AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಎತ್ತಿಕೊಳ್ಳಲು ನಮ್ಮ ಮೆಟ್ರೋ ಹಳಿಗಳ ಮೇಲೆ ಜಿಗಿದ ಮಹಿಳೆ, ಮುಂದೇನಾಯ್ತು?

ಕೆಳಗೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು ಮೆಟ್ರೋ ಟ್ರ್ಯಾಕ್​ಗೆ ಮಹಿಳೆ ಜಿಗಿದ ಘಟನೆ ನಿನ್ನೆ ಸಂಜೆ 6.40ರ ಸುಮಾರಿಗೆ ಇಂದಿರಾನಗರ ಮೆಟ್ರೋ ಸ್ಟೇಷನ್ ನಲ್ಲಿ ನಡೆದಿದೆ. ಮಹಿಳೆ ಟ್ರಾಕ್​ಗೆ ಜಿಗಿಯುತ್ತಿದ್ದಂತೆ ಮೆಟ್ರೋ ಸಿಬ್ಬಂದಿ ಕೂಡಲೇ ವಿದ್ಯುತ್ ಸಂಪರ್ಕ ತೆಗೆದಿದ್ದರು. ಈ ಪರಿಣಾಮ ಪರ್ಪಲ್ ಲೈನ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತವಾಗಿತ್ತು.

ಮೊಬೈಲ್ ಎತ್ತಿಕೊಳ್ಳಲು ನಮ್ಮ ಮೆಟ್ರೋ ಹಳಿಗಳ ಮೇಲೆ ಜಿಗಿದ ಮಹಿಳೆ, ಮುಂದೇನಾಯ್ತು?
ನಮ್ಮ ಮೆಟ್ರೋ
Kiran Surya
| Edited By: |

Updated on:Jan 02, 2024 | 10:49 AM

Share

ಬೆಂಗಳೂರು, ಜ.02: ಹೊಸ ವರ್ಷದಂದೆ (New Year) ಇಂದಿರಾನಗರದಲ್ಲಿ (Indiranagar) ಅಘಾತಕಾರಿ ಘಟನೆಯೊಂದು ನಡೆದಿದೆ. ಕೆಳಗೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು 750kV ವೋಲ್ಟ್ ವಿದ್ಯುತ್ ಹರಿಯುವ ನಮ್ಮ ಮೆಟ್ರೋ (Namma Metro) ಟ್ಯಾಕ್​ಗೆ ಮಹಿಳೆಯೊಬ್ಬರು (Woman) ಜಿಗಿದ ಘಟನೆ ಬೆಂಗಳೂರಿನ (Bengaluru) ಇಂದಿರಾನಗರದ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಸದ್ಯ ಮೆಟ್ರೋ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಇನ್ನು ಮಹಿಳೆ ಟ್ಯಾಕ್​ಗೆ ಜಿಗಿದ ಪರಿಣಾಮ ಪರ್ಪಲ್ ಲೈನ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತವಾಗಿತ್ತು.

ಜ.01ರ ಸಂಜೆ 6.40ರ ಸುಮಾರಿಗೆ ಇಂದಿರಾನಗರ ಮೆಟ್ರೋ ಸ್ಟೇಷನ್​ನಲ್ಲಿ ಈ ಘಟನೆ‌‌ ನಡೆದಿದೆ. ಇಂದಿರಾನಗರ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್ 1ರಲ್ಲಿ ಮಹಿಳೆಯೊಬ್ಬರು ಮೆಟ್ರೋ ರೈಲಿಗಾಗಿ ಕಾದು ನಿಂತಿದ್ದರು.ಈ ವೇಳೆ ಆಕಸ್ಮಿಕವಾಗಿ ಅವರ ಮೊಬೈಲ್ ರೈಲು ಹಳಿಗಳ ಮೇಲೆ ಬಿದ್ದಿದೆ. ಆಗ ತಕ್ಷಣವೇ ಮೊಬೈಲ್ ಎತ್ತಿಕೊಳ್ಳಲು ಮಹಿಳೆ ಹಳಿಗಳ ಮೇಲೆ ಜಿಗಿದಿದ್ದಾರೆ. ಇದನ್ನು ಗಮನಿಸಿದ ಮೆಟ್ರೋ ಸಿಬ್ಬಂದಿ ತಕ್ಷಣವೇ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಿದ್ದು, ಕೂಡಲೇ ಆಕೆಯನ್ನು ಮೇಲೆಕೆ ಎಳೆದುಕೊಂಡಿದ್ದಾರೆ. ಇನ್ನು ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಕಾರಣ ಪರ್ಪಲ್ ಲೈನ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತವಾಗಿತ್ತು.

ಇದನ್ನೂ ಓದಿ: ಹೊಸವರ್ಷ ದಿನದಂದು ನಮ್ಮ ಮೆಟ್ರೋಗೆ ಭರ್ಜರಿ ಆದಾಯ

ಮಹಿಳೆ ಜಿಗಿಯುತ್ತಿದ್ದಂತೆ ಕೂಡಲೇ ಸಂಪೂರ್ಣ ವಿದ್ಯುತ್ ಬಂದ್ ಮಾಡಿದ BMRCL ಸಿಬ್ಬಂದಿಯ ಮುಂಜಾಗ್ರತೆಯಿಂದ ಭಾರಿ ಅನಾಹುತ ತಪ್ಪಿದೆ. ಈ ವಿಚಾರವಾಗಿ ಬಿಎಂಆರ್​ಸಿಎಲ್ ಸ್ಪಷ್ಟನೆ ನೀಡಿದ್ದು, ವಿದ್ಯುತ್ ತೆಗೆದ ನಂತರ ಎಲ್ಲವನ್ನೂ ರೀ ಸೆಟ್ ಮಾಡಲು 15 ನಿಮಿಷ ಬೇಕು‌. ನಿನ್ನೆ ಪೀಕ್ ಅವರ್ ನಲ್ಲೇ ಈ ರೀತಿ ಸಮಸ್ಯೆ ಆಗಿದೆ‌‌. ಇದಕ್ಕೆ ವಿಷಾಧಿಸುತ್ತೇವೆ ಎಂದು ತಿಳಿಸಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:37 am, Tue, 2 January 24

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ