AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ನಾಗಭೂಷಣ್ ಕಾರಿಗೆ ಮಹಿಳೆ ಬಲಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಮೃತ ಮಹಿಳೆಯ ಕುಟುಂಬ

ಪ್ರೇಮಾ ಮೃತದೇಹವನ್ನು ಅವರ ಮೈದುನ ಜಯರಾಮ್ ಮನೆಗೆ ರವಾನೆ ಮಾಡಲಾಗಿದ್ದು, ಇಂದು ಸಂಜೆ ವೇಳೆ ಹರಿಶ್ಚಂದ್ರ ಘಾಟ್​ನಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ನಟ ನಾಗಭೂಷಣ್ ಕಾರಿಗೆ ಮಹಿಳೆ ಬಲಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಮೃತ ಮಹಿಳೆಯ ಕುಟುಂಬ
ನಟ ನಾಗಭೂಷಣ್​ ಕಾರು ಅಪಘಾತ
Malatesh Jaggin
| Edited By: |

Updated on: Oct 01, 2023 | 3:24 PM

Share

ಬೆಂಗಳೂರು, ಅ.01: ನಟ ನಾಗಭೂಷಣ್ (Nagabhushana) ಕಾರು ಡಿಕ್ಕಿಯಾಗಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ‘ಮೃತ ಪ್ರೇಮಾ ಕುಟುಂಬ ಸದಸ್ಯರು ಸಾವಿನಲ್ಲೂ ಮಾನವೀಯತೆ ಮೆರೆದಿದ್ದಾರೆ. ಹೌದು, ಪ್ರೇಮಾ ಅವರ ನೇತ್ರದಾನ ಮಾಡುವ ಮೂಲಕ ಇನ್ನೊಂದು ಜೀವಕ್ಕೆ ಆಸರೆಯಾಗಿದ್ದಾರೆ. ಇನ್ನು ಕೆಂಪೇಗೌಡ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಇದೀಗ ಪೊಲೀಸರು ಸಂಬಂಧಿಕರಿಗೆ ಪ್ರೇಮಾ ಮೃತದೇಹ ಹಸ್ತಾಂತರಿಸಿದ್ದು, ಬೆಂಗಳೂರಿನ ಗಾಯತ್ರಿನಗರದಲ್ಲಿರುವ ಪ್ರೇಮಾ ಅವರ ಮೈದುನ ಜಯರಾಮ್ ಎಂಬುವವರ ನಿವಾಸಕ್ಕೆ ಶವ ರವಾನೆ ಮಾಡಲಾಗಿದೆ.

ಸಂಜೆ ವೇಳೆಗೆ ಹರಿಶ್ಚಂದ್ರಘಾಟ್​ನಲ್ಲಿ ಪ್ರೇಮಾ ಶವಸಂಸ್ಕಾರ

ಹೌದು, ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ ನಾಗಭೂಷಣ್​  ಅವರ ಕಾರು ಇಂದು (ಅ.​ 30)naga ಬೆಳಿಗ್ಗೆ ಕೋಣನಕುಂಟೆ ಕ್ರಾಸ್​ ಬಳಿ ಈ ಅಪಘಾತವಾಗಿತ್ತು. ಫುಟ್​ ಪಾತ್​ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ನಾಗಭೂಷಣ್​ ಅವರ ಕಾರು ಡಿಕ್ಕಿ ಆಗಿತ್ತು. ಈ ವೇಳೆ ಪ್ರೇಮಾ ಎಂಬುವವರು ಮೃತರಾಗಿದ್ದು, ಅವರ ಪತಿ ಕೃಷ್ಣ ಬಿ. ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ವಿಷಯ ತಿಳಿಯುತ್ತಿದ್ದಂತೆ ಪ್ರೇಮಾ ಮತ್ತು ಕೃಷ್ಣ ದಂಪತಿಯ ಪುತ್ರ ಪಾರ್ಥ ಕೆ. ಅವರು ಠಾಣೆಗೆ ದೂರು ನೀಡಿದ್ದರು. ಇದೀಗ ಪ್ರೇಮಾ ಮೃತದೇಹವನ್ನು ಅವರ ಮೈದುನ ಜಯರಾಮ್ ಮನೆಗೆ ರವಾನೆ ಮಾಡಲಾಗಿದ್ದು, ಇಂದು ಸಂಜೆ ವೇಳೆ ಹರಿಶ್ಚಂದ್ರ ಘಾಟ್​ನಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ನಟ ನಾಗಭೂಷಣ್​ ಕಾರು ಅಪಘಾತ; ಪಾದಚಾರಿ ಸಾವು; ಇನ್ನೊಬ್ಬರ ಸ್ಥಿತಿ ಗಂಭೀರ

ಘಟನೆ ಕುರಿತು ಡಿಸಿಪಿ ಹೇಳಿದ್ದಿಷ್ಟು

ಇನ್ನು ಘಟನೆ ಕುರಿತು ಮಾತನಾಡಿದ ಡಿಸಿಪಿ ಶಿವಪ್ರಕಾಶ್ ದೇವರಾಜ್ ‘ನಿನ್ನೆ ರಾತ್ರಿ‌ 9.30 ರಲ್ಲಿ ಕೆ.ಎಸ್.ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಅಪಘಾತವಾಗಿದೆ. ಇಬ್ಬರು ಪಾದಾಚಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಅತೀವೇಗ ಮತ್ತು ನಿರ್ಲಕ್ಷ್ಯದಿಂದ ಈ ಘಟನೆ ಆಗಿದೆ ಎಂದರು. ‘ಪ್ರೇಮ ಅವರು ಆಸ್ಪತ್ರೆ ಸೇರುವ ಮುಂಚೆನೆ ಸಾವನ್ನಪ್ಪಿದ್ದರು. ಕೃಷ್ಣ ಎಂಬುವವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಂಟ್ರೋಲ್ ತಪ್ಪಿ ಕಾರು ಪೋಲ್​ಗೂ ಡಿಕ್ಕಿ ಹೊಡೆದಿದೆ. ಕಾರು ಚಾಲಕ ನಾಗಭೂಷಣ್ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಜೊತೆಗೆ ಮದ್ಯಪಾನ ಪರೀಕ್ಷೆಗೂ ಕಳುಹಿಸಲಾಗಿದ್ದು, ಸ್ಟೇಷನ್ ಬೇಲ್ ಕೊಟ್ಟು ವಾಪಾಸ್​ ಕಳುಹಿಸಲಾಗಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ