AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಹೋಟೆಲ್​ವೊಂದರಲ್ಲಿ ಯುವತಿ ಮೇಲೆ ಅತ್ಯಾಚಾರ, ಕಾಂಗ್ರೆಸ್ ಮುಖಂಡನಿಗೆ ನೋಟಿಸ್

ಬೆಂಗಳೂರಿನ ಹೋಟೆಲ್​ವೊಂದರಲ್ಲಿ ಯುವತಿ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಕಾಂಗ್ರೆಸ್ ಮುಖಂಡನಿಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ನೀಡಿದ್ದಾರೆ.

ಬೆಂಗಳೂರಿನ ಹೋಟೆಲ್​ವೊಂದರಲ್ಲಿ ಯುವತಿ ಮೇಲೆ ಅತ್ಯಾಚಾರ, ಕಾಂಗ್ರೆಸ್ ಮುಖಂಡನಿಗೆ ನೋಟಿಸ್
ಕಬ್ಬನ್​ ಪಾರ್ಕ್​ ಪೊಲೀಸ್ ಠಾಣೆ
ಶಿವಪ್ರಸಾದ್​ ಬಿ.
| Edited By: |

Updated on: Sep 03, 2023 | 10:22 AM

Share

ಬೆಂಗಳೂರು, (ಸೆಪ್ಟೆಂಬರ್ 03): ಯುವತಿ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಕಾಂಗ್ರೆಸ್ ( telangana Congress0 ಮುಖಂಡನಿಗೆ ಕಬ್ಬನ್ ಪಾರ್ಕ್ ಪೊಲೀಸರು(cubbon park police) ನೋಟಿಸ್ ನೀಡಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸರು ತೆಲಂಗಾಣಕ್ಕೆ ತೆರಳಿ ವಿಚಾರಣೆಗೆ ಬರಲು ಕಾಂಗ್ರೆಸ್ ಮುಖಂಡ ಕುಂಬಂ ಶಿವಕುಮಾರ್ ರೆಡ್ಡಿಗೆ ನೋಟಿಸ್ ಕೊಟ್ಟಿದ್ದಾರೆ. ಬೆಂಗಳೂರಿನ ಹೋಟೆಲ್​ವೊಂದರಲ್ಲಿ ಜ್ಯೂಸ್​ನಲ್ಲಿ ಪ್ರಜ್ಞೆ ತಪ್ಪಿಸುವ ಔಷಧಿ ಬೆರೆಸಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದು, ಬಳಿಕ ವಿಡಿಯೋ ರಿಲೀಸ್​ ಮಾಡುವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ತೆಲಂಗಾಣದ ನಾರಾಯಣ್ ಪೇಟ್ ಕಾಂಗ್ರೆಸ್​ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ್ ರೆಡ್ಡಿ ವಿರುದ್ಧ ಬೆಂಗಳೂರಿನ ಕಬ್ಬನ್​ ಪಾರ್ಕ್​ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಸಂಬಂಧ ಕಬ್ಬನ್ ಪಾರ್ಕ್ ತೆಲಂಗಾಣಕ್ಕೆ ತೆರಳಿ ವಿಚಾರಣೆಗೆ ಹಾಜರಾಗುವಂತೆ ಶಿವಕುಮಾರ್ ರೆಡ್ಡಿಗೆ ನೋಟಿಸ್ ನೀಡಿದ್ದಾರೆ. ಆದ್ರೆ, ಶಿವಕುಮಾರ್ ರೆಡ್ಡಿ ವಿಚಾರಣೆ ಹಾಜರಾಗಲು ಒಂದು ವಾರ ಸಮಯ ಕೇಳಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ತೆಲಂಗಾಣ ಕಾಂಗ್ರೆಸ್​ ನಾಯಕನ ವಿರುದ್ಧ ಬೆಂಗಳೂರಲ್ಲಿ ಅತ್ಯಾಚಾರ ಪ್ರಕರಣ ದಾಖಲು

ಪ್ರಕರಣದ ಹಿನ್ನೆಲೆ

ತೆಲಂಗಾಣ ಕಾಂಗ್ರೆಸ್​ ಮುಖಂಡ, ನಾರಾಯಣ್ ಪೇಟ್ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ್ ರೆಡ್ಡಿ ಹಾಗೂ ಯುವತಿಯೋರ್ವಳ ಜತೆ ಸ್ನೇಹ ಬೆಳೆದಿತ್ತು. ಯುವತಿ ಜೊತೆ ಬೆಂಗಳೂರಿನ ಹೋಟೆಲ್​ವೊಂದರ ಕೊಠಡಿಯಲ್ಲಿ ಶಿವಕುಮಾರ್ ಉಳಿದುಕೊಂಡಿದ್ದರು. ಅದೇ ಸಂದರ್ಭದಲ್ಲಿ ಯುವತಿಯನ್ನು ಭೇಟಿಯಾಗುವುದಾಗಿ ಕರೆಯಿಸಿಕೊಂಡು ಬಳಿಕ ಜ್ಯೂಸ್​ನಲ್ಲಿ ಮತ್ತು ಬರಿಸುವ ಔಷಧಿ ಹಾಕಿ ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು ಅತ್ಯಾಚಾರದ ವೇಳೆ ಯುವತಿ ವಿಡಿಯೋಗಳನ್ನು ಚಿತ್ರೀಕರಿಸಿಕೊಂಡಿದ್ದು, ಅಲ್ಲದೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಈ ಬಗ್ಗೆ ಯುವತಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಈ ಸಂಬಂಧ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

2020ರಲ್ಲೂ ಸಹ ಈ ಕೆ.ಶಿವಕುಮಾರ ರೆಡ್ಡಿ ವಿರುದ್ಧ ತೆಲಂಗಾಣದ ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಾಗಿತ್ತು ಎಂದು ತಿಳಿದುಬಂದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?