AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Golden Hour ಎಂಬ ಅಮೂಲ್ಯ ಕ್ಷಣವೂ ಇಲ್ಲದಂತೆ ಹಾರಿಹೋದ ಪ್ರಾಣಪಕ್ಷಿ! ಬೈಯಪ್ಪನಹಳ್ಳಿ ಜಿಮ್‌ನಲ್ಲಿ ಕುಸಿದುಬಿದ್ದು ಮಹಿಳೆ ಸಾವು

ಜಿಮ್ ವರ್ಕೌಟ್ ಮಾಡುವಾಗ ಕುಸಿದು ಬಿದ್ದಿದ್ದ ವಿನಯ ಕುಮಾರಿ ಎಂಬ 44 ವರ್ಷದ ಮಹಿಳೆ ಆಸ್ಪತ್ರೆಗೆ ಸಾಗಿಸುವ ವೇಳೆ ಕೊನೆಯುಸಿರೆಳೆದಿದ್ದಾರೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Golden Hour ಎಂಬ ಅಮೂಲ್ಯ ಕ್ಷಣವೂ ಇಲ್ಲದಂತೆ ಹಾರಿಹೋದ ಪ್ರಾಣಪಕ್ಷಿ! ಬೈಯಪ್ಪನಹಳ್ಳಿ ಜಿಮ್‌ನಲ್ಲಿ ಕುಸಿದುಬಿದ್ದು ಮಹಿಳೆ ಸಾವು
ಜಿಮ್‌ನಲ್ಲಿ ವರ್ಕೌಟ್ ವೇಳೆ ಕುಸಿದುಬಿದ್ದು ಮಹಿಳೆ ಸಾವು
TV9 Web
| Updated By: ಸಾಧು ಶ್ರೀನಾಥ್​

Updated on:Mar 26, 2022 | 4:20 PM

Share

ಬೆಂಗಳೂರು: ಜಿಮ್‌ನಲ್ಲಿ ಕಸರತ್ತು ಮಾಡುವ ವೇಳೆ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಕುಸಿದುಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಆತಂಕಕಾರಿ ಘಟನೆ ಬೆಂಗಳೂರಿನ ಮಲ್ಲೇಶಪಾಳ್ಯದ ಜಿಮ್‌ನಲ್ಲಿ ನಡೆದಿದೆ. ಜಿಮ್ ವರ್ಕೌಟ್ ಮಾಡುವಾಗ (Gym workout) ಕುಸಿದು ಬಿದ್ದಿದ್ದ ವಿನಯ ಕುಮಾರಿ ಎಂಬ 35 ವರ್ಷದ ಮಹಿಳೆ ಆಸ್ಪತ್ರೆಗೆ ಸಾಗಿಸುವ ವೇಳೆ ಕೊನೆಯುಸಿರೆಳೆದಿದ್ದಾರೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ (Baiyappanahalli).

Golden Hour ಎಂಬ ಅಮೂಲ್ಯ ಕ್ಷಣವೂ ಇಲ್ಲದಂತೆ ಹಾರಿಹೋದ ಪ್ರಾಣಪಕ್ಷಿ! ವಿನಯಕುಮಾರಿ ಅವಿವಾಹಿತರು. ಜಿಮ್ ಮತ್ತು ಡ್ಯಾನ್ಸ್ ಹವ್ಯಾಸವಾಗಿ ಮಾಡ್ಕೊಂಡಿದ್ದರು. ವಿನಯಕುಮಾರಿ ಅವರ ಮೃತದೇಹ ಸಿ.ವಿ. ರಾಮನ್ ನಗರ ಆಸ್ಪತ್ರೆಯಲ್ಲಿದೆ. ಘಟನೆಯ ಸಿಸಿಟಿವಿ ದೃಶ್ಯ ಟಿವಿ9 ಗೆ ಲಭ್ಯವಾಗಿದ್ದು, ಅದರಲ್ಲಿ ವಿನಯ ಕುಮಾರಿ ಬಾರ್​ ಮಾಡುತ್ತ ಮಾಡುತ್ತಲೇ ಕುಸಿದುಬೀಳುವ ಆಘಾತಕಾರಿ ದೃಶ್ಯ ಸಾದ್ಯಂತವಾಗಿ ಸೆರೆಯಾಗಿದೆ.

ಆಘಾತಕಾರಿಯೆಂದರೆ ವಿನಯ ಕುಮಾರಿ ಎಂದಿನಂತೆ ಸಾಮಾನ್ಯವಾಗಿ ಜಿಮ್​ ಬಾರ್​ ಮಾಡುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಅವರ ಅರಿವಿಗೂ ಬಾರದಂತೆ ಹಿಂದಕ್ಕೆ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಜಿಮ್​ನಲ್ಲಿದ್ದವರೆಲ್ಲಾ ಬಂದು ಅವರಿಗೆ ಆರೈಕೆ ಮಾಡಿದ್ದಾರೆ. ಮತ್ತು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇಲ್ಲಿ ಗೋಲಗ್ಡನ್​ ಅವರ್​ ಎಂಬ ಅಮೂಲ್ಯ ಕ್ಷಣವೂ ಇಲ್ಲದಂತೆ ಆಕೆಯ ಪ್ರಾಣಪಕ್ಷಿ ಹಾರಿಹೋಗಿದೆ.

ಮೃತ ಯುವತಿ ಮೂಲತಃ ಮಂಗಳೂರು ನಿವಾಸಿ: ಮೃತ ಯುವತಿ ಮೂಲತಃ ಮಂಗಳೂರು ನಿವಾಸಿ. ಖಾಸಗಿ ಕಂಪೆನಿಯಲ್ಲಿ ಬ್ಯಾಕ್​​ ಗ್ರೌಂಡ್ ವೆರಿಫಿಕೇಷನ್ ಅಫೀಸರ್ ಆಗಿ ಕೆಲಸ ಮಾಡ್ತಿದ್ದರು. 35 ವರ್ಷದ ಅವಿವಾಹಿತ ವಿನಯ ಕುಮಾರಿ ಮಲ್ಲೇಶಪಾಳ್ಯದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಕಳೆದು ಎರಡು ವರ್ಷಗಳಿಂದ ಜಿಮ್ ನಲ್ಲಿ ವರ್ಕ್ ಔಟ್ ಮಾಡ್ತಿದ್ದ ವಿನಯ ಕುಮಾರಿ ಬೆಳಗ್ಗೆ ವೇಳೆ ಜಿಮ್ ನಲ್ಲಿ ವರ್ಕ್ ಔಟ್ ಮಾಡಿ, ಕೆಲಸಕ್ಕೆ ತೆರಳುತ್ತಿದ್ದರು.

ವರ್ಕೌಟ್ ಮಾಡುವಾಗ ಕುಸಿದು ಬಿದ್ದಿದ್ದ ವಿನಯ ಕುಮಾರಿ ಸಾವು

Published On - 3:09 pm, Sat, 26 March 22

ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!