AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯನ್ನ ಹತ್ಯೆಗೈದು ಮಗಳ ಮದ್ವೆಗೆಂದು ಖರೀದಿಸಿದ್ದ 1 ಕೆಜಿ ಚಿನ್ನ ದೋಚಿ ಪರಾರಿ

ಬೆಂಗಳೂರಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಹಾಡುಹಗಲೇ ಬೆಂಗಳೂರಿನ ಕಾಟನ್​ಪೇಟೆ ದರ್ಗಾ ರಸ್ತೆಯಲ್ಲಿರುವ ಬಟ್ಟೆ ವ್ಯಾಪಾರಿಯೊಬ್ಬರ ಮನೆಯೊಳಗೆ ನುಗ್ಗಿದ ದುಷ್ಕರ್ಮಿಗಳು ಒಬ್ಬಂಟಿಯಾಗಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬಳಿಕ, ಮನೆಯಲ್ಲಿನ ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಮಹಿಳೆಯನ್ನ ಹತ್ಯೆಗೈದು ಮಗಳ ಮದ್ವೆಗೆಂದು ಖರೀದಿಸಿದ್ದ 1 ಕೆಜಿ ಚಿನ್ನ ದೋಚಿ ಪರಾರಿ
ಸಾಂದರ್ಭಿಕ ಚಿತ್ರ
Shivaprasad B
| Edited By: |

Updated on:May 26, 2025 | 8:42 PM

Share

ಬೆಂಗಳೂರು, ಮೇ 26: ಮನೆಯಲ್ಲಿ ಒಬ್ಬಂಟಿಯಾಗಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದು 20 ಲಕ್ಷ ನಗದು, 1 ಕೆಜಿ ಚಿನ್ನಾಭರಣ ದೋಚಿಕೊಂಡು ದುಷ್ಕರ್ಮಿ ಪರಾರಿಯಾಗಿದ್ದಾನೆ. ಬೆಂಗಳೂರಿನ (Bengaluru) ಕಾಟನ್​ಪೇಟೆ ದರ್ಗಾ ರಸ್ತೆಯಲ್ಲಿನ ಮನೆಯಲ್ಲಿ ಘಟನೆ ನಡೆದಿದೆ. ಬಟ್ಟೆ ವ್ಯಾಪಾರಿ ಪ್ರಕಾಶ್ ಪತ್ನಿ ಲತಾ (40) ಮೃತದುರ್ದೈವಿ. ಲತಾ ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕಾಟನ್​ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದಂಪತಿ ಮೂಲತಃ ಬೀದರ್​ ಜಿಲ್ಲೆ ಕಮಲನಗರದ ಬಳತ್ಕಿ ಗ್ರಾಮದವರು. ಕಳೆದ 30 ವರ್ಷಗಳಿಂದ ಕಾಟನ್​ಪೇಟೆಯಲ್ಲಿ ವಾಸವಾಗಿದ್ದಾರೆ. ಪ್ರಕಾಶ್ ಮತ್ತು ಲತಾ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪುತ್ರಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ನಿವೃತ್ತ ಡಿಜಿ,ಐಜಿಪಿ ಓಂಪ್ರಕಾಶ್ ಹತ್ಯೆಗೆ ಕಾರಣ ಬಹಿರಂಗ: ತನಿಖೆಯಲ್ಲಿ ಸಿಕ್ಕ 9 ಕಾರಣಗಳು

ಇದನ್ನೂ ಓದಿ
Image
ಓಂಪ್ರಕಾಶ್ ಕೊಲೆ: ದಾಖಲೆ ಸಿಸಿಬಿಗೆ ಹಸ್ತಾಂತರ, ಕೃತಿ ವಿಚಾರಣೆಗೆ ಫಿಟ್
Image
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
Image
ಓಂ ಪ್ರಕಾಶ್​ ಕೊಲೆ: ತನಿಖಾಧಿಕಾರಿಗಳ ಎದುರು ಕೊಲೆ ರಹಸ್ಯ ಬಿಚ್ಚಿಟ್ಟ ಪಲ್ಲವಿ
Image
ಓಂ ಪ್ರಕಾಶ್​ ಕೊಲೆ: ಪತಿಯನ್ನು 8-10 ಬಾರಿ ಇರಿದು ಕೊಂದ ಪತ್ನಿ?

ಮಗಳ ಮದುವೆಗೆಂದು ಖರೀದಿಸಿದ್ದ ಚಿನ್ನ

ಕುಟುಂಬ ಒಂದು ವರ್ಷದ ಹಿಂದೆಯಷ್ಟೇ ಈ ಕಟ್ಟಡದಲ್ಲಿ ಬಾಡಿಗೆಗೆ ಬಂದಿದ್ದರು. ಪ್ರಕಾಶ್ ಬೆಂಗಳೂರಲ್ಲಿ ಹೋಲ್​ಸೇಲ್ ಬಟ್ಟೆ ವ್ಯಾಪಾರಿಯಾಗಿದ್ದಾರೆ. ಎಂದಿನಂತೆ ಪ್ರಕಾಶ್​ ಅವರು  ಸೋಮವಾರ (ಮೇ26) ಬೆಳಗ್ಗೆ  ​ಅಂಗಡಿಗೆ ಹೋಗಿದ್ದರು. ಇನ್ನು, ಮಗಳು ಕೆಲಸಕ್ಕೆ ಹೋಗಿದ್ದರು. ಮಗ ಕೂಡ ಶಾಲೆಗೆ ಹೋಗಿದ್ದನು. ಹೀಗಾಗಿ, ಮೃತ ಲತಾ ಒಬ್ಬರೇ ಮನೆಯಲ್ಲಿದ್ದರು. ಈ ವೇಳೆ ಮನೆಗೆ ನುಗ್ಗಿದ ದುಷ್ಕರ್ಮಿ ಲತಾ ಅವರನ್ನು ಹತ್ಯೆ ಮಾಡಿ, ಬಳಿಕ ಮಗಳ ಮದುವೆಗೆಂದು ಖರೀದಿಸಿಟ್ಟಿದ್ದ 1 ಕೆಜಿ ಚಿನ್ನಾಭರಣ ಮತ್ತು 20 ಲಕ್ಷ ರೂ. ಹಣ ಕದ್ದು ಪರಾರಿಯಾಗಿದ್ದಾನೆ. ಮಧ್ಯಾಹ್ನ ಊಟಕ್ಕೆಂದು ಪ್ರಕಾಶ್ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:59 pm, Mon, 26 May 25

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​