಿದ BMRCL ಸಿಬ್ಬಂದಿಯ ಮುಂಜಾಗ್ರತೆಯಿಂದ ಭಾರಿ ಅನಾಹುತ ತಪ್ಪಿದೆ. ಈ ವಿಚಾರವಾಗಿ ಬಿಎಂಆರ್​ಸಿಎಲ್ ಸ್ಪಷ್ಟನೆ ನೀಡಿದ್ದು, ವಿದ್ಯುತ್ ತೆಗೆದ ನಂತರ ಎಲ್ಲವನ್ನೂ ರೀ ಸೆಟ್ ಮಾಡಲು 15 ನಿಮಿಷ ಬೇಕು‌. ನಿನ್ನೆ ಪೀಕ್ ಅವರ್ ನಲ್ಲೇ ಈ ರೀತಿ ಸಮಸ್ಯೆ ಆಗಿದೆ‌‌. ಇದಕ್ಕೆ ವಿಷಾಧಿಸುತ್ತೇವೆ ಎಂದು ತಿಳಿಸಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:37 am, Tue, 2 January 24

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ