ಬೆಂಗಳೂರು: ಪ್ರೀತಿಸಿ ಮದುವೆಯಾದ ನಂತರ ವಂಚಿಸಿ ಪರಾರಿಯಾದ ಮಹಿಳೆ, ಠಾಣೆ ಮೆಟ್ಟಿಲೇರಿದ ಪತಿ

ಮಹಿಳೆಯೊಬ್ಬಳು ಫೇಸ್​ಬುಕ್​ನಲ್ಲಿ ವ್ಯಕ್ತಿಯೊಬ್ಬರನ್ನು ಪರಿಚಯ ಮಾಡಿಕೊಂಡು ಪ್ರೀತಿಸಿ ಮದುವೆಯಾದ ನಂತರ ವಂಚನೆ ಎಸಗಿದ ಪ್ರಕರಣ ಬೆಂಗಳೂರಿನಲ್ಲಿ ನಡೆದೆ. ಮೊದಲ ಮದುವೆ ಮುಚ್ಚಿಟ್ಟು ವಂಚನೆ ಎಸಗಲೆಂದೇ ಆಕೆಯ ಸಂಬಂಧಿಕರು ತನ್ನೊಂದಿಗೆ ಮದುವೆ ಮಾಡಿದ್ದಾಗಿ ಆರೋಪಿಸಿ ಪತಿ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬೆಂಗಳೂರು: ಪ್ರೀತಿಸಿ ಮದುವೆಯಾದ ನಂತರ ವಂಚಿಸಿ ಪರಾರಿಯಾದ ಮಹಿಳೆ, ಠಾಣೆ ಮೆಟ್ಟಿಲೇರಿದ ಪತಿ
ವ್ಯಕ್ತಿಯೊಬ್ಬರನ್ನು ಪ್ರೀತಿಸಿ ಮದುವೆಯಾದ ಬಳಿಕ ಲಕ್ಷಾಂತರ ರೂಪಾಯಿ ವಂಚಿಸಿ ಮನೆ ಬಿಟ್ಟು ಹೋದ ಮಹಿಳೆ
Follow us
| Updated By: Rakesh Nayak Manchi

Updated on: Sep 17, 2023 | 1:23 PM

ಬೆಂಗಳೂರು, ಸೆ.17: ಮಹಿಳೆಯೊಬ್ಬಳು ಫೇಸ್​ಬುಕ್​ನಲ್ಲಿ ವ್ಯಕ್ತಿಯೊಬ್ಬರನ್ನು ಪರಿಚಯ ಮಾಡಿಕೊಂಡು ಪ್ರೀತಿಸಿ ಮದುವೆಯಾದ ನಂತರ ವಂಚನೆ ಎಸಗಿದ ಪ್ರಕರಣ ಬೆಂಗಳೂರಿನಲ್ಲಿ (Bangalore) ನಡೆದೆ. ಮೊದಲ ಮದುವೆ ಮುಚ್ಚಿಟ್ಟು ವಂಚನೆ ಎಸಗಲೆಂದೇ ಆಕೆಯ ಸಂಬಂಧಿಕರು ತನ್ನೊಂದಿಗೆ ಮದುವೆ ಮಾಡಿದ್ದಾಗಿ ಆರೋಪಿಸಿ ಪತಿ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪೇಸ್ ಬುಕ್​ನಲ್ಲಿ ಮಹಿಳೆ ಪರಿಚಯ ಮಾಡಿಕೊಂಡಿದ್ದ ಸಂತೋಷ್, 2018 ರಲ್ಲಿ ತಾನು ಕೆಲಸ ಮಾಡುವ ಕಂಪನಿಯಲ್ಲೇ ಆಕೆಗೆ ಕೆಲಸ ಕೊಡಿಸಿದ್ದ. ಇದೇ ಪರಿಚಯದ ಮೇಲೆ ಸಂತೋಷ್ ಮತ್ತು ಮಹಿಳೆ ನಡುವೆ ಪ್ರೇಮಾಂಕುರವಾಗಿದೆ. ಬಳಿಕ ಮದುವೆಯಾಗಲೂ ನಿರ್ಧರಿಸಿದ್ದಾರೆ. ಅದರಂತೆ ಮದುವೆ ಮಾಡಿಸಲು ಮಹಿಳೆಯ ಅಕ್ಕ-ಭಾವ ಮುಂದೆ ಬಂದಿದ್ದಾರೆ.

ಮದುವೆ ಮಾಡಿಸಲು ಚಿನ್ನದ ಆಭರಣ ಮಾಡಿಸುವಂತೆ ಮಹಿಳೆಯ ಅಕ್ಕ ಸಂತೋಷ್​ಗೆ ಹೇಳಿದ್ದಲ್ಲದೆ, ಮದುವೆಗೆ ಮುಂಚೆ ಐಫೋನ್ ನೀಡುವಂತೆಯೂ ಬೇಡಿಕೆ ಇಟ್ಟಿದ್ದಾಳೆ. ಹೀಗಾಗಿ ಸಂತೋಷ್ 2.60 ಲಕ್ಷ ಮೌಲ್ಯದ ಎರಡು ಐಫೋನ್‌ ಕೊಡಿಸಿದ್ದಾರೆ.

ಇದನ್ನೂ ಓದಿ: ಕ್ರೆಡಿಟ್​ ಕಾರ್ಡ್ ಲಿಮಿಟ್​ ಹೆಚ್ಚಿಸುವುದಾಗಿ ಕರೆ ಮಾಡಿ 1 ಲಕ್ಷ ರೂ. ವಂಚನೆ; ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಹಣ, ಆಭರಣ, ಮೊಬೈಲ್ ಫೋನ್ ಕೊಡಿಸುವುದರ ಜೊತೆಗೆ ಮದುವೆ ತಯಾರಿ ಕೂಡ ಶುರುವಾಗಿ 2022 ರಂದು ನವೆಂಬರ್ ತಿಂಗಳಲ್ಲಿ ಮದ್ದೂರಮ್ಮ ದೇವಾಲಯದಲ್ಲಿ ಮದುವೆಯೂ ನಡೆಯಿತು. ಆದರೆ ಈ ದಂಪತಿ ನಡುವೆ ನಡೆದ ದಾಂಪತ್ಯ ಜೀವನ ಕೇಲವ ಮೂರೇ ತಿಂಗಳು ಮಾತ್ರ. ಮದುವೆಗೂ ಮುನ್ನ ಸಂತೋಷ್​ ಬಳಿಯಿಂದ ಚಿನ್ನಾಭರಣ, ಮೊಬೈಲ್​ ಫೋನ್ ಪಡೆದಿರುವುದು ಸೇರಿದಂತೆ ಲಕ್ಷಾಂತರ ರೂಪಾಯಿ ವಂಚಿಸಿ ಮನೆ ಬಿಟ್ಟು ಹೋಗಿದ್ದಾಳೆ.

ಮದುವೆಯಾದರೂ ತನ್ನೊಂದಿಗೆ ದೈಹಿಕ ಸಂಪರ್ಕ ಮಾಡಿಲ್ಲ. ಆಕೆಗೆ ಮೊದಲು ಒಂದು ಮದುವೆಯಾಗಿದ್ದು, ಇದನ್ನು ಮುಚ್ಚಿಟ್ಟು ತನ್ನೊಂದಿಗೆ ಮದುವೆ ಮಾಡಿಸಿದ್ದಾರೆ. ಮೋಸ ಮಾಡುವ ಉದ್ದೇಶದಿಂದಲೇ ಮದುವೆಯಾಗಿದ್ದಾರೆ. ಎಂದು ಆರೋಪಿಸಿ ಮಹಿಳೆ ಮತ್ತು ಆಕೆಯ ಅಕ್ಕ-ಭಾವನ ವಿರುದ್ಧ ಸಂತೋಷ್ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಪೊಲೀಸರು ಮೂವರ ವಿರುದ್ಧ ಎಫ್​ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ