AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಎತ್ತಿಕೊಳ್ಳಲು ನಮ್ಮ ಮೆಟ್ರೋ ಹಳಿಗಳ ಮೇಲೆ ಜಿಗಿದ ಮಹಿಳೆ, ಮುಂದೇನಾಯ್ತು?

ಕೆಳಗೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು ಮೆಟ್ರೋ ಟ್ರ್ಯಾಕ್​ಗೆ ಮಹಿಳೆ ಜಿಗಿದ ಘಟನೆ ನಿನ್ನೆ ಸಂಜೆ 6.40ರ ಸುಮಾರಿಗೆ ಇಂದಿರಾನಗರ ಮೆಟ್ರೋ ಸ್ಟೇಷನ್ ನಲ್ಲಿ ನಡೆದಿದೆ. ಮಹಿಳೆ ಟ್ರಾಕ್​ಗೆ ಜಿಗಿಯುತ್ತಿದ್ದಂತೆ ಮೆಟ್ರೋ ಸಿಬ್ಬಂದಿ ಕೂಡಲೇ ವಿದ್ಯುತ್ ಸಂಪರ್ಕ ತೆಗೆದಿದ್ದರು. ಈ ಪರಿಣಾಮ ಪರ್ಪಲ್ ಲೈನ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತವಾಗಿತ್ತು.

ಮೊಬೈಲ್ ಎತ್ತಿಕೊಳ್ಳಲು ನಮ್ಮ ಮೆಟ್ರೋ ಹಳಿಗಳ ಮೇಲೆ ಜಿಗಿದ ಮಹಿಳೆ, ಮುಂದೇನಾಯ್ತು?
ನಮ್ಮ ಮೆಟ್ರೋ
ಕಿರಣ್​ ಸೂರ್ಯ
| Edited By: ಆಯೇಷಾ ಬಾನು|

Updated on:Jan 02, 2024 | 10:49 AM

Share

ಬೆಂಗಳೂರು, ಜ.02: ಹೊಸ ವರ್ಷದಂದೆ (New Year) ಇಂದಿರಾನಗರದಲ್ಲಿ (Indiranagar) ಅಘಾತಕಾರಿ ಘಟನೆಯೊಂದು ನಡೆದಿದೆ. ಕೆಳಗೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು 750kV ವೋಲ್ಟ್ ವಿದ್ಯುತ್ ಹರಿಯುವ ನಮ್ಮ ಮೆಟ್ರೋ (Namma Metro) ಟ್ಯಾಕ್​ಗೆ ಮಹಿಳೆಯೊಬ್ಬರು (Woman) ಜಿಗಿದ ಘಟನೆ ಬೆಂಗಳೂರಿನ (Bengaluru) ಇಂದಿರಾನಗರದ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಸದ್ಯ ಮೆಟ್ರೋ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಇನ್ನು ಮಹಿಳೆ ಟ್ಯಾಕ್​ಗೆ ಜಿಗಿದ ಪರಿಣಾಮ ಪರ್ಪಲ್ ಲೈನ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತವಾಗಿತ್ತು.

ಜ.01ರ ಸಂಜೆ 6.40ರ ಸುಮಾರಿಗೆ ಇಂದಿರಾನಗರ ಮೆಟ್ರೋ ಸ್ಟೇಷನ್​ನಲ್ಲಿ ಈ ಘಟನೆ‌‌ ನಡೆದಿದೆ. ಇಂದಿರಾನಗರ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್ 1ರಲ್ಲಿ ಮಹಿಳೆಯೊಬ್ಬರು ಮೆಟ್ರೋ ರೈಲಿಗಾಗಿ ಕಾದು ನಿಂತಿದ್ದರು.ಈ ವೇಳೆ ಆಕಸ್ಮಿಕವಾಗಿ ಅವರ ಮೊಬೈಲ್ ರೈಲು ಹಳಿಗಳ ಮೇಲೆ ಬಿದ್ದಿದೆ. ಆಗ ತಕ್ಷಣವೇ ಮೊಬೈಲ್ ಎತ್ತಿಕೊಳ್ಳಲು ಮಹಿಳೆ ಹಳಿಗಳ ಮೇಲೆ ಜಿಗಿದಿದ್ದಾರೆ. ಇದನ್ನು ಗಮನಿಸಿದ ಮೆಟ್ರೋ ಸಿಬ್ಬಂದಿ ತಕ್ಷಣವೇ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಿದ್ದು, ಕೂಡಲೇ ಆಕೆಯನ್ನು ಮೇಲೆಕೆ ಎಳೆದುಕೊಂಡಿದ್ದಾರೆ. ಇನ್ನು ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಕಾರಣ ಪರ್ಪಲ್ ಲೈನ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತವಾಗಿತ್ತು.

ಇದನ್ನೂ ಓದಿ: ಹೊಸವರ್ಷ ದಿನದಂದು ನಮ್ಮ ಮೆಟ್ರೋಗೆ ಭರ್ಜರಿ ಆದಾಯ

ಮಹಿಳೆ ಜಿಗಿಯುತ್ತಿದ್ದಂತೆ ಕೂಡಲೇ ಸಂಪೂರ್ಣ ವಿದ್ಯುತ್ ಬಂದ್ ಮಾಡಿದ BMRCL ಸಿಬ್ಬಂದಿಯ ಮುಂಜಾಗ್ರತೆಯಿಂದ ಭಾರಿ ಅನಾಹುತ ತಪ್ಪಿದೆ. ಈ ವಿಚಾರವಾಗಿ ಬಿಎಂಆರ್​ಸಿಎಲ್ ಸ್ಪಷ್ಟನೆ ನೀಡಿದ್ದು, ವಿದ್ಯುತ್ ತೆಗೆದ ನಂತರ ಎಲ್ಲವನ್ನೂ ರೀ ಸೆಟ್ ಮಾಡಲು 15 ನಿಮಿಷ ಬೇಕು‌. ನಿನ್ನೆ ಪೀಕ್ ಅವರ್ ನಲ್ಲೇ ಈ ರೀತಿ ಸಮಸ್ಯೆ ಆಗಿದೆ‌‌. ಇದಕ್ಕೆ ವಿಷಾಧಿಸುತ್ತೇವೆ ಎಂದು ತಿಳಿಸಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:37 am, Tue, 2 January 24

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?