Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿ ಕೃತ್ಯ: ಬಸ್​ನಲ್ಲಿ ಮಹಿಳೆ ಮೇಲೆ ಅತ್ಯಾಚಾರ

ನಿನ್ನೆ (ನ.29) ಚಂದ್ರಾಲೇಔಟ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸಂಜೆ 5.30ರ ಸುಮಾರಿಗೆ ಬಸ್​​ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿ ಕೃತ್ಯ: ಬಸ್​ನಲ್ಲಿ ಮಹಿಳೆ ಮೇಲೆ ಅತ್ಯಾಚಾರ
ಅತ್ಯಾಚಾರವೆಸಗಿದ ಆರೋಪಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Nov 30, 2022 | 7:36 PM

ಬೆಂಗಳೂರು: ರಾಜ್ಯ ರಾಜಧಾನಿ ತೆಲೆತಗ್ಗಿಸುವಂತಹ ಘಟನೆ ನಡೆದಿದೆ. ಅಪರಾಧ ಕೃತ್ಯಗಳು ಎಗ್ಗಿಲ್ಲದಂತೆ ನಡೆಯುತ್ತಿವೆ. ನಿನ್ನೆ (ನ.29) ರಂದು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ನಡೆದಿತ್ತು. ಇದು ಮಾಸುವ ಮುನ್ನವೇ ಮತ್ತೊಂದು ಅತ್ಯಾಚಾರ (Rape) ಪ್ರಕರಣ ಬೆಳಕಿಗೆ ಬಂದಿದೆ. ಇದು ಕೂಡ ನಿನ್ನೆ ಚಂದ್ರಾಲೇಔಟ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸಂಜೆ 5.30ರ ಸುಮಾರಿಗೆ ಬಸ್​​ನಲ್ಲಿ (Bus) ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ.

ಮಹಿಳೆ ಬಸ್​​ಗಾಗಿ ನಾಯಂಡಹಳ್ಳಿ ಸಮೀಪ ಕಾಯುತ್ತ ನಿಂತಿದ್ದಳು. ಈ ವೇಳೆ ಅತ್ಯಚಾರವೆಸಗಿದ ಆರೋಪಿ ಶಿವಕುಮಾರ್​ ಶಾಲಾ ಬಸ್​ ಚಲಾಯಿಸಿಕೊಂಡು ಬಂದಿದ್ದಾನೆ. ಆರೋಪಿ ಶಿವಕುಮಾರ್​​ಗೆ ಮಹಿಳೆ ಪರಿಚವಿದ್ದಿದ್ದರಿಂದ ಡ್ರಾಪ್​ ಕೊಡುತ್ತೇನೆ ಎಂದು ಹೇಳಿದ್ದಾನೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ರ‍್ಯಾಪಿಡೋ ರೈಡ್ ಬುಕ್ ಮಾಡಿ ಮನೆಗೆ ಹೊರಟಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಹೀಗಾಗಿ ಮಹಿಳೆ ಆರೋಪಿಯ ಬಸ್​ನಲ್ಲಿ ಹೋಗಿದ್ದಾಳೆ. ಆರೋಪಿ ಶಿವಕುಮಾರ್​ ಮಹಿಳೆಯನ್ನು ನಾಗರಬಾವಿ ಸರ್ವಿಸ್​ ರಸ್ತೆಗೆ ಕರೆದೊಯ್ದ ಅತ್ಯಾಚಾರವೆಸಗಿದ್ದಾನೆ. ಘಟನೆ ಬಳಿಕ ಮಹಿಳೆ ಪುತ್ರನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾಳೆ.

ಸ್ಥಳಕ್ಕೆ ಬಂದ ಮಹಿಳೆ ಪುತ್ರ ಆರೋಪಿ ಶಿವಕುಮಾರ್​ಗೆ ಥಳಿಸಿದ್ದಾನೆ. ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚಂದ್ರಲೇಔಟ್​ ಪೊಲೀಸರು ಆರೋಪಿ ಶಿವಕುಮಾರ್​ನನ್ನು ಬಂಧಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ
ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ