AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಕಿಡ್ನ್ಯಾಪ್ ಪ್ರಕರಣ; ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು ವಿಸ್ತರಿಸಿದ ಹೈಕೋರ್ಟ್

ಮೈಸೂರು ಜಿಲ್ಲೆಯ ಕೆ.ಆರ್​.ನಗರ ಮಹಿಳೆಯ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಭವಾನಿ ರೇವಣ್ಣ(Bhavani Revanna)ಗೆ ನಿರೀಕ್ಷಣಾ ಜಾಮೀನು ವಿಸ್ತರಿಸಿದೆ. ಈಗಾಗಲೇ ಭವಾನಿ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಪೂರ್ಣವಾಗಿದ್ದು, ಜಾಮೀನು ಅರ್ಜಿ ಸಂಬಂಧ ಆದೇಶ ಕಾಯ್ದಿರಿಸಿದೆ.

ಮಹಿಳೆ ಕಿಡ್ನ್ಯಾಪ್ ಪ್ರಕರಣ; ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು ವಿಸ್ತರಿಸಿದ ಹೈಕೋರ್ಟ್
ಭವಾನಿ ರೇವಣ್ಣ
Ramesha M
| Edited By: |

Updated on:Jun 14, 2024 | 7:55 PM

Share

ಬೆಂಗಳೂರು, ಜೂ.14: ಮೈಸೂರು ಜಿಲ್ಲೆಯ ಕೆ.ಆರ್​.ನಗರ ಮಹಿಳೆಯ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಭವಾನಿ ರೇವಣ್ಣ(Bhavani Revanna)ಗೆ ನಿರೀಕ್ಷಣಾ ಜಾಮೀನು ವಿಸ್ತರಿಸಿದೆ. ಈಗಾಗಲೇ ಭವಾನಿ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಪೂರ್ಣವಾಗಿದ್ದು, ಜಾಮೀನು ಅರ್ಜಿ ಸಂಬಂಧ ಆದೇಶ ಕಾಯ್ದಿರಿಸಿದೆ. ಇನ್ನು ಈ ಕೇಸ್​ಗೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗದೆ ನಾಪತ್ತೆಯಾಗಿದ್ದ ಭವಾನಿ ರೇವಣ್ಣ ಅವರು ಜೂ.07 ರಂದು ಎಸ್​ಐಟಿ ಅಧಿಕಾರಿಗಳ ಮುಂದೆ ಪ್ರತ್ಯಕ್ಷವಾಗಿದ್ದರು.

ಏನಿದು ಘಟನೆ?

ಹಾಸನ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ  ಅಶ್ಲೀಲ ವಿಡಿಯೋದಲ್ಲಿ ‘ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆ.ಆರ್​​ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ಹೆಚ್​ಡಿ ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಿಸಿದ್ದ. ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್​ಐಟಿ ಅಧಿಕಾರಿಗಳು ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು. ಈಗಾಗಲೆ ಆರೋಪಿ ಬಾಬುನನ್ನು ಬಂಧಿಸಲಾಗಿದೆ.

ಇದನ್ನೂ ಓದಿ:ಎಸ್ಐಟಿ ಜೊತೆ ಕಣ್ಣಾಮುಚ್ಚಾಲೆ ಆಡುತ್ತಿರುವ ಭವಾನಿ ರೇವಣ್ಣ ತಮ್ಮ ತೊಂದರೆ ಹೆಚ್ಚಿಸಿಕೊಳ್ಳುತ್ತಿದ್ದಾರೆ!

ಇದೇ ಪ್ರಕರಣದಲ್ಲಿ ಭವಾನಿ ರೇವಣ್ಣಗೂ ಕೂಡ ಎಸ್​ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಬೇಕು. ಈ ಸಂಬಂಧ ಎಸ್​ಐಟಿ ಭವಾನಿ ರೇವಣ್ಣ ಅವರಿಗೆ ಎರಡೆರಡು ನೋಟಿಸ್​ ಕೊಟ್ಟಿತ್ತು. ನೋಟಿಸ್​ ನೀಡುತ್ತಿದ್ದಂತೆ ಭವಾನಿ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕತಿಸಿತ್ತು. ಅರ್ಜಿ ತಿರಸ್ಕೃತಗೊಳ್ಳುತ್ತಿದ್ದಂತೆ ಎಸ್​ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರನ್ನು ವಿಚಾರಣೆಗೆ ಒಳಪಡಿಸಲು ತಯಾರಿ ನಡೆಸಿದ್ದರು. ಇದೇ ವೇಳೆ ಭವಾನಿ ರೇವಣ್ಣ ಕೂಡ ಎಸ್​ಐಟಿಗೆ “ಮನೆಯಲ್ಲೇ ವಿಚಾರಣೆಗೆ ಹಾಜರಾಗುವುದಾಗಿ” ಪತ್ರ ಬರೆದಿದ್ದರು. ಅದರಂತೆ ಜೂ.07 ರಂದು ಜಾಮೀನು ಸಿಕ್ಕ ಬೆನ್ನಲ್ಲೇ ಭವಾನಿ ರೇವಣ್ಣ ವಿಚಾರಣೆಗೆ ಎಸ್​ಐಟಿ ಎದುರು ಹಾಜರಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:43 pm, Fri, 14 June 24

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು