AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪ್ರೀತಿಸಿ ಮದುವೆಯಾದ ನಂತರ ವಂಚಿಸಿ ಪರಾರಿಯಾದ ಮಹಿಳೆ, ಠಾಣೆ ಮೆಟ್ಟಿಲೇರಿದ ಪತಿ

ಮಹಿಳೆಯೊಬ್ಬಳು ಫೇಸ್​ಬುಕ್​ನಲ್ಲಿ ವ್ಯಕ್ತಿಯೊಬ್ಬರನ್ನು ಪರಿಚಯ ಮಾಡಿಕೊಂಡು ಪ್ರೀತಿಸಿ ಮದುವೆಯಾದ ನಂತರ ವಂಚನೆ ಎಸಗಿದ ಪ್ರಕರಣ ಬೆಂಗಳೂರಿನಲ್ಲಿ ನಡೆದೆ. ಮೊದಲ ಮದುವೆ ಮುಚ್ಚಿಟ್ಟು ವಂಚನೆ ಎಸಗಲೆಂದೇ ಆಕೆಯ ಸಂಬಂಧಿಕರು ತನ್ನೊಂದಿಗೆ ಮದುವೆ ಮಾಡಿದ್ದಾಗಿ ಆರೋಪಿಸಿ ಪತಿ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬೆಂಗಳೂರು: ಪ್ರೀತಿಸಿ ಮದುವೆಯಾದ ನಂತರ ವಂಚಿಸಿ ಪರಾರಿಯಾದ ಮಹಿಳೆ, ಠಾಣೆ ಮೆಟ್ಟಿಲೇರಿದ ಪತಿ
ವ್ಯಕ್ತಿಯೊಬ್ಬರನ್ನು ಪ್ರೀತಿಸಿ ಮದುವೆಯಾದ ಬಳಿಕ ಲಕ್ಷಾಂತರ ರೂಪಾಯಿ ವಂಚಿಸಿ ಮನೆ ಬಿಟ್ಟು ಹೋದ ಮಹಿಳೆ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Sep 17, 2023 | 1:23 PM

Share

ಬೆಂಗಳೂರು, ಸೆ.17: ಮಹಿಳೆಯೊಬ್ಬಳು ಫೇಸ್​ಬುಕ್​ನಲ್ಲಿ ವ್ಯಕ್ತಿಯೊಬ್ಬರನ್ನು ಪರಿಚಯ ಮಾಡಿಕೊಂಡು ಪ್ರೀತಿಸಿ ಮದುವೆಯಾದ ನಂತರ ವಂಚನೆ ಎಸಗಿದ ಪ್ರಕರಣ ಬೆಂಗಳೂರಿನಲ್ಲಿ (Bangalore) ನಡೆದೆ. ಮೊದಲ ಮದುವೆ ಮುಚ್ಚಿಟ್ಟು ವಂಚನೆ ಎಸಗಲೆಂದೇ ಆಕೆಯ ಸಂಬಂಧಿಕರು ತನ್ನೊಂದಿಗೆ ಮದುವೆ ಮಾಡಿದ್ದಾಗಿ ಆರೋಪಿಸಿ ಪತಿ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪೇಸ್ ಬುಕ್​ನಲ್ಲಿ ಮಹಿಳೆ ಪರಿಚಯ ಮಾಡಿಕೊಂಡಿದ್ದ ಸಂತೋಷ್, 2018 ರಲ್ಲಿ ತಾನು ಕೆಲಸ ಮಾಡುವ ಕಂಪನಿಯಲ್ಲೇ ಆಕೆಗೆ ಕೆಲಸ ಕೊಡಿಸಿದ್ದ. ಇದೇ ಪರಿಚಯದ ಮೇಲೆ ಸಂತೋಷ್ ಮತ್ತು ಮಹಿಳೆ ನಡುವೆ ಪ್ರೇಮಾಂಕುರವಾಗಿದೆ. ಬಳಿಕ ಮದುವೆಯಾಗಲೂ ನಿರ್ಧರಿಸಿದ್ದಾರೆ. ಅದರಂತೆ ಮದುವೆ ಮಾಡಿಸಲು ಮಹಿಳೆಯ ಅಕ್ಕ-ಭಾವ ಮುಂದೆ ಬಂದಿದ್ದಾರೆ.

ಮದುವೆ ಮಾಡಿಸಲು ಚಿನ್ನದ ಆಭರಣ ಮಾಡಿಸುವಂತೆ ಮಹಿಳೆಯ ಅಕ್ಕ ಸಂತೋಷ್​ಗೆ ಹೇಳಿದ್ದಲ್ಲದೆ, ಮದುವೆಗೆ ಮುಂಚೆ ಐಫೋನ್ ನೀಡುವಂತೆಯೂ ಬೇಡಿಕೆ ಇಟ್ಟಿದ್ದಾಳೆ. ಹೀಗಾಗಿ ಸಂತೋಷ್ 2.60 ಲಕ್ಷ ಮೌಲ್ಯದ ಎರಡು ಐಫೋನ್‌ ಕೊಡಿಸಿದ್ದಾರೆ.

ಇದನ್ನೂ ಓದಿ: ಕ್ರೆಡಿಟ್​ ಕಾರ್ಡ್ ಲಿಮಿಟ್​ ಹೆಚ್ಚಿಸುವುದಾಗಿ ಕರೆ ಮಾಡಿ 1 ಲಕ್ಷ ರೂ. ವಂಚನೆ; ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಹಣ, ಆಭರಣ, ಮೊಬೈಲ್ ಫೋನ್ ಕೊಡಿಸುವುದರ ಜೊತೆಗೆ ಮದುವೆ ತಯಾರಿ ಕೂಡ ಶುರುವಾಗಿ 2022 ರಂದು ನವೆಂಬರ್ ತಿಂಗಳಲ್ಲಿ ಮದ್ದೂರಮ್ಮ ದೇವಾಲಯದಲ್ಲಿ ಮದುವೆಯೂ ನಡೆಯಿತು. ಆದರೆ ಈ ದಂಪತಿ ನಡುವೆ ನಡೆದ ದಾಂಪತ್ಯ ಜೀವನ ಕೇಲವ ಮೂರೇ ತಿಂಗಳು ಮಾತ್ರ. ಮದುವೆಗೂ ಮುನ್ನ ಸಂತೋಷ್​ ಬಳಿಯಿಂದ ಚಿನ್ನಾಭರಣ, ಮೊಬೈಲ್​ ಫೋನ್ ಪಡೆದಿರುವುದು ಸೇರಿದಂತೆ ಲಕ್ಷಾಂತರ ರೂಪಾಯಿ ವಂಚಿಸಿ ಮನೆ ಬಿಟ್ಟು ಹೋಗಿದ್ದಾಳೆ.

ಮದುವೆಯಾದರೂ ತನ್ನೊಂದಿಗೆ ದೈಹಿಕ ಸಂಪರ್ಕ ಮಾಡಿಲ್ಲ. ಆಕೆಗೆ ಮೊದಲು ಒಂದು ಮದುವೆಯಾಗಿದ್ದು, ಇದನ್ನು ಮುಚ್ಚಿಟ್ಟು ತನ್ನೊಂದಿಗೆ ಮದುವೆ ಮಾಡಿಸಿದ್ದಾರೆ. ಮೋಸ ಮಾಡುವ ಉದ್ದೇಶದಿಂದಲೇ ಮದುವೆಯಾಗಿದ್ದಾರೆ. ಎಂದು ಆರೋಪಿಸಿ ಮಹಿಳೆ ಮತ್ತು ಆಕೆಯ ಅಕ್ಕ-ಭಾವನ ವಿರುದ್ಧ ಸಂತೋಷ್ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಪೊಲೀಸರು ಮೂವರ ವಿರುದ್ಧ ಎಫ್​ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

2ನೇ ಮದುವೆಯಾದ ಶಿಖರ್ ಧವನ್; ವಿಡಿಯೋ ವೈರಲ್
2ನೇ ಮದುವೆಯಾದ ಶಿಖರ್ ಧವನ್; ವಿಡಿಯೋ ವೈರಲ್
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!