AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಹೋಟೆಲ್​ವೊಂದರಲ್ಲಿ ಯುವತಿ ಮೇಲೆ ಅತ್ಯಾಚಾರ, ಕಾಂಗ್ರೆಸ್ ಮುಖಂಡನಿಗೆ ನೋಟಿಸ್

ಬೆಂಗಳೂರಿನ ಹೋಟೆಲ್​ವೊಂದರಲ್ಲಿ ಯುವತಿ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಕಾಂಗ್ರೆಸ್ ಮುಖಂಡನಿಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ನೀಡಿದ್ದಾರೆ.

ಬೆಂಗಳೂರಿನ ಹೋಟೆಲ್​ವೊಂದರಲ್ಲಿ ಯುವತಿ ಮೇಲೆ ಅತ್ಯಾಚಾರ, ಕಾಂಗ್ರೆಸ್ ಮುಖಂಡನಿಗೆ ನೋಟಿಸ್
ಕಬ್ಬನ್​ ಪಾರ್ಕ್​ ಪೊಲೀಸ್ ಠಾಣೆ
Follow us
Shivaprasad
| Updated By: ರಮೇಶ್ ಬಿ. ಜವಳಗೇರಾ

Updated on: Sep 03, 2023 | 10:22 AM

ಬೆಂಗಳೂರು, (ಸೆಪ್ಟೆಂಬರ್ 03): ಯುವತಿ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಕಾಂಗ್ರೆಸ್ ( telangana Congress0 ಮುಖಂಡನಿಗೆ ಕಬ್ಬನ್ ಪಾರ್ಕ್ ಪೊಲೀಸರು(cubbon park police) ನೋಟಿಸ್ ನೀಡಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸರು ತೆಲಂಗಾಣಕ್ಕೆ ತೆರಳಿ ವಿಚಾರಣೆಗೆ ಬರಲು ಕಾಂಗ್ರೆಸ್ ಮುಖಂಡ ಕುಂಬಂ ಶಿವಕುಮಾರ್ ರೆಡ್ಡಿಗೆ ನೋಟಿಸ್ ಕೊಟ್ಟಿದ್ದಾರೆ. ಬೆಂಗಳೂರಿನ ಹೋಟೆಲ್​ವೊಂದರಲ್ಲಿ ಜ್ಯೂಸ್​ನಲ್ಲಿ ಪ್ರಜ್ಞೆ ತಪ್ಪಿಸುವ ಔಷಧಿ ಬೆರೆಸಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದು, ಬಳಿಕ ವಿಡಿಯೋ ರಿಲೀಸ್​ ಮಾಡುವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ತೆಲಂಗಾಣದ ನಾರಾಯಣ್ ಪೇಟ್ ಕಾಂಗ್ರೆಸ್​ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ್ ರೆಡ್ಡಿ ವಿರುದ್ಧ ಬೆಂಗಳೂರಿನ ಕಬ್ಬನ್​ ಪಾರ್ಕ್​ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಸಂಬಂಧ ಕಬ್ಬನ್ ಪಾರ್ಕ್ ತೆಲಂಗಾಣಕ್ಕೆ ತೆರಳಿ ವಿಚಾರಣೆಗೆ ಹಾಜರಾಗುವಂತೆ ಶಿವಕುಮಾರ್ ರೆಡ್ಡಿಗೆ ನೋಟಿಸ್ ನೀಡಿದ್ದಾರೆ. ಆದ್ರೆ, ಶಿವಕುಮಾರ್ ರೆಡ್ಡಿ ವಿಚಾರಣೆ ಹಾಜರಾಗಲು ಒಂದು ವಾರ ಸಮಯ ಕೇಳಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ತೆಲಂಗಾಣ ಕಾಂಗ್ರೆಸ್​ ನಾಯಕನ ವಿರುದ್ಧ ಬೆಂಗಳೂರಲ್ಲಿ ಅತ್ಯಾಚಾರ ಪ್ರಕರಣ ದಾಖಲು

ಪ್ರಕರಣದ ಹಿನ್ನೆಲೆ

ತೆಲಂಗಾಣ ಕಾಂಗ್ರೆಸ್​ ಮುಖಂಡ, ನಾರಾಯಣ್ ಪೇಟ್ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ್ ರೆಡ್ಡಿ ಹಾಗೂ ಯುವತಿಯೋರ್ವಳ ಜತೆ ಸ್ನೇಹ ಬೆಳೆದಿತ್ತು. ಯುವತಿ ಜೊತೆ ಬೆಂಗಳೂರಿನ ಹೋಟೆಲ್​ವೊಂದರ ಕೊಠಡಿಯಲ್ಲಿ ಶಿವಕುಮಾರ್ ಉಳಿದುಕೊಂಡಿದ್ದರು. ಅದೇ ಸಂದರ್ಭದಲ್ಲಿ ಯುವತಿಯನ್ನು ಭೇಟಿಯಾಗುವುದಾಗಿ ಕರೆಯಿಸಿಕೊಂಡು ಬಳಿಕ ಜ್ಯೂಸ್​ನಲ್ಲಿ ಮತ್ತು ಬರಿಸುವ ಔಷಧಿ ಹಾಕಿ ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು ಅತ್ಯಾಚಾರದ ವೇಳೆ ಯುವತಿ ವಿಡಿಯೋಗಳನ್ನು ಚಿತ್ರೀಕರಿಸಿಕೊಂಡಿದ್ದು, ಅಲ್ಲದೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಈ ಬಗ್ಗೆ ಯುವತಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಈ ಸಂಬಂಧ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

2020ರಲ್ಲೂ ಸಹ ಈ ಕೆ.ಶಿವಕುಮಾರ ರೆಡ್ಡಿ ವಿರುದ್ಧ ತೆಲಂಗಾಣದ ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಾಗಿತ್ತು ಎಂದು ತಿಳಿದುಬಂದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ