AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಟ್ರಾಫಿಕ್​ನಲ್ಲಿ ಸಿಲುಕಿ ತರಕಾರಿ ಸಿಪ್ಪೆ ಸುಲಿದ ಮಹಿಳೆ: ನೆಟ್ಟಿಗರು ಏನಂದ್ರು ನೋಡಿ

ಬೆಂಗಳೂರಿನ ಈ ಟ್ರಾಫಿಕ್​ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಚರ್ಚೆಗೆ ಬರುತ್ತಲೇ ಇರುತ್ತದೆ. ಇತ್ತೀಚೆಗೆ ಟ್ರಾಫಿಕ್​​ನಲ್ಲಿ ಮಹಿಳೆಯೊಬ್ಬರು ತಮ್ಮ ಲ್ಯಾಪ್​ಟಾಪ್​ನಲ್ಲಿ ಕೆಲಸ ಮಾಡುತ್ತಿರುವುದು ವೈರಲ್​ ಆಗಿತ್ತು. ಇದೀಗ ಅದೇ ರೀತಿಯಾಗಿ ಮಹಿಳೆಯೊಬ್ಬರು ಟ್ರಾಫಿಕ್​ನಲ್ಲಿ ಸಿಲುಕಿ ತರಕಾರಿ ಸುಲಿದಿದ್ದಾರೆ. 

ಬೆಂಗಳೂರಿನ ಟ್ರಾಫಿಕ್​ನಲ್ಲಿ ಸಿಲುಕಿ ತರಕಾರಿ ಸಿಪ್ಪೆ ಸುಲಿದ ಮಹಿಳೆ: ನೆಟ್ಟಿಗರು ಏನಂದ್ರು ನೋಡಿ
ತರಕಾರಿ
ಗಂಗಾಧರ​ ಬ. ಸಾಬೋಜಿ
|

Updated on:Sep 18, 2023 | 7:18 AM

Share

ಬೆಂಗಳೂರು, ಸೆಪ್ಟೆಂಬರ್​​ 18: ಸಿಲಿಕಾನ್​ ಸಿಟಿ, ಉದ್ಯಾನ ನಗರಿ, ಐಟಿ ಹಬ್​ ಎಂದು ಖ್ಯಾತಿಯಾಗಿರುವ ಬೆಂಗಳೂರ ಟ್ರಾಫಿಕ್ (traffic)​ ಸಿಟಿ ಎಂಬ ಬಿರುದನ್ನು ಸಹ ಪಡೆದುಕೊಂಡಿದೆ. ಒಂದು ವರದಿಯ ಪ್ರಕಾರ ವಿಶ್ವದಲ್ಲೇ ಅತಿ ಹೆಚ್ಚು ವಾಹನ ದಟ್ಟಣೆ ಇರುವುದು ಲಂಡನ್​​ನಲ್ಲಾದರೆ, ಅದರ ನಂತರದ ಸ್ಥಾನವನ್ನು ಬೆಂಗಳೂರು ಪಡೆದುಕೊಂಡಿದೆ ಎನ್ನಲಾಗುತ್ತಿದೆ. ಬೆಂಗಳೂರಿನ ಈ ಟ್ರಾಫಿಕ್​ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಚರ್ಚೆಗೆ ಬರುತ್ತಲೇ ಇರುತ್ತದೆ. ಇತ್ತೀಚೆಗೆ ಟ್ರಾಫಿಕ್​​ನಲ್ಲಿ ಮಹಿಳೆಯೊಬ್ಬರು ತಮ್ಮ ಲ್ಯಾಪ್​ಟಾಪ್​ನಲ್ಲಿ ಕೆಲಸ ಮಾಡುತ್ತಿರುವುದು ವೈರಲ್​ ಆಗಿತ್ತು. ಇದೀಗ ಅದೇ ರೀತಿಯಾಗಿ ಮಹಿಳೆಯೊಬ್ಬರು ಟ್ರಾಫಿಕ್​ನಲ್ಲಿ ಸಿಲುಕಿ ತರಕಾರಿ ಸುಲಿದಿದ್ದಾರೆ.

ಪ್ರಿಯಾ ಎಂಬ ಎಕ್ಸ್​​ ಬಳಕೆದಾರರೊಬ್ಬರು, ಟ್ರಾಫಿಕ್​ನಲ್ಲಿ ಸಿಲುಕಿದ್ದು, ಕಾರಿನಲ್ಲಿ ತರಕಾರಿಗಳ ಸಿಪ್ಪೆ ಸುಲಿಯುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ದಟ್ಟಣೆಯ ಟ್ರಾಫಿಕ್​​ ಸಮಯದಲ್ಲಿ ನಾವು  ಉತ್ಪಾದಕರಾಗಿರುವುದು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಗಣೇಶ ಚತುರ್ಥಿ: ಮೆಜೆಸ್ಟಿಕ್​​​ KSRTC ಬಸ್​​ ನಿಲ್ದಾಣದಲ್ಲಿ ಜನದಟ್ಟಣೆ, ಮೇಲ್ವಿಚಾರಣೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ

ಪ್ರಿಯಾ ಅವರು ಫೋಟೋವನ್ನು ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದ್ದು, ಸುಮಾರು 50,000 ವೀಕ್ಷಣೆ ಮತ್ತು ಸುಮಾರು 100 ಕಾಮೆಂಟ್​​​​ಗಳು ಬಂದಿವೆ. ಬೆಂಗಳೂರಿನ ದಟ್ಟಣೆಯ ಟ್ರಾಫಿಕ್​​ ಪ್ರಯಾಣಿಸುವಾಗ ಕಲಿವುದು, ಸಾಧಿಸುವುದು ಮತ್ತು ಬೆಳೆಯಲು ತುಂಬಾ ಇದೆ ಎಂದು ನೆಟ್ಟಿಗರೊಬ್ಬರು ಕಾಮೆಂಟ್​​​​ ಮಾಡಿದ್ದಾರೆ.

ಇನ್ನೊಬ್ಬ ಬಳಕೆದಾರರು, ಹಾಹಾ.. ಮೊಬೈಲ್ ಹೈಡ್ರೋಪೋನಿಕ್ಸ್ ಫಾರ್ಮ್​​ಗಳ ಕಲ್ಪನೆಯೊಂದಿಗೆ ಸ್ಟಾರ್ಟ್ ಅಪ್​​ ಕಂಪಗಳು ಬಂದರೂ ನನಗೆ ಆಶ್ಚರ್ಯವಾಗುವುದಿಲ್ಲ. ಬೆಂಗಳೂರಿನ ಈ ಟ್ರಾಫಿಕ್​ ನಡುವೆ ಸಿಲ್ಕ್ ಬೋರ್ಡ್​ನಿಂದ ಇಂದಿರಾನಗರವನ್ನು ತಲಪುವಷ್ಟರಲ್ಲಿ ಸಸ್ಯಗಳು ಬೆಳೆಯುತ್ತವೆ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಖರೀದಿ ಭರಾಟೆ ಜೋರು, ಗಗನಕ್ಕೆ ಏರಿದ ಹೂವು-ಹಣ್ಣು ಬೆಲೆ

ಸಮದ ಉಳಿತಾಯ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮುಂಬೈನ ಸ್ಥಳೀಯ ರೈಲುಗಳಲ್ಲಿ ಪ್ರಯಾಣದ ಸಮಯದಲ್ಲಿ ತರಕಾರಿಗಳ ಸಿಪ್ಪೆ ಸುಲಿಯುವುದು ಸಾಮಾನ್ಯ ಅಭ್ಯಾಸವಾಗಿದೆ ಎಂದು ಕೆಲವು ಬಳಕೆದಾರರು ತಿಳಿಸಿದ್ದಾರೆ.

ಕ್ಲಾಸಿಕ್​ ಮುಂಬೈ ರೈಲು ಚಟುವಟಿಕೆಗಳು ಅಂತಿಮವಾಗಿ ಬೆಂಗಳೂರಿಗೆ ಬಂದಿವೆ. ಇದು ಬೆಂಗಳೂರಿನ ಟ್ರಾಫಿಕ್​ಗೆ ಸಂಪೂರ್ಣ ಅರ್ಥವನ್ನು ನೀಡುತ್ತದೆ ಎಂದು ಬಳಕೆದಾರರು ಬರೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:18 am, Mon, 18 September 23

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ