AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿ ಕೃತ್ಯ: ಬಸ್​ನಲ್ಲಿ ಮಹಿಳೆ ಮೇಲೆ ಅತ್ಯಾಚಾರ

ನಿನ್ನೆ (ನ.29) ಚಂದ್ರಾಲೇಔಟ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸಂಜೆ 5.30ರ ಸುಮಾರಿಗೆ ಬಸ್​​ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿ ಕೃತ್ಯ: ಬಸ್​ನಲ್ಲಿ ಮಹಿಳೆ ಮೇಲೆ ಅತ್ಯಾಚಾರ
ಅತ್ಯಾಚಾರವೆಸಗಿದ ಆರೋಪಿ
TV9 Web
| Edited By: ವಿವೇಕ ಬಿರಾದಾರ|

Updated on: Nov 30, 2022 | 7:36 PM

Share

ಬೆಂಗಳೂರು: ರಾಜ್ಯ ರಾಜಧಾನಿ ತೆಲೆತಗ್ಗಿಸುವಂತಹ ಘಟನೆ ನಡೆದಿದೆ. ಅಪರಾಧ ಕೃತ್ಯಗಳು ಎಗ್ಗಿಲ್ಲದಂತೆ ನಡೆಯುತ್ತಿವೆ. ನಿನ್ನೆ (ನ.29) ರಂದು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ನಡೆದಿತ್ತು. ಇದು ಮಾಸುವ ಮುನ್ನವೇ ಮತ್ತೊಂದು ಅತ್ಯಾಚಾರ (Rape) ಪ್ರಕರಣ ಬೆಳಕಿಗೆ ಬಂದಿದೆ. ಇದು ಕೂಡ ನಿನ್ನೆ ಚಂದ್ರಾಲೇಔಟ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸಂಜೆ 5.30ರ ಸುಮಾರಿಗೆ ಬಸ್​​ನಲ್ಲಿ (Bus) ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ.

ಮಹಿಳೆ ಬಸ್​​ಗಾಗಿ ನಾಯಂಡಹಳ್ಳಿ ಸಮೀಪ ಕಾಯುತ್ತ ನಿಂತಿದ್ದಳು. ಈ ವೇಳೆ ಅತ್ಯಚಾರವೆಸಗಿದ ಆರೋಪಿ ಶಿವಕುಮಾರ್​ ಶಾಲಾ ಬಸ್​ ಚಲಾಯಿಸಿಕೊಂಡು ಬಂದಿದ್ದಾನೆ. ಆರೋಪಿ ಶಿವಕುಮಾರ್​​ಗೆ ಮಹಿಳೆ ಪರಿಚವಿದ್ದಿದ್ದರಿಂದ ಡ್ರಾಪ್​ ಕೊಡುತ್ತೇನೆ ಎಂದು ಹೇಳಿದ್ದಾನೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ರ‍್ಯಾಪಿಡೋ ರೈಡ್ ಬುಕ್ ಮಾಡಿ ಮನೆಗೆ ಹೊರಟಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಹೀಗಾಗಿ ಮಹಿಳೆ ಆರೋಪಿಯ ಬಸ್​ನಲ್ಲಿ ಹೋಗಿದ್ದಾಳೆ. ಆರೋಪಿ ಶಿವಕುಮಾರ್​ ಮಹಿಳೆಯನ್ನು ನಾಗರಬಾವಿ ಸರ್ವಿಸ್​ ರಸ್ತೆಗೆ ಕರೆದೊಯ್ದ ಅತ್ಯಾಚಾರವೆಸಗಿದ್ದಾನೆ. ಘಟನೆ ಬಳಿಕ ಮಹಿಳೆ ಪುತ್ರನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾಳೆ.

ಸ್ಥಳಕ್ಕೆ ಬಂದ ಮಹಿಳೆ ಪುತ್ರ ಆರೋಪಿ ಶಿವಕುಮಾರ್​ಗೆ ಥಳಿಸಿದ್ದಾನೆ. ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚಂದ್ರಲೇಔಟ್​ ಪೊಲೀಸರು ಆರೋಪಿ ಶಿವಕುಮಾರ್​ನನ್ನು ಬಂಧಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’