Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಕಿಡ್ನ್ಯಾಪ್ ಪ್ರಕರಣ; ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು ವಿಸ್ತರಿಸಿದ ಹೈಕೋರ್ಟ್

ಮೈಸೂರು ಜಿಲ್ಲೆಯ ಕೆ.ಆರ್​.ನಗರ ಮಹಿಳೆಯ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಭವಾನಿ ರೇವಣ್ಣ(Bhavani Revanna)ಗೆ ನಿರೀಕ್ಷಣಾ ಜಾಮೀನು ವಿಸ್ತರಿಸಿದೆ. ಈಗಾಗಲೇ ಭವಾನಿ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಪೂರ್ಣವಾಗಿದ್ದು, ಜಾಮೀನು ಅರ್ಜಿ ಸಂಬಂಧ ಆದೇಶ ಕಾಯ್ದಿರಿಸಿದೆ.

ಮಹಿಳೆ ಕಿಡ್ನ್ಯಾಪ್ ಪ್ರಕರಣ; ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು ವಿಸ್ತರಿಸಿದ ಹೈಕೋರ್ಟ್
ಭವಾನಿ ರೇವಣ್ಣ
Follow us
Ramesha M
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 14, 2024 | 7:55 PM

ಬೆಂಗಳೂರು, ಜೂ.14: ಮೈಸೂರು ಜಿಲ್ಲೆಯ ಕೆ.ಆರ್​.ನಗರ ಮಹಿಳೆಯ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಭವಾನಿ ರೇವಣ್ಣ(Bhavani Revanna)ಗೆ ನಿರೀಕ್ಷಣಾ ಜಾಮೀನು ವಿಸ್ತರಿಸಿದೆ. ಈಗಾಗಲೇ ಭವಾನಿ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಪೂರ್ಣವಾಗಿದ್ದು, ಜಾಮೀನು ಅರ್ಜಿ ಸಂಬಂಧ ಆದೇಶ ಕಾಯ್ದಿರಿಸಿದೆ. ಇನ್ನು ಈ ಕೇಸ್​ಗೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗದೆ ನಾಪತ್ತೆಯಾಗಿದ್ದ ಭವಾನಿ ರೇವಣ್ಣ ಅವರು ಜೂ.07 ರಂದು ಎಸ್​ಐಟಿ ಅಧಿಕಾರಿಗಳ ಮುಂದೆ ಪ್ರತ್ಯಕ್ಷವಾಗಿದ್ದರು.

ಏನಿದು ಘಟನೆ?

ಹಾಸನ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ  ಅಶ್ಲೀಲ ವಿಡಿಯೋದಲ್ಲಿ ‘ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆ.ಆರ್​​ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ಹೆಚ್​ಡಿ ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಿಸಿದ್ದ. ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್​ಐಟಿ ಅಧಿಕಾರಿಗಳು ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು. ಈಗಾಗಲೆ ಆರೋಪಿ ಬಾಬುನನ್ನು ಬಂಧಿಸಲಾಗಿದೆ.

ಇದನ್ನೂ ಓದಿ:ಎಸ್ಐಟಿ ಜೊತೆ ಕಣ್ಣಾಮುಚ್ಚಾಲೆ ಆಡುತ್ತಿರುವ ಭವಾನಿ ರೇವಣ್ಣ ತಮ್ಮ ತೊಂದರೆ ಹೆಚ್ಚಿಸಿಕೊಳ್ಳುತ್ತಿದ್ದಾರೆ!

ಇದೇ ಪ್ರಕರಣದಲ್ಲಿ ಭವಾನಿ ರೇವಣ್ಣಗೂ ಕೂಡ ಎಸ್​ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಬೇಕು. ಈ ಸಂಬಂಧ ಎಸ್​ಐಟಿ ಭವಾನಿ ರೇವಣ್ಣ ಅವರಿಗೆ ಎರಡೆರಡು ನೋಟಿಸ್​ ಕೊಟ್ಟಿತ್ತು. ನೋಟಿಸ್​ ನೀಡುತ್ತಿದ್ದಂತೆ ಭವಾನಿ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕತಿಸಿತ್ತು. ಅರ್ಜಿ ತಿರಸ್ಕೃತಗೊಳ್ಳುತ್ತಿದ್ದಂತೆ ಎಸ್​ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರನ್ನು ವಿಚಾರಣೆಗೆ ಒಳಪಡಿಸಲು ತಯಾರಿ ನಡೆಸಿದ್ದರು. ಇದೇ ವೇಳೆ ಭವಾನಿ ರೇವಣ್ಣ ಕೂಡ ಎಸ್​ಐಟಿಗೆ “ಮನೆಯಲ್ಲೇ ವಿಚಾರಣೆಗೆ ಹಾಜರಾಗುವುದಾಗಿ” ಪತ್ರ ಬರೆದಿದ್ದರು. ಅದರಂತೆ ಜೂ.07 ರಂದು ಜಾಮೀನು ಸಿಕ್ಕ ಬೆನ್ನಲ್ಲೇ ಭವಾನಿ ರೇವಣ್ಣ ವಿಚಾರಣೆಗೆ ಎಸ್​ಐಟಿ ಎದುರು ಹಾಜರಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:43 pm, Fri, 14 June 24

ಬಾಹ್ಯಾಕಾಶದಿಂದ ಭೂಮಿಗೆ ಮರಳಿದ ಬಳಿಕ ಕ್ಯಾಪ್ಸುಲ್​ನಿಂದ ಹೊರ ಬಂದ ಸುನಿತಾ
ಬಾಹ್ಯಾಕಾಶದಿಂದ ಭೂಮಿಗೆ ಮರಳಿದ ಬಳಿಕ ಕ್ಯಾಪ್ಸುಲ್​ನಿಂದ ಹೊರ ಬಂದ ಸುನಿತಾ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್