AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಟ್ರಾಫಿಕ್​ನಲ್ಲಿ ಸಿಲುಕಿ ತರಕಾರಿ ಸಿಪ್ಪೆ ಸುಲಿದ ಮಹಿಳೆ: ನೆಟ್ಟಿಗರು ಏನಂದ್ರು ನೋಡಿ

ಬೆಂಗಳೂರಿನ ಈ ಟ್ರಾಫಿಕ್​ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಚರ್ಚೆಗೆ ಬರುತ್ತಲೇ ಇರುತ್ತದೆ. ಇತ್ತೀಚೆಗೆ ಟ್ರಾಫಿಕ್​​ನಲ್ಲಿ ಮಹಿಳೆಯೊಬ್ಬರು ತಮ್ಮ ಲ್ಯಾಪ್​ಟಾಪ್​ನಲ್ಲಿ ಕೆಲಸ ಮಾಡುತ್ತಿರುವುದು ವೈರಲ್​ ಆಗಿತ್ತು. ಇದೀಗ ಅದೇ ರೀತಿಯಾಗಿ ಮಹಿಳೆಯೊಬ್ಬರು ಟ್ರಾಫಿಕ್​ನಲ್ಲಿ ಸಿಲುಕಿ ತರಕಾರಿ ಸುಲಿದಿದ್ದಾರೆ. 

ಬೆಂಗಳೂರಿನ ಟ್ರಾಫಿಕ್​ನಲ್ಲಿ ಸಿಲುಕಿ ತರಕಾರಿ ಸಿಪ್ಪೆ ಸುಲಿದ ಮಹಿಳೆ: ನೆಟ್ಟಿಗರು ಏನಂದ್ರು ನೋಡಿ
ತರಕಾರಿ
ಗಂಗಾಧರ​ ಬ. ಸಾಬೋಜಿ
|

Updated on:Sep 18, 2023 | 7:18 AM

Share

ಬೆಂಗಳೂರು, ಸೆಪ್ಟೆಂಬರ್​​ 18: ಸಿಲಿಕಾನ್​ ಸಿಟಿ, ಉದ್ಯಾನ ನಗರಿ, ಐಟಿ ಹಬ್​ ಎಂದು ಖ್ಯಾತಿಯಾಗಿರುವ ಬೆಂಗಳೂರ ಟ್ರಾಫಿಕ್ (traffic)​ ಸಿಟಿ ಎಂಬ ಬಿರುದನ್ನು ಸಹ ಪಡೆದುಕೊಂಡಿದೆ. ಒಂದು ವರದಿಯ ಪ್ರಕಾರ ವಿಶ್ವದಲ್ಲೇ ಅತಿ ಹೆಚ್ಚು ವಾಹನ ದಟ್ಟಣೆ ಇರುವುದು ಲಂಡನ್​​ನಲ್ಲಾದರೆ, ಅದರ ನಂತರದ ಸ್ಥಾನವನ್ನು ಬೆಂಗಳೂರು ಪಡೆದುಕೊಂಡಿದೆ ಎನ್ನಲಾಗುತ್ತಿದೆ. ಬೆಂಗಳೂರಿನ ಈ ಟ್ರಾಫಿಕ್​ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಚರ್ಚೆಗೆ ಬರುತ್ತಲೇ ಇರುತ್ತದೆ. ಇತ್ತೀಚೆಗೆ ಟ್ರಾಫಿಕ್​​ನಲ್ಲಿ ಮಹಿಳೆಯೊಬ್ಬರು ತಮ್ಮ ಲ್ಯಾಪ್​ಟಾಪ್​ನಲ್ಲಿ ಕೆಲಸ ಮಾಡುತ್ತಿರುವುದು ವೈರಲ್​ ಆಗಿತ್ತು. ಇದೀಗ ಅದೇ ರೀತಿಯಾಗಿ ಮಹಿಳೆಯೊಬ್ಬರು ಟ್ರಾಫಿಕ್​ನಲ್ಲಿ ಸಿಲುಕಿ ತರಕಾರಿ ಸುಲಿದಿದ್ದಾರೆ.

ಪ್ರಿಯಾ ಎಂಬ ಎಕ್ಸ್​​ ಬಳಕೆದಾರರೊಬ್ಬರು, ಟ್ರಾಫಿಕ್​ನಲ್ಲಿ ಸಿಲುಕಿದ್ದು, ಕಾರಿನಲ್ಲಿ ತರಕಾರಿಗಳ ಸಿಪ್ಪೆ ಸುಲಿಯುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ದಟ್ಟಣೆಯ ಟ್ರಾಫಿಕ್​​ ಸಮಯದಲ್ಲಿ ನಾವು  ಉತ್ಪಾದಕರಾಗಿರುವುದು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಗಣೇಶ ಚತುರ್ಥಿ: ಮೆಜೆಸ್ಟಿಕ್​​​ KSRTC ಬಸ್​​ ನಿಲ್ದಾಣದಲ್ಲಿ ಜನದಟ್ಟಣೆ, ಮೇಲ್ವಿಚಾರಣೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ

ಪ್ರಿಯಾ ಅವರು ಫೋಟೋವನ್ನು ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದ್ದು, ಸುಮಾರು 50,000 ವೀಕ್ಷಣೆ ಮತ್ತು ಸುಮಾರು 100 ಕಾಮೆಂಟ್​​​​ಗಳು ಬಂದಿವೆ. ಬೆಂಗಳೂರಿನ ದಟ್ಟಣೆಯ ಟ್ರಾಫಿಕ್​​ ಪ್ರಯಾಣಿಸುವಾಗ ಕಲಿವುದು, ಸಾಧಿಸುವುದು ಮತ್ತು ಬೆಳೆಯಲು ತುಂಬಾ ಇದೆ ಎಂದು ನೆಟ್ಟಿಗರೊಬ್ಬರು ಕಾಮೆಂಟ್​​​​ ಮಾಡಿದ್ದಾರೆ.

ಇನ್ನೊಬ್ಬ ಬಳಕೆದಾರರು, ಹಾಹಾ.. ಮೊಬೈಲ್ ಹೈಡ್ರೋಪೋನಿಕ್ಸ್ ಫಾರ್ಮ್​​ಗಳ ಕಲ್ಪನೆಯೊಂದಿಗೆ ಸ್ಟಾರ್ಟ್ ಅಪ್​​ ಕಂಪಗಳು ಬಂದರೂ ನನಗೆ ಆಶ್ಚರ್ಯವಾಗುವುದಿಲ್ಲ. ಬೆಂಗಳೂರಿನ ಈ ಟ್ರಾಫಿಕ್​ ನಡುವೆ ಸಿಲ್ಕ್ ಬೋರ್ಡ್​ನಿಂದ ಇಂದಿರಾನಗರವನ್ನು ತಲಪುವಷ್ಟರಲ್ಲಿ ಸಸ್ಯಗಳು ಬೆಳೆಯುತ್ತವೆ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಖರೀದಿ ಭರಾಟೆ ಜೋರು, ಗಗನಕ್ಕೆ ಏರಿದ ಹೂವು-ಹಣ್ಣು ಬೆಲೆ

ಸಮದ ಉಳಿತಾಯ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮುಂಬೈನ ಸ್ಥಳೀಯ ರೈಲುಗಳಲ್ಲಿ ಪ್ರಯಾಣದ ಸಮಯದಲ್ಲಿ ತರಕಾರಿಗಳ ಸಿಪ್ಪೆ ಸುಲಿಯುವುದು ಸಾಮಾನ್ಯ ಅಭ್ಯಾಸವಾಗಿದೆ ಎಂದು ಕೆಲವು ಬಳಕೆದಾರರು ತಿಳಿಸಿದ್ದಾರೆ.

ಕ್ಲಾಸಿಕ್​ ಮುಂಬೈ ರೈಲು ಚಟುವಟಿಕೆಗಳು ಅಂತಿಮವಾಗಿ ಬೆಂಗಳೂರಿಗೆ ಬಂದಿವೆ. ಇದು ಬೆಂಗಳೂರಿನ ಟ್ರಾಫಿಕ್​ಗೆ ಸಂಪೂರ್ಣ ಅರ್ಥವನ್ನು ನೀಡುತ್ತದೆ ಎಂದು ಬಳಕೆದಾರರು ಬರೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:18 am, Mon, 18 September 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ