AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಹೋಟೆಲ್​ವೊಂದರಲ್ಲಿ ಯುವತಿ ಮೇಲೆ ಅತ್ಯಾಚಾರ, ಕಾಂಗ್ರೆಸ್ ಮುಖಂಡನಿಗೆ ನೋಟಿಸ್

ಬೆಂಗಳೂರಿನ ಹೋಟೆಲ್​ವೊಂದರಲ್ಲಿ ಯುವತಿ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಕಾಂಗ್ರೆಸ್ ಮುಖಂಡನಿಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ನೀಡಿದ್ದಾರೆ.

ಬೆಂಗಳೂರಿನ ಹೋಟೆಲ್​ವೊಂದರಲ್ಲಿ ಯುವತಿ ಮೇಲೆ ಅತ್ಯಾಚಾರ, ಕಾಂಗ್ರೆಸ್ ಮುಖಂಡನಿಗೆ ನೋಟಿಸ್
ಕಬ್ಬನ್​ ಪಾರ್ಕ್​ ಪೊಲೀಸ್ ಠಾಣೆ
Shivaprasad B
| Edited By: |

Updated on: Sep 03, 2023 | 10:22 AM

Share

ಬೆಂಗಳೂರು, (ಸೆಪ್ಟೆಂಬರ್ 03): ಯುವತಿ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಕಾಂಗ್ರೆಸ್ ( telangana Congress0 ಮುಖಂಡನಿಗೆ ಕಬ್ಬನ್ ಪಾರ್ಕ್ ಪೊಲೀಸರು(cubbon park police) ನೋಟಿಸ್ ನೀಡಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸರು ತೆಲಂಗಾಣಕ್ಕೆ ತೆರಳಿ ವಿಚಾರಣೆಗೆ ಬರಲು ಕಾಂಗ್ರೆಸ್ ಮುಖಂಡ ಕುಂಬಂ ಶಿವಕುಮಾರ್ ರೆಡ್ಡಿಗೆ ನೋಟಿಸ್ ಕೊಟ್ಟಿದ್ದಾರೆ. ಬೆಂಗಳೂರಿನ ಹೋಟೆಲ್​ವೊಂದರಲ್ಲಿ ಜ್ಯೂಸ್​ನಲ್ಲಿ ಪ್ರಜ್ಞೆ ತಪ್ಪಿಸುವ ಔಷಧಿ ಬೆರೆಸಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದು, ಬಳಿಕ ವಿಡಿಯೋ ರಿಲೀಸ್​ ಮಾಡುವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ತೆಲಂಗಾಣದ ನಾರಾಯಣ್ ಪೇಟ್ ಕಾಂಗ್ರೆಸ್​ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ್ ರೆಡ್ಡಿ ವಿರುದ್ಧ ಬೆಂಗಳೂರಿನ ಕಬ್ಬನ್​ ಪಾರ್ಕ್​ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಸಂಬಂಧ ಕಬ್ಬನ್ ಪಾರ್ಕ್ ತೆಲಂಗಾಣಕ್ಕೆ ತೆರಳಿ ವಿಚಾರಣೆಗೆ ಹಾಜರಾಗುವಂತೆ ಶಿವಕುಮಾರ್ ರೆಡ್ಡಿಗೆ ನೋಟಿಸ್ ನೀಡಿದ್ದಾರೆ. ಆದ್ರೆ, ಶಿವಕುಮಾರ್ ರೆಡ್ಡಿ ವಿಚಾರಣೆ ಹಾಜರಾಗಲು ಒಂದು ವಾರ ಸಮಯ ಕೇಳಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ತೆಲಂಗಾಣ ಕಾಂಗ್ರೆಸ್​ ನಾಯಕನ ವಿರುದ್ಧ ಬೆಂಗಳೂರಲ್ಲಿ ಅತ್ಯಾಚಾರ ಪ್ರಕರಣ ದಾಖಲು

ಪ್ರಕರಣದ ಹಿನ್ನೆಲೆ

ತೆಲಂಗಾಣ ಕಾಂಗ್ರೆಸ್​ ಮುಖಂಡ, ನಾರಾಯಣ್ ಪೇಟ್ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ್ ರೆಡ್ಡಿ ಹಾಗೂ ಯುವತಿಯೋರ್ವಳ ಜತೆ ಸ್ನೇಹ ಬೆಳೆದಿತ್ತು. ಯುವತಿ ಜೊತೆ ಬೆಂಗಳೂರಿನ ಹೋಟೆಲ್​ವೊಂದರ ಕೊಠಡಿಯಲ್ಲಿ ಶಿವಕುಮಾರ್ ಉಳಿದುಕೊಂಡಿದ್ದರು. ಅದೇ ಸಂದರ್ಭದಲ್ಲಿ ಯುವತಿಯನ್ನು ಭೇಟಿಯಾಗುವುದಾಗಿ ಕರೆಯಿಸಿಕೊಂಡು ಬಳಿಕ ಜ್ಯೂಸ್​ನಲ್ಲಿ ಮತ್ತು ಬರಿಸುವ ಔಷಧಿ ಹಾಕಿ ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು ಅತ್ಯಾಚಾರದ ವೇಳೆ ಯುವತಿ ವಿಡಿಯೋಗಳನ್ನು ಚಿತ್ರೀಕರಿಸಿಕೊಂಡಿದ್ದು, ಅಲ್ಲದೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಈ ಬಗ್ಗೆ ಯುವತಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಈ ಸಂಬಂಧ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

2020ರಲ್ಲೂ ಸಹ ಈ ಕೆ.ಶಿವಕುಮಾರ ರೆಡ್ಡಿ ವಿರುದ್ಧ ತೆಲಂಗಾಣದ ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಾಗಿತ್ತು ಎಂದು ತಿಳಿದುಬಂದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ