Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಎತ್ತಿಕೊಳ್ಳಲು ನಮ್ಮ ಮೆಟ್ರೋ ಹಳಿಗಳ ಮೇಲೆ ಜಿಗಿದ ಮಹಿಳೆ, ಮುಂದೇನಾಯ್ತು?

ಕೆಳಗೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು ಮೆಟ್ರೋ ಟ್ರ್ಯಾಕ್​ಗೆ ಮಹಿಳೆ ಜಿಗಿದ ಘಟನೆ ನಿನ್ನೆ ಸಂಜೆ 6.40ರ ಸುಮಾರಿಗೆ ಇಂದಿರಾನಗರ ಮೆಟ್ರೋ ಸ್ಟೇಷನ್ ನಲ್ಲಿ ನಡೆದಿದೆ. ಮಹಿಳೆ ಟ್ರಾಕ್​ಗೆ ಜಿಗಿಯುತ್ತಿದ್ದಂತೆ ಮೆಟ್ರೋ ಸಿಬ್ಬಂದಿ ಕೂಡಲೇ ವಿದ್ಯುತ್ ಸಂಪರ್ಕ ತೆಗೆದಿದ್ದರು. ಈ ಪರಿಣಾಮ ಪರ್ಪಲ್ ಲೈನ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತವಾಗಿತ್ತು.

ಮೊಬೈಲ್ ಎತ್ತಿಕೊಳ್ಳಲು ನಮ್ಮ ಮೆಟ್ರೋ ಹಳಿಗಳ ಮೇಲೆ ಜಿಗಿದ ಮಹಿಳೆ, ಮುಂದೇನಾಯ್ತು?
ನಮ್ಮ ಮೆಟ್ರೋ
Follow us
Kiran Surya
| Updated By: ಆಯೇಷಾ ಬಾನು

Updated on:Jan 02, 2024 | 10:49 AM

ಬೆಂಗಳೂರು, ಜ.02: ಹೊಸ ವರ್ಷದಂದೆ (New Year) ಇಂದಿರಾನಗರದಲ್ಲಿ (Indiranagar) ಅಘಾತಕಾರಿ ಘಟನೆಯೊಂದು ನಡೆದಿದೆ. ಕೆಳಗೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು 750kV ವೋಲ್ಟ್ ವಿದ್ಯುತ್ ಹರಿಯುವ ನಮ್ಮ ಮೆಟ್ರೋ (Namma Metro) ಟ್ಯಾಕ್​ಗೆ ಮಹಿಳೆಯೊಬ್ಬರು (Woman) ಜಿಗಿದ ಘಟನೆ ಬೆಂಗಳೂರಿನ (Bengaluru) ಇಂದಿರಾನಗರದ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಸದ್ಯ ಮೆಟ್ರೋ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಇನ್ನು ಮಹಿಳೆ ಟ್ಯಾಕ್​ಗೆ ಜಿಗಿದ ಪರಿಣಾಮ ಪರ್ಪಲ್ ಲೈನ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತವಾಗಿತ್ತು.

ಜ.01ರ ಸಂಜೆ 6.40ರ ಸುಮಾರಿಗೆ ಇಂದಿರಾನಗರ ಮೆಟ್ರೋ ಸ್ಟೇಷನ್​ನಲ್ಲಿ ಈ ಘಟನೆ‌‌ ನಡೆದಿದೆ. ಇಂದಿರಾನಗರ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್ 1ರಲ್ಲಿ ಮಹಿಳೆಯೊಬ್ಬರು ಮೆಟ್ರೋ ರೈಲಿಗಾಗಿ ಕಾದು ನಿಂತಿದ್ದರು.ಈ ವೇಳೆ ಆಕಸ್ಮಿಕವಾಗಿ ಅವರ ಮೊಬೈಲ್ ರೈಲು ಹಳಿಗಳ ಮೇಲೆ ಬಿದ್ದಿದೆ. ಆಗ ತಕ್ಷಣವೇ ಮೊಬೈಲ್ ಎತ್ತಿಕೊಳ್ಳಲು ಮಹಿಳೆ ಹಳಿಗಳ ಮೇಲೆ ಜಿಗಿದಿದ್ದಾರೆ. ಇದನ್ನು ಗಮನಿಸಿದ ಮೆಟ್ರೋ ಸಿಬ್ಬಂದಿ ತಕ್ಷಣವೇ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಿದ್ದು, ಕೂಡಲೇ ಆಕೆಯನ್ನು ಮೇಲೆಕೆ ಎಳೆದುಕೊಂಡಿದ್ದಾರೆ. ಇನ್ನು ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಕಾರಣ ಪರ್ಪಲ್ ಲೈನ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತವಾಗಿತ್ತು.

ಇದನ್ನೂ ಓದಿ: ಹೊಸವರ್ಷ ದಿನದಂದು ನಮ್ಮ ಮೆಟ್ರೋಗೆ ಭರ್ಜರಿ ಆದಾಯ

ಮಹಿಳೆ ಜಿಗಿಯುತ್ತಿದ್ದಂತೆ ಕೂಡಲೇ ಸಂಪೂರ್ಣ ವಿದ್ಯುತ್ ಬಂದ್ ಮಾಡಿದ BMRCL ಸಿಬ್ಬಂದಿಯ ಮುಂಜಾಗ್ರತೆಯಿಂದ ಭಾರಿ ಅನಾಹುತ ತಪ್ಪಿದೆ. ಈ ವಿಚಾರವಾಗಿ ಬಿಎಂಆರ್​ಸಿಎಲ್ ಸ್ಪಷ್ಟನೆ ನೀಡಿದ್ದು, ವಿದ್ಯುತ್ ತೆಗೆದ ನಂತರ ಎಲ್ಲವನ್ನೂ ರೀ ಸೆಟ್ ಮಾಡಲು 15 ನಿಮಿಷ ಬೇಕು‌. ನಿನ್ನೆ ಪೀಕ್ ಅವರ್ ನಲ್ಲೇ ಈ ರೀತಿ ಸಮಸ್ಯೆ ಆಗಿದೆ‌‌. ಇದಕ್ಕೆ ವಿಷಾಧಿಸುತ್ತೇವೆ ಎಂದು ತಿಳಿಸಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:37 am, Tue, 2 January 24

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್